Virajpet: ಲಾರಿ – ಆ್ಯಂಬುಲೆನ್ಸ್ ನಡುವೆ ಢಿಕ್ಕಿ; ಓರ್ವನಿಗೆ ಗಾಯ
Team Udayavani, Mar 23, 2024, 6:01 PM IST
ಮಡಿಕೇರಿ: ಲಾರಿ ಮತ್ತು ಆ್ಯಂಬುಲೆನ್ಸ್ ನಡುವೆ ಢಿಕ್ಕಿಯಾಗಿ ಓರ್ವ ಗಾಯಗೊಂಡಿರುವ ಘಟನೆ ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಕೊಳತ್ತೋಡು ಎಂಬಲ್ಲಿ ನಡೆದಿದೆ.
ಅಪಘಾತದಿಂದ ಗಾಯಗೊಂಡಿರುವ ಆ್ಯಂಬುಲೆನ್ಸ್ ಚಾಲಕನನ್ನು ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಶನಿವಾರ ಬೆಳಗ್ಗೆ ನಡೆದ ಅಪಘಾತದ ಗಾಯಾಳುವನ್ನು ಮೈಸೂರಿಗೆ ಕರೆದೊಯ್ಯುತ್ತಿದ್ದ ವಿರಾಜಪೇಟೆ ಸರಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ಎದುರು ಭಾಗದಿಂದ ಬಂದ ಲಾರಿಗೆ ಢಿಕ್ಕಿ ಹೊಡೆಯಿತು ಎಂದು ಹೇಳಲಾಗಿದೆ.
ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ತಪ್ಪಿಸಲು ಲಾರಿ ಚಾಲಕ ಲಾರಿಯನ್ನು ತತ್ಕ್ಷಣ ಪಕ್ಕದಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ.
ಆ್ಯಂಬುಲೆನ್ಸ್ ಚಾಲಕ ಹೊರತುಪಡಿಸಿ ಉಳಿದವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.