ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

ಟ್ರಸ್ಟಿಗಳಿಂದ ಸುಳ್ಯ ನ. ಪಂ. ಆವರಣದ ಯುದ್ಧ ಸ್ಮಾರಕಕ್ಕೆ ಗೌರವಾರ್ಪಣೆ

Team Udayavani, Mar 27, 2024, 3:15 PM IST

10-sulya

ಸುಳ್ಯ: ಇಲ್ಲಿನ ಯುವ ಲೇಖಕ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಇವರ ಸಾರಥ್ಯದಲ್ಲಿ ಹಿರಿಯರ ಮಾರ್ಗದರ್ಶನದೊಂದಿಗೆ, ಕನಸಿನ ಯೋಜನೆ “ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.)” ಅಧಿಕೃತವಾಗಿ ನೋಂದಣಿಯಾಗಿ, ಫೌಂಡೇಶನ್ ನ ಟ್ರಸ್ಟಿಗಳಿಂದ ಸುಳ್ಯ ನ. ಪಂ. ಆವರಣದ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿ ಕಾರ್ಯಾರಂಭಕ್ಕೆ ಶುಭಮುನ್ನುಡಿ ಬರೆಯಲಾಯಿತು.

ಈ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಆಗಿ ಕಾರ್ಯನಿರ್ವಹಿಸುವ, ಲೇಖಕ ಅನಿಂದಿತ್ ಗೌಡ ತಮ್ಮ ಕನಸಿನ ಒಂದು ದಿಟ್ಟ ಹೆಜ್ಜೆ ನನಸುoಟಾಗಿರುವುದರ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

“ನಾಲ್ಕು ವರ್ಷಗಳ ಕಾಲ ‘ರಿಕಾಲಿಂಗ್ ಅಮರ ಸುಳ್ಯ’ ಪುಸ್ತಕ ರಚನೆಯ ಸಂದರ್ಭದಲ್ಲಿ 1837ರ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ಕೆಲವು ಐತಿಹಾಸಿಕ ದಾಖಲೆಗಳು ಮತ್ತು ಅದಕ್ಕೂ ಮುಂಚಿನ ನಮ್ಮ ಸುಳ್ಯದ ಮಣ್ಣಿನ ಚರಿತ್ರೆಯ ವರ್ಣನೆಯ ಮಾಹಿತಿಗಳು ದೊರೆತವು.

ವಸಾಹತುಶಾಹಿ ಆಳ್ವಿಕೆಯ ಕರಾಳತನ ಹಾಗೂ ಕ್ರೌರ್ಯವನ್ನು ಕಂಡು ಬೆಚ್ಚಿತನಾದೆ. ನಾವು ನಿಂತು ನಡೆದಾಡಲು ಕಲಿತ ಭೂಮಿಯೇ, ಹಿಂದೆ ಮಹತ್ವದ ಚರಿತ್ರೆಗೆ ಅಡಿಪಾಯವಾಗಿತ್ತು ಎಂದು ಅರಿತುಕೊಂಡಾಗ, ಇದನ್ನು ಮುಂದಿನ ಪೀಳಿಗೆಗೆ ತಿಳಿಸುವಂತಾಗಬೇಕು, ದೂರದ ದೇಶದ ಮ್ಯೂಸಿಯಂಗಳಲ್ಲಿ ಧೂಳು ಉಂಡು, ನಮ್ಮ ಮಣ್ಣಿನ ಇತಿಹಾಸದ ನೆನಪು ಯಾವುದೇ ಉದ್ದೇಶವನ್ನು ಪೂರೈಸದೆ ಇರುವಂತೆ ಬಿಡಬಾರದು ಎಂಬ ಪ್ರಾರಂಬದ ಅನಿಸಿಕೆಗಳು ಮುಂದಕ್ಕೆ ಕೊಂಡೋಯಿತು” ಎಂದು ಅವರು ಹಂಚಿಕೊಂಡರು.

“ಜ್ಞಾನಾಧಾರಿತ” ಪರಂಪರೆ – ಸಂರಕ್ಷಣೆಗೆ ಪ್ರಾಶಸ್ತ್ಯ ಶಿಕ್ಷಿತ ಯುವಕರು ಒಂದು ಊರಿನ ಇತಿಹಾಸ – ಪರಂಪರೆಯ ಜವಾಬ್ದಾರಿಯುತ ರಾಯಭಾರಿಗಳಾಗಬೇಕು ಎಂಬುದು ಲೇಖಕ ಅನಿಂದಿತ್ ಗೌಡ ಅವರ ದೃಢ ನಿಲುವು.

ಅಂತರಾಷ್ಟ್ರೀಯ ವಿದ್ವಾಂಸರೊಂದಿಗಿನ ಸಂವಾದದಿಂದ ಪಡೆದ ಪ್ರೇರಣೆಯಿಂದಾಗಿ ಸಂಸ್ಥೆಯ ರಚನೆಯ ಕುರಿತು ಮಾಹಿತಿ ನೀಡಿದ ಲೇಖಕ ಅನಿಂದಿತ್ ಗೌಡ ಅವರು, “ಪರಂಪರೆ – ಸಂರಕ್ಷಣೆ [Heritage Conservation] ಎಂಬ ವಿಷಯದ ಬಗ್ಗೆ ಮೊದಲು ಅರಿತುಕೊಂಡದ್ದಾಗಿ ತಿಳಿಸಿದರು.

“ಜ್ಞಾನಾಧಾರಿತ” ಸಂರಕ್ಷಣೆಯ (Knowledge – Based) ಮೂಲಕ ಐತಿಹಾಸಿಕ ಸಂಪತ್ತನ್ನು ಉಳಿಸುವ ಪ್ರಯತ್ನ ಹಿರಿಯರ ಮಾರ್ಗದರ್ಶನದೊಂದಿಗೆ ಕಾರ್ಯ ನಿರ್ವಹಿಸಲಿದೆ ಎಂದು ಅವರು ತಿಳಿಸಿದರು.

ಟ್ರಸ್ಟಿಗಳಾಗಿ ಲೇಖಕ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ, ಕೃಷ್ಣ ಪ್ರಸಾದ್ ಮಡ್ತಿಲ, ನ. ಸೀತಾರಾಮ ಸುಳ್ಯ, ಸುಧಾಕರ ಕೊಚ್ಚಿ, ಅಡ್ವೊಕೇಟ್, ಶ್ರೀ ಅಕ್ಷಯ್ ಆಳ್ವ ಇರುವರು.

ಸುಳ್ಯದ ಐವರ್ನಾಡಿನಲ್ಲಿ ದಲಿಯ ಆರಾಧನೆ ಕುರಿತು ದಾಖಲೀಕರಣದ ಮುಂದಾಳತ್ವ ವಹಿಸಿಕೊಂಡ ಜಯರಾಜ್ ಗೌಡ ನಿಡುಬೆ, ಜಾಲ್ಸೂರು ಗ್ರಾಮದ ಬಾಲಸುಬ್ರಹ್ಮಣ್ಯ ಬೈತಡ್ಕ ಜೊತೆಗಿದ್ದರು.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.