Nirmala Sitharaman ಬಹಿರಂಗ ಚರ್ಚೆಗೆ ಬರಲಿ : ಕೃಷ್ಣಬೈರೇಗೌಡ


Team Udayavani, Mar 25, 2024, 10:25 PM IST

Nirmala Sitharaman ಬಹಿರಂಗ ಚರ್ಚೆಗೆ ಬರಲಿ : ಕೃಷ್ಣಬೈರೇಗೌಡ

ಬೆಂಗಳೂರು: ಕರ್ನಾಟಕಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ಕೊಡಬೇಕೆಂಬ 15ನೇ ಹಣಕಾಸು ಆಯೋಗದ ಶಿಫಾರಸನ್ನೇ ಸುಳ್ಳು ಎನ್ನುತ್ತಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಹಿರಂಗ ಚರ್ಚೆಗೆ ಬರಲಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸವಾಲು ಹಾಕಿದರು.

ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019-20ರಲ್ಲಿ 14ನೇ ಹಣಕಾಸು ಆಯೋಗದ ಶಿಫಾರಸುಗಳು ಕೊನೆಗೊಂಡಿದ್ದು, ಆ ವರ್ಷ 36,675 ಕೋಟಿ ರೂ. ಕೊಟ್ಟಿದ್ದ ಕೇಂದ್ರ ಸರಕಾರ, 2020-21ರಲ್ಲಿ 31,180 ಕೋಟಿ ರೂ. ಕೊಟ್ಟಿತ್ತು. ಅಂದರೆ 5,495 ಕೋಟಿ ರೂ. ಕಡಿಮೆ ಆಗಿತ್ತು. ಇದನ್ನು ಸರಿದೂಗಿಸಲು 2020-21ರಲ್ಲಿ 5,495 ಕೋಟಿ ರೂ. ವಿಶೇಷ ಅನುದಾನ ನೀಡಲು ಹಣಕಾಸು ಆಯೋಗ ತನ್ನ ವರದಿಯಲ್ಲಿ ಶಿಫಾರಸು ಮಾಡಿದ್ದು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹೇಳುವಂತೆ ಇದು ಮಧ್ಯಾಂತರ ವರದಿ ಅಲ್ಲ. ಇಡೀ ವರ್ಷಕ್ಕೆ ಕೊಟ್ಟಿರುವುದೊಂದೇ ವರದಿ. ಅದರಲ್ಲಿ ಈ ಅಂಶ ಇದೆ ಎಂದರು.

2020ರ ಸೆ.17ರಂದು ಅಂದಿನ ಸಿಎಂ ಯಡಿಯೂರಪ್ಪ ಅವರು ಈ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದರು. ಅದೇ ರೀತಿ ಬಸವರಾಜ ಬೊಮ್ಮಾಯಿ ಸಿಎಂ ಆದಾಗಲೂ ಪತ್ರ ಬರೆದಿದ್ದರು. ಇದಕ್ಕೆ ಉತ್ತರಿಸಿದ್ದ ನಿರ್ಮಲಾ ಅವರು, ನಿಮ್ಮ ಸಂಪನ್ಮೂಲದಿಂದಲೇ ಹೊಂದಾಣಿಕೆ ಮಾಡಿಕೊಳ್ಳಿ ಎಂದಿದ್ದರು. ಎಲ್ಲಕ್ಕಿಂತ ಮಿಗಿಲಾಗಿ ಆಯೋಗದ ಶಿಫಾರಸುಗಳ ಮೇಲೆ ಕೈಗೊಂಡ ಕ್ರಮಗಳ ಕುರಿತು ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ್ದ ಕೇಂದ್ರ ಸರಕಾರ, ಆಯೋಗಕ್ಕೆ ತನ್ನ ಶಿಫಾರಸು ಮರುಪರಿಶೀಲನೆ ಮಾಡುವಂತೆ ಕೋರುವುದಾಗಿ ಹೇಳಿತ್ತು. ಈ ವಿಚಾರದಲ್ಲಿ ನಮ್ಮ ಸಿಎಂ ಹೇಳುವುದು ಸುಳ್ಳು ಎನ್ನುವುದಾದರೆ, ಇವೆಲ್ಲ ಸುಳ್ಳಾ ಎಂದು ಪ್ರಶ್ನಿಸಿದರು.

2021-26ರ ವರೆಗಿನ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕಕ್ಕೆ 6 ಸಾವಿರ ಕೋಟಿ ರೂ.ಗಳನ್ನು ಕೇಂದ್ರ ಸರಕಾರ ಕೊಡಬೇಕು. 2020-21ರ 5,495 ಕೋ. ರೂ. ಹಾಗೂ 6 ಸಾವಿರ ಕೋ. ರೂ. ಸಹಿತ ಒಟ್ಟು 11,495 ಕೋ.ರೂ. ಕೊಡಬೇಕು. ಕರ್ನಾಟಕದಿಂದ ಆಯ್ಕೆಯಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಸಚಿವೆ ನಿರ್ಮಲಾ ಅವರ ಬಳಿ ನಾವು ಭಿಕ್ಷಾಪಾತ್ರೆ ಹಿಡಿದು ಬೇಡುತ್ತಿಲ್ಲ. ನಮ್ಮ ಗ್ಯಾರಂಟಿಗೆ ನಿಮ್ಮ ನಯಾಪೈಸೆ ಬೇಕಿಲ್ಲ. ನಾವು ಸಾಮಾಜಿಕ ಭದ್ರತಾ ಪದ್ಧತಿಯಡಿ ನೀಡುತ್ತಿರುವ ಮಾಸಾಶನ ಪಿಂಚಣಿಗೆ ವಾರ್ಷಿಕ 11,200 ಕೋಟಿ ರೂ. ವ್ಯಯಿಸುತ್ತಿದ್ದು, ಇದರಲ್ಲಿ ಕೇಂದ್ರ ಪಾಲು 555 ಕೋಟಿ ರೂ. ಮಾತ್ರ. ಇದೆಲ್ಲದರ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ, ಬನ್ನಿ ಮೈಸೂರಿಗೆ ಎಂದು ಸವಾಲು ಹಾಕಿದರು.

ನಮ್ಮ ಪಾಲಿನ ಹಕ್ಕು ಕೇಳುತ್ತಿದ್ದೇವೆ. ನ್ಯಾಯ ಕೇಳುತ್ತಿದ್ದೇವೆ. ರಾಜಕೀಯ ತೆವಲಿಗಾಗಿ ಇದನ್ನೆಲ್ಲ ಹೇಳುತ್ತಿಲ್ಲ. ನಿಮ್ಮ ಉದಾರತನವೂ ನಮಗೆ ಬೇಕಿಲ್ಲ. ತೆರಿಗೆ ಕಟ್ಟಲು, ಮತ ಹಾಕಲಷ್ಟೇ ಕನ್ನಡಿಗರಿಲ್ಲ. ನಾವು ದ್ವಿತೀಯ ದರ್ಜೆ ನಾಗರಿಕರಲ್ಲ. ನಮಗೂ ಸಮಾನ ಪಾಲು ಕೊಡಿ ಅಷ್ಟೇ. ಜನರ ಮನ ಒಲಿಸಲಾಗಲಿಲ್ಲ ಎಂದು ಗೊಂದಲ ಮಾತ್ರ ಸೃಷ್ಟಿ ಮಾಡಬೇಡಿ.
-ಕೃಷ್ಣ ಬೈರೇಗೌಡ, ಕಂದಾಯ ಸಚಿವ

ಟಾಪ್ ನ್ಯೂಸ್

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.