Anegundi Utsav ಚಾಲನೆ; ಪೊಲೀಸರ ನಿರ್ಬಂಧ: ಪ್ರೇಕ್ಷಕರ ಕೊರತೆ
Team Udayavani, Mar 12, 2024, 12:07 AM IST
ಗಂಗಾವತಿ: ಪೊಲೀಸರ ನಿರ್ಬಂಧ ದಿಂದಾಗಿ ಆನೆಗೊಂದಿ ಉತ್ಸವದ ರಾಜಾ ಶ್ರೀರಂಗದೇವರಾಯಲು ವೇದಿಕೆಯಲ್ಲಿ ಪ್ರೇಕ್ಷಕರ ಕೊರತೆಯಿಂದಾಗಿ ಉತ್ಸವದ ಉದ್ಘಾಟನೆ ಮೂರು ತಾಸು ತಡವಾಗಿ ಆರಂಭವಾಯಿತು.
ಪ್ರೇಕ್ಷಕರು ಕುಳಿತುಕೊಳ್ಳಲು ಸುಮಾರು 20 ಸಾವಿರ ಕುರ್ಚುಗಳನ್ನು ಹಾಕಲಾಯಿತು. ಬಳ್ಳಾರಿ, ರಾಯಚೂರು ಜಿಲ್ಲೆಯಿಂದ ನಿಯೋಜನೆಗೊಂಡಿದ್ದ ಪೊಲೀಸರು, ಇನ್ಸ್ಪೆಕ್ಟರ್ ಗಳು ಪಾಸ್ ಇದ್ದವರನ್ನು ಮಾತ್ರ ಒಳಗೆ ಬಿಟ್ಟು ಪಾಸ್ ಇಲ್ಲದವರನ್ನು ವಾಪಸ್ ಕಳಿಸಿದ್ದರಿಂದ ಜನರು ವೇದಿಕೆ ಮುಂಭಾಗದ ರಸ್ತೆಯಲ್ಲಿ ನಿಂತಿದ್ದರಿಂದ ಪ್ರೇಕ್ಷಕರ ಕೊರತೆಯಾಯಿತು. ಬೆರಳೆಣಿಕೆಯಷ್ಟು ಪ್ರೇಕ್ಷಕರನ್ನು ಕಂಡ ಶಾಸಕ ಗಾಲಿ ಜನಾರ್ದನರೆಡ್ಡಿ ಆಪ್ತರು ಗಲಿಬಿಲಿಗೊಂಡ ಜಿಲ್ಲಾಧಿಕಾರಿ, ಎಸ್ಪಿಯವರ ಮನವರಿಕೆ ಮಾಡಿದರು. ನಂತರ ಮಾಧ್ಯಮ ಹಾಗೂ ಗಣ್ಯರ ಆಸನ ಹೊರತುಪಡಿಸಿ ಉಳಿದ ಕುರ್ಚಿಗಳಲ್ಲಿ ಪ್ರೇಕ್ಷಕರು ಕುಳಿತುಕೊಳ್ಳಲು ಸ್ಥಳೀಯ ಪೊಲೀಸರು ವ್ಯವಸ್ಥೆ ಮಾಡಿದರು. ಮೂರು ತಾಸಿನ ನಂತರ ಪ್ರೇಕ್ಷಕರು ಆಗಮಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿ ವೇದಿಕೆ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು
ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ
ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!
3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ
Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಹಜೀವ ದಹನ
Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ
Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್ಬಾಲ್ನ ತೆಂಡುಲ್ಕರ್ ಚೆಟ್ರಿ
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ