Koppal BJP ಅಭ್ಯರ್ಥಿ ಖಂಡಿತವಾಗಿ ಗೆಲುವು ಸಾಧಿಸುತ್ತಾರೆ: ಸಂಗಣ್ಣ ಕರಡಿ


Team Udayavani, Apr 1, 2024, 10:09 PM IST

1-wewewq

ಕುಷ್ಟಗಿ: ಕೊಪ್ಪಳ ಲೋಕಸಭಾ ಬಿಜೆಪಿ ಅಭ್ಯರ್ಥಿ ಯಂಗ್ ಆ್ಯಂಡ್ ಎನರ್ಜಟಿಕ್ ಇದ್ದಾರೆ ಅವರಿಗೂ ರಾಜಕೀಯ ಕುಟುಂಬದ ಹಿನ್ನೆಲೆ ಇದೆ. ಅಭ್ಯರ್ಥಿ ಬಗ್ಗೆ ಯಾವೂದೇ ಕಾಮೆಂಟ್ಸ್ ಇಲ್ಲ, ನಮ್ಮ ಪಕ್ಷಕ್ಕೆ ಸೂಕ್ತ ಅಭ್ಯರ್ಥಿ ಸಿಕ್ಕಿದ್ದಾರೆ ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ ಹೇಳಿಕೆ ನೀಡಿದ್ದಾರೆ.

ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮತದಾರರು ಮತ್ತೊಮ್ಮೆ ಮೋದಿ ಪ್ರಧಾನಿಯಾಗುವ ಆಪೇಕ್ಷೆ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖಂಡಿತವಾಗಿ ಗೆಲುವು ಸಾಧಿಸುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸವಾಲುಗಳನ್ನು ಸ್ವೀಕರಿಸಬೇಕಿದ್ದು, ಫಲ, ಪ್ರತಿಫಲ ದೇವರಿಗೆ ಬಿಟ್ಟಿದ್ದು ಎಂದರು.

ಈ ಕ್ಷೇತ್ರದ ಬಿಜೆಪಿ ಗೆಲ್ಲಿಸುವ ಅಭ್ಯರ್ಥಿ ಹೊಣೆಗಾರಿಕೆ ಹೆಚ್ಚಾಯಿತೇ? ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ಹೆಚ್ಚಾಗಿರುವುದನ್ನು ಒಪ್ಪಿಕೊಳ್ಳುವೆ ಇದರ ಜತೆಗೆ ಜಗತ್ತು ಕಂಡ ನಾಯಕ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಗೆಲವು ಸಾಕ್ಷಿಯಾಗಲಿದೆ ಎಂದರು.

ಪಕ್ಷ ಇದೆ, ಪಕ್ಷದ ಸಂಘಟನೆ ಇದೆ ಲಕ್ಷಾಂತರ ಕಾರ್ಯಕರ್ತರಿರುವ ದೊಡ್ಡ ಶಕ್ತಿ ಇದೆ. ಜನರು ಸಹ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಬಯಸಿದ್ದು ಇದೆಲ್ಲವೂ ಡಾ. ಬಸವರಾಜ ಕ್ಯಾವಟರ್ ಗೆಲುವಿಗೆ ಪೂರಕವಾಗಲಿದೆ ಎಂದರು.

ಮಾಜಿ ಸಚಿವ ಹಾಲಪ್ಪ ಆಚಾರ್ , ಕುಷ್ಟಗಿ ಸಾಸಕ ದೊಡ್ಡನಗೌಡ ಪಾಟೀಲ ಅವರ ಬಗ್ಗೆ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ಸಂಗಣ್ಣ, ಅವರವರಿಗೆ ಅವರದೇ ಆದ ವಿಚಾರ ಪ್ರತಿಪಾದಿಸುವ ಹಕ್ಕು ಇರುತ್ತದೆ. ಅವರು ತಮಗೇ ಬೇಕಿರುವುದು ಪ್ರತಿಪಾದನೆ ಮಾಡಿದ್ದಾರೆ. ಜಿಲ್ಲಾ ಬಿಜೆಪಿ ಅಧ್ಯಕ್ಷರ ನೇಮಕ ಪಕ್ಷದ ಪ್ರಕ್ರಿಯೆಯಾಗಿದ್ದು, ನವೀನ್ ಗುಳಗಣ್ಣವರ್ ಅವರನ್ನು ಜಿಲ್ಲಾಧ್ಯಕ್ಷ ನಾವು ಮಾಡಿಸಿದ್ದು ಅಲ್ಲ. ನಾನು ಸ್ಥಳೀಯ ಚಂದ್ರ ಶೇಖರ ಕವಲೂರು ಅವರನ್ನು ನೇಮಿಸಲು ಸೂಚಿಸಿದ್ದೆ. ಬಸವರಾಜ ದಡೇಸುಗೂರು ಆಕಾಂಕ್ಷಿಯಾಗಿದ್ದರು ಜಿಲ್ಲಾಧ್ಯಕ್ಷರು ನಮ್ಮಿಂದ ಆಯ್ಕೆಯಾಗಿಲ್ಲ ಅದು ಹೈಕಮಾಂಡ್ ತೀರ್ಮಾನ ಎಂದರು.

ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕ ಬಸವರಾಜ್ ದಡೇಸುಗೂರು, ವಿಜಯಕುಮಾರ ಹಿರೇಮಠ, ದೇವೇಂದ್ರಪ್ಪ ಬಳೂಟಗಿ, ಕೆ. ಮಹೇಶ ಮತ್ತಿತರಿದ್ದರು.

ಟಾಪ್ ನ್ಯೂಸ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rava

Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್‌ ರಾವಲ್‌ ಸಲಹೆ

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.