Gadag: ಜಮೀನು ಮಾರಾಟದ ಹಣಕ್ಕಾಗಿ ತಂದೆಯನ್ನೇ ಕೊಂದ ಮಕ್ಕಳು
Team Udayavani, Mar 14, 2024, 9:31 PM IST
ಗದಗ: ಜಮೀನು ಮಾರಾಟದಿಂದ ಸಿಕ್ಕ ಹಣವನ್ನು ಸಮನಾಗಿ ಹಂಚಿಕೆ ಮಾಡಿಲ್ಲ ಎಂಬ ವಿಚಾರಕ್ಕೆ ಮಕ್ಕಳೇ ತಂದೆಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ವಿವೇಕಾನಂದ ಕರಿಯಲ್ಲಪ್ಪ (65) ಕೊಲೆಯಾದ ವ್ಯಕ್ತಿ. ವಿವೇಕಾನಂದ ಅವರ ಮೊದಲನೇ ಪತ್ನಿ ಕಸ್ತೂರಿ ಅವರ ಮಕ್ಕಳಾದ ಮಲ್ಲೇಶ ಮತ್ತು ಪ್ರಕಾಶ ಆರೋಪಿಗಳು.
ವಿವೇಕಾನಂದ ಅವರು ಪಿತ್ರಾರ್ಜಿತವಾಗಿ ಬಂದಿದ್ದ ಆರು ಎಕರೆ ಜಮೀನಿನಲ್ಲಿ ಮೂರು ಎಕರೆಯನ್ನು ಮಾರಾಟ ಮಾಡಿದ್ದರು. ಅದರಿಂದ ಬಂದ ಹಣವನ್ನು ಹಂಚಿಕೆ ಮಾಡಿದ್ದರು. ಈ ವಿಚಾರವಾಗಿ ಮೊದಲ ಹೆಂಡತಿ ಮಕ್ಕಳು ಮತ್ತು ಇವರ ನಡುವೆ ಗಲಾಟೆ ನಡೆದಿತ್ತು.
ಎರಡನೇ ಪತ್ನಿ ರೇಖಾ ಅವರು ಗುರುವಾರ ಜಮೀನಿಗೆ ತೆರಳಿದ್ದರು. ಈ ವೇಳೆ ಮನೆಗೆ ಬಂದ ಆರೋಪಿಗಳು ತಂದೆ ವಿವೇಕಾನಂದ ಅವರನ್ನು ಕೂಡಿಹಾಕಿ ರಾಡ್ನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
‘ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಹೆಂಡತಿ ಮಕ್ಕಳೇ ತಂದೆ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಿಲ್ಲ. ತನಿಖೆ ಮುಂದುವರಿದಿದೆ’ ಎಂದು ಗದಗ ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು
Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ
Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ