ಸೇವೆಯ ಸೌಭಾಗ್ಯ ಕೊಟ್ಟ‌ ಕ್ಷೇತ್ರದ ಜನತೆಗೆ ಭಾವನಾತ್ಮಕ ಪತ್ರ ಬರೆದ ಅನಂತ್!

ಲೋಕಸಭಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆ

Team Udayavani, Mar 24, 2024, 10:56 PM IST

ಸೇವೆಯ ಸೌಭಾಗ್ಯ ಕೊಟ್ಟ‌ ಕ್ಷೇತ್ರದ ಜನತೆಗೆ ಭಾವನಾತ್ಮಕ ಪತ್ರ ಬರೆದ ಅನಂತ್!

ಶಿರಸಿ: ಜನಕ್ಕೆ ಸೇವೆಯ ಸೌಭಾಗ್ಯ ಕೊಟ್ಟ ಜನ‌ಮನಕ್ಕೆ ಸಾಷ್ಟಾಂಗ ಪ್ರಣಾಮ ಎಂದು ಸಂಸದ ಅನಂತಕುಮಾರ ಹೆಗಡೆ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯಿಂದ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಂಚಿತ ಹಿಂದೂ ಹುಲಿ ಅನಂತಕುಮಾರ ಹೆಗಡೆ ಅವರ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅದರ ಪೂರ್ಣ ಪಾಠ ಇಲ್ಲಿದೆ.

ಈ ಭೂಮಿಯಲ್ಲಿ ಒಂದು ಲೌಕಿಕ ಬದುಕಿನಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನ್ನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು. ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ‌ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ  ನಾನು ಈ ಪೂಜೆಯನ್ನು ಎಲ್ಲಿಂದ ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ.

ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ಧನ ಆರಾಧನೆ. ಸರಿ‌ ಸುಮಾರು ೩೦ ವರ್ಷಗಳ ಲಾಲ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ‌ಪ್ರೀತಿ, ಸ್ನೇಹ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು. ಅದು ಅದಮ್ಯ.

ಯಾವುದೇ ಪೂಜೆ, ಆರಾಧ‌ನೆ ಅದು ಎಂದಿಗೂ‌ ಮುಗಿಯದ ಅನಂತ ಕಾಯಕ. ಈ ತಾಯ್ನೆಲದ ಪೂಜೆಯಲ್ಲಿ ಆಕೆಯ ಸೇವೆಯಲ್ಲಿ ನನ್ನನ್ನು‌ ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದ್ದಕ್ಕೆ ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದ ಪದ್ಮಗಳಿಗೆ ಅನಂತ‌ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ‌ ಮೂರು ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ . ಈ ಬದುಕಿನಲ್ಲಿ ಅದು ನನಗೊಂದು ಗುರುತು ನೀಡಿದೆ.ನಿಜಕ್ಕೂ ಅಷ್ಟೇ ಸಾಕು. ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೆ ಸಿಕ್ಕೀತು? ಎಂದೂ ಕೇಳಿದ್ದಾರೆ.

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ, ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ಮು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ ಮತ್ತೊಮ್ಮೆ ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯಾಂತರಾಳದ ಕೃತಜ್ಞತೆಗಳು ಎಂದು ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.