Mandya ಮುಖಂಡರ ಜತೆಗೆ ಬಿ.ವೈ.ವಿಜಯೇಂದ್ರ ಸಭೆ; ಮುನಿಸು ಮರೆಯುವಂತೆ ಮನವಿ


Team Udayavani, Mar 26, 2024, 8:14 PM IST

Mandya ಮುಖಂಡರ ಜತೆಗೆ ಬಿ.ವೈ.ವಿಜಯೇಂದ್ರ ಸಭೆ; ಮುನಿಸು ಮರೆಯುವಂತೆ ಮನವಿ

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಜಿಲ್ಲೆಯ ಬಿಜೆಪಿ ಮುಖಂಡರ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ್ದು, ಮತ್ತೊಮ್ಮೆ ಮೋದಿಗಾಗಿ ಮುನಿಸು ಮರೆಯುವಂತೆ ಮನವಿ ಮಾಡಿದ್ದಾರೆ.

ಖಾಸಗಿ ಹೊಟೇಲ್‌ನಲ್ಲಿ ಮಾಜಿ ಸಚಿವ ನಾರಾಯಣಗೌಡ, ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ, ಸಚ್ಚಿದಾನಂದ ಸೇರಿದಂತೆ ಪ್ರಮುಖ ನಾಯಕರ ಜತೆಗೆ ವಿಜಯೇಂದ್ರ ಚರ್ಚೆ ನಡೆಸಿದ್ದು, ಬುಧವಾರ ಮಂಡ್ಯ ಹಾಗೂ ಮೈಸೂರಿನಲ್ಲಿ ಪ್ರಮುಖ ನಾಯಕರನ್ನು ಭೇಟಿ ಮಾಡಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಪ್ರಯತ್ನ ನಡೆಸಲಿದ್ದಾರೆ.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ವಿಜಯೇಂದ್ರ, “ಎರಡು ಪಕ್ಷ ಒಟ್ಟಾಗಿ ಕೆಲಸ ಮಾಡಬೇಕು, ರಾಜ್ಯದ 28ಕ್ಕೆ 28 ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ನರೇಂದ್ರ ಮೋದಿಯವರನ್ನು ಮತ್ತೆ ಮತ್ತೂಮ್ಮೆ ಪ್ರಧಾನಿಯಾಗಿ ಮಾಡಬೇಕೆಂಬುದು ನಮ್ಮೆಲ್ಲರ ಉದ್ದೇಶ. ನಾರಾಯಣ ಗೌಡರು ಸೇರಿದಂತೆ ಪ್ರತಿಯೊಬ್ಬರ ಜತೆ ಮಾತನಾಡಿದ್ದೇನೆ. ಮಂಡ್ಯದಲ್ಲಿ ತಳಮಟ್ಟದಲ್ಲಿ ಬಿಜೆಪಿಯ ದೊಡ್ಡ ಕಾರ್ಯಕರ್ತರ ಪಡೆಯೇ ಇದೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಪಕ್ಷ ಬಿಡುವುದಿಲ್ಲ : ನಾರಾಯಣ ಗೌಡ ಪಕ್ಷ ಬಿಡುತ್ತಾರೆಯೇ ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿ.ಎಸ್‌.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗುವುದಕ್ಕಾಗಿ ನಾರಾಯಣಗೌಡರು ಎಂಥ ತ್ಯಾಗ ಮಾಡಿದ್ದರು ಎಂಬುದು ನಮಗೆಲ್ಲರಿಗೂ ಗೊತ್ತು. ಯಾವುದೇ ಕಾರಣಕ್ಕೂ ಅವರು ಪಕ್ಷ ತ್ಯಜಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎರಡು ದಿನದೊಳಗೆ ಸುಮಲತಾ ಭೇಟಿ
ಸಂಸದೆ ಸುಮಲತಾ ಅಂಬರೀಶ್‌ ಅವರ ಬಗ್ಗೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಇನ್ನೆರಡು ದಿನದಲ್ಲಿ ನಾನೇ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಸುಮಲತಾ ಅವರ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಕಳೆದ ಬಾರಿ ಬಿಜೆಪಿಯ ಎಲ್ಲ ಕಾರ್ಯಕರ್ತರು ಅವರ ಬೆಂಬಲಕ್ಕೆ ನಿಂತಿದ್ದರು. ನಾನು ಅವರ ಜತೆ ಮಾತನಾಡುತ್ತೇನೆ ಎಂದು ಹೇಳಿದರು.

ಈ ಸಲ ಸುಮಲತಾ ಅವರಿಗೆ ಟಿಕೆಟ್‌ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದೆವು, ಅವರು ಸಹ ಟಿಕೆಟ್‌ ತಂದೇ ತರುತ್ತೇನೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಸುಮಲತಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಬಳಿಕ ಮುಂದೆ ಏನು ಮಾಡಬೇಕು ಎಂಬುದನ್ನು ತೀರ್ಮಾನಿಸುತ್ತೇನೆ.
-ನಾರಾಯಣಗೌಡ, ಮಾಜಿ ಸಚಿವ

ಟಾಪ್ ನ್ಯೂಸ್

1

ʼಯುಐʼ ಮೊದಲು ʼಎʼ ಸರ್ಪ್ರೈಸ್‌ ಕೊಟ್ಟ ಉಪ್ಪಿ: ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ಚಿತ್ರ

5-uv-fusion

UV Fusion: ಮಾಯಾ ತಾಣ

Storm: ದೆಹಲಿಯಲ್ಲಿ ಗಾಳಿ ಸಹಿತ ಮಳೆ… ಮರ ಬಿದ್ದು 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

Storm: ದೆಹಲಿಯಲ್ಲಿ ಬಿರುಗಾಳಿ ಸಹಿತ ಮಳೆ… 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

6-madikeri

Madikeri: ವಿದ್ಯುತ್ ತಂತಿ ತಗುಲಿ ವ್ಯಕ್ತಿ ದುರ್ಮರಣ

4-uv-fusion

UV Fusion: ಅವರು ಹಾಗೆ, ಇವರು ಹೀಗೆ, ನಾವು ಹೇಗೆ?

3-madikeri

Crime Followup: ಸೂರ್ಲಬ್ಬಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿ ಪೊಲೀಸ್ ವಶ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಪ್ರಜ್ವಲ್‌ಗೆ ಇನ್ನೊಂದು ಅತ್ಯಾಚಾರ ಕೇಸ್‌ ಕುಣಿಕೆ ; ಕಠಿನ ವಿಧಿಗಳುಳ್ಳ 3ನೇ ಎಫ್ಐಆರ್‌ ದಾಖಲು

ಪ್ರಜ್ವಲ್‌ಗೆ ಇನ್ನೊಂದು ಅತ್ಯಾಚಾರ ಕೇಸ್‌ ಕುಣಿಕೆ ; ಕಠಿನ ವಿಧಿಗಳುಳ್ಳ 3ನೇ ಎಫ್ಐಆರ್‌ ದಾಖಲು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1

ʼಯುಐʼ ಮೊದಲು ʼಎʼ ಸರ್ಪ್ರೈಸ್‌ ಕೊಟ್ಟ ಉಪ್ಪಿ: ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ಚಿತ್ರ

5-uv-fusion

UV Fusion: ಮಾಯಾ ತಾಣ

Storm: ದೆಹಲಿಯಲ್ಲಿ ಗಾಳಿ ಸಹಿತ ಮಳೆ… ಮರ ಬಿದ್ದು 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

Storm: ದೆಹಲಿಯಲ್ಲಿ ಬಿರುಗಾಳಿ ಸಹಿತ ಮಳೆ… 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

6-madikeri

Madikeri: ವಿದ್ಯುತ್ ತಂತಿ ತಗುಲಿ ವ್ಯಕ್ತಿ ದುರ್ಮರಣ

4-uv-fusion

UV Fusion: ಅವರು ಹಾಗೆ, ಇವರು ಹೀಗೆ, ನಾವು ಹೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.