ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಓದು, ಕೌಶಲ ಅಗತ್ಯ
Team Udayavani, Mar 20, 2024, 9:04 AM IST
ಉಡುಪಿ: ವಿದ್ಯಾರ್ಥಿಗಳು ತಮ್ಮ ಓದಿನ ಜತೆಗೆ ಜಗತ್ತಿನ ಆಗು ಹೋಗುಗಳನ್ನು ಅವಲೋಕಿಸುತ್ತಿದ್ದು ಆವಶ್ಯ ಕೌಶಲ ಅಳವಡಿಸಿಕೊಳ್ಳುವುದರ ಮೂಲಕ ಈ ಕಾಲಘಟ್ಟದಲ್ಲಿ ಪ್ರಚಲಿತವಿರುವ ಕೃತಕ ಬುದ್ಧಿಮತ್ತೆ ಆಧಾರಿತ ಸವಾಲುಗಳನ್ನು ಎದುರಿಸಲು ಸನ್ನದ್ಧರಾಗಬೇಕೆಂದು ಕೋಡ್ ಲೋಗ್ಸ್ ಟೆಕ್ನಾಲಜಿಸ್ನ ಸುದರ್ಶನ್ ಮಲ್ಯ ತಿಳಿಸಿದರು.
ಎಂಜಿಎಂ ಕಾಲೇಜಿನ ಎಂಎಸ್ಸಿ ಕಂಪ್ಯೂಟರ್ ವಿಜ್ಞಾನ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ “ಟೆಕ್ನೋ ಕಲ್ಚರಲ್ ಉತ್ಸವ’ ಪ್ರದೀಪ್ತದ ಸಮಾರೋಪದಲ್ಲಿ ಅವರು ಮಾತನಾಡಿದರು.
ಅಕಾಡೆಮಿ ಆಫ್ ಜನರಲ್ ಎಜುಕೇಶನ್ನ ಕಾರ್ಯದರ್ಶಿ ವರದರಾಯ ಪೈ ಉದ್ಘಾಟಿಸಿದರು. ಪ್ರಾಶುಂಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ, ಪಿಯು ಕಾಲೇಜಿನ ಪ್ರಾಶುಂಪಾಲೆ ಮಾಲತಿದೇವಿ, ಸಂಧ್ಯಾ ಕಾಲೇಜಿನ ಪ್ರಾಶುಂಪಾಲ ಡಾ| ದೇವಿದಾಸ್ ನಾಯ್ಕ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಪ್ರೊ| ರಮೇಶ ಕಾರ್ಲ, ಐಕ್ಯೂಎಸಿ ಸಮನ್ವಯಕಾರರಾದ ಪ್ರೊ| ಶೈಲಜಾ ಉಪಸ್ಥಿತರಿದ್ದರು.
ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ| ಎಂ. ವಿಶ್ವನಾಥ ಪೈ ಪ್ರಸ್ತಾವನೆಗೈದರು. ಉಪನ್ಯಾಸಕರಾದ ಮಿಥುನ್, ಪಲ್ಲವಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಪ್ರೊ| ಪ್ರವೀಣಾ ಕುಮಾರಿ ಎಂ.ಕೆ., ಪ್ರೊ| ಪೂರ್ಣಿಮಾ ಶೆಟ್ಟಿ ಸಹಕರಿಸಿದ್ದರು.
ವಿದ್ಯಾರ್ಥಿಗಳಾದ ವರ್ಷಿಣಿ, ಪ್ರಸಾದ್, ಸುದರ್ಶನ್, ಶ್ರೀಹರಿ, ಹೃತಿಕ್ರಾಜ್, ಅಂಬಿಕಾ, ನಮೃತಾ, ಐಶ್ವರ್ಯಾ, ಸುಲಕ್ಷ್ಮೀ, ಸೌಜನ್ಯಾ, ದೀಕ್ಷಾ, ರಕ್ಷಿತಾ ನಿರೂಪಿಸಿದರು. ಪ್ರದೀಪ್ತದ ಸಂಯೋಜಕಿ ಪ್ರೊ| ಪವಿತ್ರಾ ಕೆ. ವಿವಿಧ ಸ್ಪರ್ಧೆಗಳ ವರದಿ ವಾಚಿಸಿದರು. ಪ್ರದೀಪ್ತದ 13 ಸ್ಪರ್ಧೆಗಳಲ್ಲಿ 345 ವಿದ್ಯಾರ್ಥಿಗಳು ಪ್ರತಿಭೆ ಪ್ರದರ್ಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು
Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ
ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್ನಲ್ಲೇ ಹೆಚ್ಚು