ಹೈಕೋರ್ಟ್ನಲ್ಲೇ ಮಥುರಾ ಅರ್ಜಿ ವಿಚಾರಣೆ: ಸುಪ್ರೀಂ
ಈದ್ಗಾ ಮಸೀದಿ ಸಮಿತಿ ಅರ್ಜಿ ಇತ್ಯರ್ಥ
Team Udayavani, Mar 20, 2024, 8:18 AM IST
ಹೊಸದಿಲ್ಲಿ: ಉ.ಪ್ರ.ದ ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಸದ್ಯ ಅಲಹಾ ಬಾದ್ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಎಲ್ಲ 15 ಅರ್ಜಿಗಳ ಕ್ರೋಢೀಕರಿಸಿ ವಿಚಾರಣೆ ಮುಂದುವರಿಸುವಂತೆ ಸೂಚಿಸಿದೆ.
15 ಅರ್ಜಿಗಳ ಕ್ರೋಢೀಕರಿಸಿ ವಿಚಾರಣೆ ನಡೆಸುವ ಅಲಹಾಬಾದ್ ಹೈಕೋರ್ಟ್ನ ನಿರ್ಧಾರವನ್ನು ಪ್ರಶ್ನಿಸಿ ಶಾಹಿ ಈದ್ಗಾ ಮಸೀದಿಯ ವ್ಯವಸ್ಥಾಪಕ ಸಮಿತಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಸಂಜೀವ್ ಖನ್ನಾ ಮತ್ತು ನ್ಯಾ| ದೀಪಾಂಕರ್ ದತ್ತ ನೇತೃತ್ವದ ನ್ಯಾಯಪೀಠ, ಈ ಅರ್ಜಿಯನ್ನು ವಿಲೇವಾರಿ ಮಾಡುತ್ತಿದ್ದು, ಈ ಕುರಿತು ಅಲಾಹಾಬಾದ್ ಹೈಕೋರ್ಟ್ ಎದುರು ಪುನರ್ಪರಿಶೀಲನ ಅರ್ಜಿ ಸಲ್ಲಿಸಲು ಅರ್ಜಿದಾರರು ಸ್ವತಂತ್ರರು ಎಂದಿದೆ.
ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿಯ 13.37 ಎಕ್ರೆ ವಿವಾದಿತ ಸ್ಥಳದ ಕುರಿತು ಹಿಂದೂ ಕಡೆಯ ವಿವಿಧ ಅರ್ಜಿದಾರರು ಅಲಹಾಬಾದ್ ಹೈಕೋರ್ಟ್ನಲ್ಲಿ ಒಟ್ಟು 15 ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ
Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ
ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು
Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!