Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

ಚಂದ್ರಕಾಂತ್‌ ಅತಿಶಿಸ್ತಿನಿಂದ ವಿದೇಶಿ ಕ್ರಿಕೆಟಿಗರು ಬೇಸತ್ತಿದ್ದರು

Team Udayavani, Mar 29, 2024, 6:20 AM IST

1-kkr

ಹೊಸದಿಲ್ಲಿ: ಕೋಲ್ಕತಾ ನೈಟ್‌ರೈಡರ್ಸ್‌ ತಂಡದ ಕೋಚ್‌ ಚಂದ್ರಕಾಂತ್‌ ಪಂಡಿತ್‌ ಅವರ ಅತಿಶಿಸ್ತಿನಿಂದ; ಐಪಿಎಲ್‌ನ ಕಳೆದ ಋತುವಿನಲ್ಲಿ ಹಲವು ವಿದೇಶಿ ಆಟಗಾರರು ಹತಾಶೆಗೊಳಗಾಗಿದ್ದರು ಎಂದು ಮಾಜಿ ಆಟಗಾರ ಡೇವಿಡ್‌ ವೀಸ್‌ ಆರೋಪಿಸಿದ್ದಾರೆ. ಕಳೆದ ಬಾರಿ ತನಗೆ ತಂಡದಲ್ಲಿ ಬಹಳ ಅವಕಾಶ ಸಿಕ್ಕಿರಲಿಲ್ಲ ಎಂದು ದಕ್ಷಿಣ ಆಫ್ರಿಕಾ ಮತ್ತು ನಮೀಬಿಯ ತಂಡದ ಆಲ್‌ರೌಂಡರ್‌ ಆಗಿರುವ ವೀಸ್‌ ಹೇಳಿಕೊಂಡಿದ್ದಾರೆ.

ಹೇಗೆ ವರ್ತಿಸಬೇಕು? ಏನನ್ನು ಧರಿಸಬೇಕು? ಹೇಗೆ ಮಾತನಾಡಬೇಕು? ಎಂಬ ಕುರಿತು ಚಂದ್ರಕಾಂತ್‌ ಪದೇಪದೆ ಹೇಳುತ್ತಲೇ ಇದ್ದರು. ಸಾಮಾನ್ಯವಾಗಿ ವಿಶ್ವಾದ್ಯಂತ ಕ್ರಿಕೆಟ್‌ ಆಡಿರುವ ಕ್ರಿಕೆಟಿಗರಿಗೆ ಇಂತಹ ಮಾತುಗಳೆಲ್ಲ ಹಿಡಿಸು ವುದಿಲ್ಲ. ಅವರಿಗೆ ತಾವು ಹೇಗಿರಬೇಕೆಂದು ಸಹಜ ವಾಗಿಯೇ ಗೊತ್ತಿರುತ್ತದೆ. ಹಾಗಾಗಿ ಕೆಲವರು ಸಿಟ್ಟಾಗಿದ್ದರು. ಆದರೆ ನಾನು ಮಾತ್ರ, ಹೇಳಿದ್ದಕ್ಕೆಲ್ಲ ಮರುಮಾತಿಲ್ಲದೇ ಒಪ್ಪಿಕೊಂಡಿದ್ದೆ ಎಂದು 38ರ ಹರೆಯದ ವೀಸ್‌ ಹೇಳಿದ್ದಾರೆ. ಅವರು 2023ರ ಋತುವಿನಲ್ಲಿ ಕೆಕೆಆರ್‌ ಪರ 3 ಪಂದ್ಯಗಳಲ್ಲಿ ಆಡಿದ್ದರು.

ಪಂಡಿತ್‌ ಅವರು ಅತಿಶಿಸ್ತಿನ ತರಬೇತುದಾರ ಎಂದೇ ಹೆಸರುವಾಸಿ. ಅವರ ತರಬೇತಿಯಲ್ಲಿ ದೇಶೀಯ ತಂಡಗಳು ಅತ್ಯುತ್ತಮ ಯಶಸ್ಸು ಸಾಧಿಸಿವೆ. 2018 ಮತ್ತು 2019ರಲ್ಲಿ ವಿದರ್ಭ, 2022ರಲ್ಲಿ ಮಧ್ಯಪ್ರದೇಶ ಚೊಚ್ಚಲ ಬಾರಿ ರಣಜಿ ಗೆಲ್ಲಲು ಚಂದ್ರಕಾಂತ್‌ ಮಾರ್ಗದರ್ಶನ ನೀಡಿದ್ದರು. ನ್ಯೂಜಿಲ್ಯಾಂಡಿನ ಬ್ರೆಂಡನ್‌ ಮೆಕಲಮ್‌ ಅವರು 2022ರಲ್ಲಿ ಕೆಕೆಆರ್‌ ಕೋಚ್‌ ಹುದ್ದೆ ತ್ಯಜಿಸಿದ ಬಳಿಕ, ಪಂಡಿತ್‌ ಮುಖ್ಯ ಕೋಚ್‌ ಆಗಿ ಅಧಿಕಾರ ಸ್ವೀಕರಿಸಿದ್ದರು.

ಚಂದ್ರಕಾಂತ್‌ಗೆ ರಸೆಲ್‌ ಬೆಂಬಲ
ಬೆಂಗಳೂರು: ಕೆಕೆಆರ್‌ ತಂಡದ ಮುಖ್ಯ ಕೋಚ್‌ ಚಂದ್ರಕಾಂತ್‌ ಪಂಡಿತ್‌ ಅವರ ಕೋಚಿಂಗ್‌ ಶೈಲಿಯನ್ನು ವಿಂಡೀಸ್‌ ಆಲ್‌ರೌಂಡರ್‌, ಕೆಕೆಆರ್‌ ಆಟಗಾರ ಆ್ಯಂಡ್ರೆ ರಸೆಲ್‌ ಬೆಂಬಲಿಸಿದ್ದಾರೆ. ಕಳೆದ ವರ್ಷದಿಂದ ನಾವು ಅವರೊಂದಿಗೆ ಕೆಲಸ ಮಾಡುತ್ತಿದ್ದೇವೆ. ನೀವು ಮೊದಲ ಬಾರಿಗೆ ತರಬೇತುದಾರರೊಂದಿಗೆ ಕೆಲಸ ಮಾಡುತ್ತಿರುವಾಗ, ನೀವು ಅವರ ಕ್ರಮಕ್ಕೆ ಹೊಂದಿಕೊಳ್ಳಬೇಕು. ಪ್ರತಿಯೊಂದು ಕಡೆಯೂ ಅವರದ್ದೇ ಆದ ನಿಯಮಗಳಿರುತ್ತವೆ. ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ ಮತ್ತು ನಾವು ಅವರ ಪ್ರಯತ್ನವನ್ನು ಬೆಂಬಲಿಸುತ್ತೇವೆ ಎಂದು ರಸೆಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.