Sharan; ‘ಅವತಾರ್‌ ಪುರುಷ-2’ ಮೇಲೆ ಶರಣ್‌ ನಿರೀಕ್ಷೆ


Team Udayavani, Mar 10, 2024, 2:59 PM IST

Sharan; ‘ಅವತಾರ್‌ ಪುರುಷ-2’ ಮೇಲೆ ಶರಣ್‌ ನಿರೀಕ್ಷೆ

ಪುಷ್ಕರ್‌ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್‌ ಸುನಿ ನಿರ್ದೇಶನದ ಹಾಗೂ ಶರಣ್‌ ನಾಯಕರಾಗಿ ನಟಿಸಿರುವ “ಅವತಾರ ಪುರುಷ-2′ ಚಿತ್ರ ಮಾರ್ಚ್‌ 22 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಇತ್ತೀಚೆಗೆ ಚಿತ್ರತಂಡ ಮಾಧ್ಯಮ ಮುಂದೆ ಬಂದು ಚಿತ್ರದ ಬಗೆಗಿನ ಮಾಹಿತಿ ನೀಡಿತು.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಸಿಂಪಲ್‌ ಸುನಿ, “ಎರಡು ವರ್ಷಗಳಿಂದ ಸ್ನೇಹಿತರು ಹಾಗೂ ಅಭಿಮಾನಿಗಳು ಅವತಾರ ಪುರುಷ 2 ಯಾವಾಗ ರಿಲೀಸ್‌? ಎಂದು. ಈಗ ನಮ್ಮ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರ ಇದೇ 22ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಮೊದಲ ಭಾಗ ನೋಡಿದವರಿಗೂ ಹಾಗೂ ನೋಡದವರಿಗೂ ಈ ಚಿತ್ರ ಇಷ್ಟವಾಗುವುದಂತು ಖಂಡಿತ. ಅಂತಹ ಉತ್ತಮ ಮನರಂಜನಾ ಅಂಶವಿರುವ ಚಿತ್ರವಿದು. ಶರಣ್‌ ಅವರು ನಾಯಕ ನಾಗಿ, ಆಶಿಕಾ ರಂಗನಾಥ್‌ ನಾಯಕಿಯಾಗಿ ನಟಿಸಿದ್ದಾರೆ. ಕುಮಾರ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಕಾಣಿಸಿ ಕೊಂಡಿದ್ದಾರೆ. ಸಾಯಿಕುಮಾರ್‌, ಸಾಧುಕೋಕಿಲ, ಸುಧಾ ರಾಣಿ, ಭವ್ಯ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಲಾವಿದರ ಹಾಗೂ ತಾಂತ್ರಿಕವರ್ಗದವರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ’ ಎಂದರು.

“ಈ ಚಿತ್ರವನ್ನು ಮೋಹನ್‌ ಅವರು ಚಿತ್ರದ ವಿತರಣೆ ಮಾಡುತ್ತಿದ್ದಾರೆ. ನೋಡುಗರಿಗೆ ಈ ಚಿತ್ರ ಮನರಂಜನೆ ನೀಡುವುದು ಖಚಿತ’ ಎನ್ನುವುದು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ.

“ನನ್ನನ್ನು ಕೂಡ ಬಹಳಷ್ಟು ಜನ ಅವತಾರ ಪುರುಷ 2 ಯಾವಾಗ ಬಿಡುಗಡೆಯಾಗುತ್ತದೆ? ಎಂದು ಕೇಳುತ್ತಿದ್ದರು. ಚಿತ್ರದ ಎರಡನೇ ಭಾಗ ಇಷ್ಟು ಕುತೂಹಲ ಹುಟ್ಟಿಸಿದೆ ಎಂದರೆ ನಿಜಕ್ಕೂ ಮೊದಲ ಭಾಗ ಎಲ್ಲರಿಗೂ ಇಷ್ಟವಾಗಿದೆ ಎಂದು ಅರ್ಥ. ನಾನು, ನನ್ನ ಯಾವ ಸಿನಿಮಾವನ್ನು ಮೊದಲು ನೋಡುವುದಿಲ್ಲ. ಅಭಿಮಾನಿಗಳ ಜೊತೆಗೆ ಚಿತ್ರಮಂದಿರದಲ್ಲೇ ನೋಡುತ್ತೇನೆ. ಈ ಚಿತ್ರವನ್ನು ನೋಡಲು ನಾನು ಸಹ ಕಾತುರದಿಂದ ಕಾಯುತ್ತಿದ್ದೇನೆ. ಕೆಲವರು ಚಿತ್ರ ಸ್ವಲ್ಪ ತಡವಾಯಿತು ಎನ್ನುತ್ತಿದ್ದಾರೆ. ಮೊದಲ ಭಾಗ 2022 ರಲ್ಲಿ. ಎರಡನೇ ಭಾಗ 2024 ರ ಮಾರ್ಚ್‌ 22ರಂದು ತೆರೆಕಾಣುತ್ತಿದೆ’ ಎನ್ನುವುದು ಶರಣ್‌ ಮಾತು.

“ಬಹಳ ದಿನಗಳ ನಂತರ ನನ್ನ ಅಭಿನಯದ ಕನ್ನಡ ಚಿತ್ರ ಬಿಡುಗಡೆಯಾಗುತ್ತಿದೆ. ಒಳ್ಳೆಯ ತಂಡದೊಂದಿಗೆ ಚಿತ್ರ ಮಾಡಿರುವ ಖುಷಿಯಿದೆ. ದಯವಿಟ್ಟು ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ’ ಎಂದರು ನಟಿ ಆಶಿಕಾ ರಂಗನಾಥ್‌. ನಟ ಶ್ರೀನಗರ ಕೊಟ್ಟಿ ಕೂಡಾ ಮಾತನಾಡಿದರು.

ಟಾಪ್ ನ್ಯೂಸ್

16-brahmavara

Bramavara: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

15-belthanagdy

ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ; ಪಶು ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲು

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

14-basrur

Road Mishap; ಬಳ್ಕೂರು: ಸ್ಕೂಟರ್‌ಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Is he an astrologer?; Priyanka Gandhi on Pm Modi;s remarks

Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಕುಂಟೆಬಿಲ್ಲೆ ಮುಹೂರ್ತ

Sandalwood: ಕುಂಟೆಬಿಲ್ಲೆ ಮುಹೂರ್ತ

13

Entha Kathe Maraya: ಓಟಿಟಿಯಲ್ಲಿ ಎಂಥಾ ಕಥೆ ಮಾರಾಯ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

Koti Movie: ʼಕೋಟಿʼ ಮೊದಲ ಹಾಡು ಬಂತು

Koti Movie: ʼಕೋಟಿʼ ಮೊದಲ ಹಾಡು ಬಂತು

Sandalwood: ʼದಿ ಜಡ್ಜ್ ಮೆಂಟ್‌ʼ; ಇದು ಮಾಮೂಲಿ ಸಿನಿಮಾ ಅಲ್ಲ

Sandalwood: ʼದಿ ಜಡ್ಜ್ ಮೆಂಟ್‌ʼ; ಇದು ಮಾಮೂಲಿ ಸಿನಿಮಾ ಅಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

16-brahmavara

Bramavara: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

15-belthanagdy

ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ; ಪಶು ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲು

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

14-basrur

Road Mishap; ಬಳ್ಕೂರು: ಸ್ಕೂಟರ್‌ಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು

13-uv-fusion

Dance: ಬಸಣ್ಣನ ಡ್ಯಾನ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.