Bangalore: ಜಾಲಿರೈಡ್‌ ಹೋದಾಗ ಬುಲೆಟ್‌ಗೆ ಕಾರು ಡಿಕ್ಕಿ; ಯುವಕ ದುರ್ಮರಣ


Team Udayavani, Mar 31, 2024, 1:08 PM IST

Bangalore: ಜಾಲಿರೈಡ್‌ ಹೋದಾಗ ಬುಲೆಟ್‌ಗೆ ಕಾರು ಡಿಕ್ಕಿ; ಯುವಕ ದುರ್ಮರಣ

ಬೆಂಗಳೂರು: ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಬಂದ ಕಾರು ಚಾಲಕ ಬುಲೆಟ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್‌ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವರ್ತೂರು ನಿವಾಸಿ ಪ್ರಭು ತಮಿಳುಸೆಲ್ವನ್‌(30) ಮೃತ ಸವಾರ. ಘಟನೆಯಲ್ಲಿ ಹಿಂಬದಿ ಸವಾರ ಅಚಿತ್‌ಗೌಡ(23) ಗಾಯಗೊಂಡಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಕೃತ್ಯ ಎಸಗಿದ ಕಾರು ಚಾಲಕ, ರಾಮನಗರ ಮೂಲದ ತಿಮ್ಮರಾಜು(25) ಎಂಬಾತನನ್ನು ಬಂಧಿಸಲಾಗಿದೆ.

ತಮಿಳುನಾಡು ಮೂಲದ ಪ್ರಭು ತಮಿಳುಸೆಲ್ವನ್‌ ಹತ್ತಾರು ವರ್ಷಗಳಿಂದ ಇಲ್ಲಿಯೇ ವಾಸವಾಗಿದ್ದು, 5 ವರ್ಷಗಳಿಂದ ಮುಂಬೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ವರ್ಷಗಳಿಂದ ವರ್ಕ್‌ ಫ್ರಂ ಹೋಮ್‌ ಮಾಡುತ್ತಿದ್ದರು. ಶುಕ್ರವಾರ ತಡರಾತ್ರಿ ಸ್ನೇಹಿತ ಅಚಿತ್‌ಗೌಡ ಜತೆ ಇಂದಿರಾನಗರಕ್ಕೆ ಬಂದಿದ್ದ ಪ್ರಭು, ತಡರಾತ್ರಿ 1 ಗಂಟೆಗೆ ಇಬ್ಬರು ಕ್ಯಾಬ್‌ನಲ್ಲಿ ವರ್ತೂರಿನ ಮನೆಗೆ ಹೋಗಿದ್ದಾರೆ. ಬಳಿಕ ಇಬ್ಬರು ಬುಲೆಟ್‌ನಲ್ಲಿ ಜಾಲಿರೈಡ್‌ಗೆ ಹೋಗಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಮತ್ತೂಂದೆಡೆ ವರ್ತೂರು ಕೊಡಿಯಿಂದ ಬರುತ್ತಿದ್ದ ಕಾರು ಚಾಲಕ ತಿಮ್ಮರಾಜು, ಯಾವುದೇ ಸೂಚನೆ ನೀಡದೆ ಏಕಾಏಕಿ ಬಲ ತಿರುವು ಪಡೆದುಕೊಂಡಿದ್ದು, ವರ್ತೂರು ಮಸೀದಿ ಬಳಿ ಎದುರು ಬಂದ ಬುಲೆಟ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕೆಳಗೆ ಬಿದ್ದ ಬೈಕ್‌ ಸವಾರ ಪ್ರಭು ತಲೆ ಮತ್ತು ದೇಹದ ಇತರೆ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿತ್ತು. ಹಿಂಬದಿ ಸವಾರ ಅಚಿತ್‌ಗೌಡನಿಗೂ ಗಾಯಗಳಾಗಿತ್ತು. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ನೀಡಿದ ವೈದ್ಯರು ಪ್ರಭು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ದೃಢಪಡಿಸಿದ್ದಾರೆ.

ಹಿಂಬದಿ ಸವಾರ ಅಚಿತ್‌ಗೌಡ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಂಡಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯತನದಿಂದ ಕಾರು ಚಾಲನೆ ಆರೋಪದಡಿ ಕಾರು ಚಾಲಕ ತಿಮ್ಮರಾಜುನನ್ನು ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು. ವೈಟ್‌ಫೀಲ್ಡ್‌ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.