Fraud: ಗೆಳತಿಯನ್ನು ಬೀಳ್ಕೊಡಲು ನಕಲಿ ವಿಮಾನದ ಟಿಕೆಟ್ ಬಳಸಿ ಸಿಕ್ಕಿಬಿದ್ದ!
Team Udayavani, Mar 14, 2024, 2:15 PM IST
ಬೆಂಗಳೂರು: ನಕಲಿ ಟಿಕೆಟ್ ಬಳಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಜಾರ್ಖಂಡ್ನ ಪ್ರಖರ್ ಶ್ರೀವಾಸ್ತವ (24) ಬಂಧಿತ ಆರೋಪಿ.
ಈತನ ಸ್ನೇಹಿತೆ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದಳು. ಆಕೆಯನ್ನು ವಿಮಾನದ ಮೂಲಕ ದೆಹಲಿಗೆ ವಾಪಸ್ ಕಳುಹಿಸಲು ಆರೋಪಿ ವಿಮಾನ ನಿಲ್ದಾಣಕ್ಕೆ ಬಂದಿದ್ದ. ಭದ್ರತಾ ಸಿಬ್ಬಂದಿಗೆ ನಕಲಿ ಟಿಕೆಟ್ ತೋರಿಸಿ, ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದ.
ಸ್ನೇಹಿತೆಯನ್ನು ಬೀಳ್ಕೊಟ್ಟು ವಾಪಸ್ ಹೊರ ಹೋಗಲು ಮುಂದಾಗಿದ್ದ. ಇದರಿಂದ ಅನುಮಾನಗೊಂಡ ಗೇಟ್ ನಂ.9ರ ಭದ್ರತಾ ಸಿಬ್ಬಂದಿಯು ಆತನನ್ನು ತಡೆದು ಟಿಕೆಟ್ ಪರಿಶೀಲಿಸಿದ್ದರು. ಆಗ ನಕಲಿ ಟಿಕೆಟ್ ಎಂಬುದು ಗೊತ್ತಾಗಿದೆ.
ಕೂಡಲೇ ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ನಕಲಿ ಟಿಕೆಟ್ ತಯಾರಿಸಿಕೊಂಡು ಸ್ನೇಹಿತೆಯನ್ನು ಬೀಳ್ಕೊಡಲು ಬಂದಿದ್ದ ಎಂಬುದು ವಿಚಾರಣೆ ವೇಳೆ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು