ಪ್ರಧಾನಿ ಮೋದಿ ದೇಶದ ದೈವಿ ಶಕ್ತಿ: ಪ್ರಮೋದ ಮುತಾಲಿಕ
2014ರ ನಂತರದ ಭಾರತದಲ್ಲಿ ಸಾಕಷ್ಟು ಬದಲಾವಣೆ ಮತ್ತು ಪರಿವರ್ತನೆಗಳಾಗಿವೆ
Team Udayavani, Mar 23, 2024, 2:12 PM IST
ಉದಯವಾಣಿ ಸಮಾಚಾರ
ರಬಕವಿ-ಬನಹಟ್ಟಿ: ಹಿಂದೂಗಳಿಗಾಗಿ ಹಿಂದೂ ರಾಷ್ಟ್ರವನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ. ಪ್ರಧಾನಿ ಮೋದಿ ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಇಪ್ಪತ್ತೈದು ವರ್ಷಗಳ ಕಾಲ ಒಂದು ದಿನವೂ ರಜೆ ಪಡೆಯದೇ ದೇಶದ ಸೇವೆ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿಸುವ ಜವಾಬ್ದಾರಿ
ಎಲ್ಲರ ಮೇಲಿದೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.
ಬನಹಟ್ಟಿಯ ಈಶ್ವರಲಿಂಗ ಮೈದಾನದಲ್ಲಿ ಶ್ರೀರಾಮ ಸೇನೆಯು ಹಮ್ಮಿಕೊಂಡಿದ್ದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಮೊದಲಿನಿಂದಲೂ ಕಿಡಿಗೇಡಿ ಮತ್ತು ದೇಶದ್ರೋಹಿಗಳನ್ನು ರಕ್ಷಣೆ ಮಾಡುವ ಕಾರ್ಯ ಮಾಡುತ್ತಿದೆ. ನಿಮ್ಮ ಯುವಕರನ್ನು
ಹದ್ದು ಬಸ್ತಿನಲ್ಲಿಟ್ಟುಕೊಳ್ಳಬೇಕು ಎಂದು ಮುಸ್ಲಿಂ ಮುಖಂಡರಿಗೆ ಮುತಾಲಿಕ ಎಚ್ಚರಿಕೆ ನೀಡಿದರು.
2014ರ ಮುಂಚಿನ ಭಾರತ ಮತ್ತು 2014ರ ನಂತರದ ಭಾರತದಲ್ಲಿ ಸಾಕಷ್ಟು ಬದಲಾವಣೆ ಮತ್ತು ಪರಿವರ್ತನೆಗಳಾಗಿವೆ. ಪಾಕಿಸ್ತಾನ ಇಂದು ವಿಶ್ವದ ವಿವಿಧ ದೇಶಗಳಿಂದ ಭಿಕ್ಷೆ ಬೇಡುತ್ತಿದೆ. ಪ್ರತಿ ಹಳ್ಳಿಯಲ್ಲಿ ಜನರು ಈ ಬಾರಿ ಮೋದಿಯನ್ನು ಗೆಲ್ಲಿಸುವುದಾಗಿ ನಿಶ್ಚಯ ಮಾಡಿದ್ದಾರೆ ಎಂದು ತಿಳಿಸಿದರು.
ಮೈಗೂರಿನ ಶಿವಾನಂದ ಮಠದ ಗುರುಪ್ರಸಾದ ಸ್ವಾಮೀಜಿ ಮಾತನಾಡಿ, ಮೋದಿ ವಿಶ್ವದ ತಾಕತ್ತು. ಮೋದಿಯಿಂದಾಗಿ ಭಾರತ
ಇಂದು ವಿಶ್ವದ ಶ್ರೇಷ್ಠ ರಾಷ್ಟ್ರಗಳಲ್ಲಿ ಒಂದಾಗಿದೆ. ದೇಶದ ಸಂಸ್ಕೃತಿ, ಸಂಸ್ಕಾರ ಮೋದಿಯಿಂದ ಮಾತ್ರ ಉಳಿಯಲು ಸಾಧ್ಯ. ಪುಕ್ಕಟೆಗಳಿಗೆ ಆಸೆ ಪಡದೆ ದೇಶ ಕಟ್ಟಲು ಶ್ರಮಿಸುತ್ತಿರುವ ಮೋದಿ ಅವರಿಗೆ ಆಡಳಿತ ನೀಡಬೇಕು ಎಂದು ತಿಳಿಸಿದರು.
ಶ್ರೀರಾಮ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಗಂಗಾಧಾರ ಕುಲಕರ್ಣಿ, ಬಾಗಲಕೋಟೆ ಜಿಲ್ಲೆಯ ಬಿಜೆಪಿ ಓಬಿಸಿ ಮೋರ್ಚಾ ಘಟಕದ ಅಧ್ಯಕ್ಷ ಶಿವಾನಂದ ಗಾಯಕವಾಡ ಮಾತನಾಡಿದರು. ಕಿರಣಕುಮಾರ ದೇಸಾಯಿ, ಧರೆಪ್ಪ ಉಳ್ಳಾಗಡ್ಡಿ, ಶ್ರೀಶೈಲ ಬೀಳಗಿ, ಸುಭಾಸ ಚೋಳಿ, ಸಂಜಯ ತೆಗ್ಗಿ, ಶ್ರೀಶೈಲ ದಲಾಲ, ಸುರೇಶ ಅಕ್ಕಿವಾಟ, ಮಹಾಂತೇಶ ಹಿಟ್ಟಿನಮಠ, ಯಮನಪ್ಪ ಕೋರಿ, ಪ್ರವೀಣ ಚುಬಚಿ, ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!
SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ
IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ
Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
MUST WATCH
ಹೊಸ ಸೇರ್ಪಡೆ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ನಟ ಅಲ್ಲು ಅರ್ಜುನ್, ಶಾಸಕನ ವಿರುದ್ಧ ದೂರು ದಾಖಲು
Udupi: ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಹೃದಯಾಘಾತದಿಂದ ಮೃತ್ಯು
ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ
World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು
Canada: ನಿಜ್ಜಾರ್ ಹತ್ಯೆ ಪ್ರಕರಣ; ನಾಲ್ಕನೇ ಆರೋಪಿ ಬಂಧನ