MC Stan: 9 ಮಿಲಿಯನ್ ಫಾಲೋವರ್ಸ್ಯಿದ್ದ ಬಿಗ್ ಬಾಸ್ ವಿಜೇತನ ಯೂಟ್ಯೂಬ್ ಚಾನೆಲ್ ಹ್ಯಾಕ್
Team Udayavani, Mar 12, 2024, 3:41 PM IST
ಮುಂಬಯಿ: ಬಿಗ್ ಬಾಸ್ 16 ವಿಜೇತ ಖ್ಯಾತ ರ್ಯಾಪರ್ ಎಂಸಿ ಸ್ಟಾನ್ ತನ್ನ ಯೂಟ್ಯೂಬ್ ಚಾನೆಲ್ ಹ್ಯಾಕ್ ಆಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.
ತನ್ನ ರ್ಯಾಪ್ ಹಾಡುಗಳಿಂದಲೇ ಲಕ್ಷಾಂತರ ಹಿಂಬಾಲಕರನ್ನು ಪಡೆದಿರುವ ಸ್ಟಾನ್ , ಸಲ್ಮಾನ್ ಖಾನ್ ಅವರ ಬಿಗ್ ಬಾಸ್ 16 ಕಾರ್ಯಕ್ರಮದಲ್ಲಿ ಭಾಗಿಯಾಗಿ, ವಿಜೇತರಾಗಿ ಹೊರಹೊಮ್ಮಿದ್ದರು. ಆ ಮೂಲಕ ಅವರಿಗೆ ಮತ್ತಷ್ಟು ಜನಪ್ರಿಯತೆ ಸಿಕ್ಕಿದೆ. ಎಂಸಿ ಸ್ಟಾನ್ ಅವರ ಯೂಟ್ಯೂಬ್ ಚಾನೆಲ್ ನಲ್ಲಿ 9.38 ಮಿಲಿಯನ್ ಸಬ್ ಸ್ಕ್ರೈಬರ್ಸ್ ಗಳಿದ್ದಾರೆ.
ಸ್ಟಾನ್ ಅವರ ಯೂಟ್ಯೂಬ್ ಚಾನೆಲ್ ಹ್ಯಾಕರ್ಸ್ ಗಳು ಹ್ಯಾಕ್ ಮಾಡಿದ್ದು, ಬಿಟ್ ಕಾಯಿನ್ ಸಂಬಂಧಿತ ವಿಡಿಯೋಗಳನ್ನು ಆಪ್ಲೋಡ್ ಮಾಡಿದ್ದಾರೆ. ಈ ಕುರಿತು ಎಂಸಿ ಸ್ಟಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.
“ಫ್ಯಾಮ್, ನನ್ನ ಯೂಟ್ಯೂಬ್ ಚಾನೆಲ್ ಅನ್ನು ಯಾರೋ ಹ್ಯಾಕ್ ಮಾಡಿದ್ದಾರೆ. ಸಮಸ್ಯೆ ಏನೆಂದು ನನಗೆ ಗೊತ್ತಿಲ್ಲ. ದಯವಿಟ್ಟು ಸ್ವಲ್ಪ ತಾಳ್ಮೆಯಿಂದಿರಿ” ಎಂದು ಬರೆದುಕೊಂಡಿದ್ದಾರೆ.
ಅವರ ಯೂಟ್ಯೂಬ್ ಚಾನೆಲ್ ನಲ್ಲಿ ಹಾಕಿರುವ ವಿಡಿಯೋದಲ್ಲಿ ಕ್ಯೂಆರ್ ಕೋಡ್ ನ್ನು ಹಾಕಲಾಗಿದೆ. ಈ ಕುರಿತು ಎಂಸಿ ಸ್ಟಾನ್ “QR ಕೋಡ್ ಅನ್ನು ಸ್ಕ್ಯಾನ್ ಮಾಡಬೇಡಿ ಮತ್ತು ಯಾವುದೇ ಲಿಂಕ್ಗಳನ್ನು ಕ್ಲಿಕ್ ಮಾಡಬೇಡಿ, ನಿಮಗೆ ಗೊತ್ತಿಲ್ಲ, ನೀವು ವಂಚನೆಗೊಳಗಾಗಬಹುದು” ಎಂದು ಬರೆದುಕೊಂಡಿದ್ದಾರೆ.
ʼಯೂಟ್ಯೂಬ್ ಇಂಡಿಯಾʼ ಗೆ ಅವರು ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ
Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ
ಬರಲಿದೆ ಮತ್ತೊಂದು ಸ್ಕ್ಯಾಮ್ ಸಿರೀಸ್: ʼಸ್ಕ್ಯಾಮ್ 2010: ಸುಬ್ರತಾ ರಾಯ್ʼ ಅನೌನ್ಸ್
ಸಂಗೀತಾ ಬರ್ತ್ ಡೇಗೆ ಪ್ರತಾಪ್ ಸ್ಪೆಷೆಲ್ ಗಿಫ್ಟ್; ಪ್ರೀತಿಯ ತಮ್ಮನಿಗೆ ರಾಖಿ ಕಟ್ಟಿದ ನಟಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ
Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!