Delhi ಕಚೋರಿ ಶಾಪ್‌ ಗೆ ನುಗ್ಗಿದ ಮರ್ಸಿಡಿಸ್‌ ಕಾರು…ಪ್ರಾಣಾಪಾಯದಿಂದ ಗ್ರಾಹಕರು ಪಾರು!

ಸುತ್ತ-ಮುತ್ತ ಇದ್ದ ಟೇಬಲ್‌, ಜನರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರು.

Team Udayavani, Apr 2, 2024, 1:36 PM IST

Delhi ಕಚೋರಿ ಶಾಪ್‌ ಗೆ ನುಗ್ಗಿದ ಮರ್ಸಿಡಿಸ್‌ ಕಾರು…ಪ್ರಾಣಾಪಾಯದಿಂದ ಗ್ರಾಹಕರು ಪಾರು!

ನವದೆಹಲಿ: ದೆಹಲಿಯ ಕಾಶ್ಮೀರಿ ಗೇಟ್‌ ಪ್ರದೇಶದ ಜನಪ್ರಿಯ ಫತೇಹ್‌ ಕಚೋರಿ ಶಾಪ್‌ ನಲ್ಲಿ ನೆರೆದಿದ್ದ ಹತ್ತಾರು ಮಂದಿಗೆ ದುಸ್ವಪ್ನವಾಗಿ ಕಾಡಿತ್ತು..ಅದಕ್ಕೆ ಕಾರಣ ಮಿತಿಮೀರಿದ ವೇಗದಲ್ಲಿ ಬಂದ ಮರ್ಸಿಡಿಸ್‌ ಎಸ್‌ ಯುವಿ ಕಾರು ಏಕಾಏಕಿ ಒಳನುಗ್ಗಿದ್ದು, ಇದರ ಪರಿಣಾಮ ಆರು ಮಂದಿ ಗ್ರಾಹಕರು ಗಾಯಗೊಂಡಿರುವ ಘಟನೆ ಭಾನುವಾರ (ಮಾರ್ಚ್‌ 31) ನಡೆದಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:Mangaluru: ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ

ಕಚೋರಿ ಶಾಪ್‌ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಈ ಭಯಾನಕ ಘಟನೆ ಸೆರೆಯಾಗಿದೆ. ಭಾನುವಾರ ಮಧ್ಯಾಹ್ನ‌ 3ಗಂಟೆ ಹೊತ್ತಿಗೆ ಕಚೋರಿ ಶಾಪ್‌ ನಲ್ಲಿ ಹಲವು ಗ್ರಾಹಕರು ಚಾಟ್ಸ್‌ ಸೇವನೆಯಲ್ಲಿ ತೊಡಗಿದ್ದರು. ಆಗ ಮರ್ಸಿಡಿಸ್‌ ಎಸ್‌ ಯುವಿ ಕಾರು ದಿಢೀರನೆ ಶಾಪ್‌ ಒಳಗೆ ನುಗ್ಗಿದ್ದು, ಸುತ್ತ-ಮುತ್ತ ಇದ್ದ ಟೇಬಲ್‌, ಜನರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರು.

ಗೋಡೆಗೆ ಡಿಕ್ಕಿ ಹೊಡೆದು ನಿಂತ ಎಸ್‌ ಯುವಿ ಕಾರು ರಿವರ್ಸ್‌ ತೆಗೆದು ಶಾಪ್‌ ನಿಂದ ಹೊರಗೆ ನಿಂತ ಮೇಲೆ ಗ್ರಾಹಕರು ತಮ್ಮ ಕುಟುಂಬ ಸದಸ್ಯರನ್ನು ಗಾಬರಿಯಲ್ಲಿ ಹುಡುಕುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಗ್ರಾಹಕನೊಬ್ಬ ಕಾರಿನ ಅಡಿಭಾಗದಲ್ಲಿ ಪತ್ನಿ ಬಿದ್ದಿರಬಹುದೇ ಎಂದು ಹುಡುಕುತ್ತಿದ್ದ ವೇಳೆ ಹಿಂಭಾಗ ಹೋಗಿ ಬಿದ್ದಿದ್ದ ಪತ್ನಿಯೇ ಎದ್ದು ಬಂದು ಪತಿಯನ್ನು ಕರೆದಾಗ ಪತಿ ನಿಟ್ಟುಸಿರು ಬಿಟ್ಟು, ಗಾಯಗೊಂಡ ಆಕೆಯನ್ನು ತಬ್ಬಿ ಹಿಡಿದು ಕರೆದೊಯ್ಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.


ಒಬ್ಬ ಗ್ರಾಹಕನ ಕಾಲಿಗೆ ಬಲವಾದ ಏಟು ಬಿದ್ದಿದ್ದು, ಕೆಲವರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದರು. ಪೊಲೀಸರ ಮಾಹಿತಿ ಪ್ರಕಾರ, ನೋಯ್ಡಾ ನಿವಾಸಿ, ಪರಾಗ್‌ ಮೈನಿ (36) ಎಂಬ ವಕೀಲ ಕಾರನ್ನು ಚಲಾಯಿಸುತ್ತಿದ್ದ. ಘಟನೆಗೆ ಸಂಬಂಧಿಸಿದಂತೆ ಮಿತಿಮೀರಿದ ವೇಗದಲ್ಲಿ ಕಾರನ್ನು ಚಲಾಯಿಸಿದ ಆರೋಪದಡಿ ಪರಾಗ್‌ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಕೊನೆಗೂ ಮದುವೆ ವಿಚಾರದಲ್ಲಿ ಮೌನ ಮುರಿದ ರಾಹುಲ್

Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

1-aaaa

UP; ಪತ್ನಿಯನ್ನು ಇಬ್ಬರು ಪುರುಷರೊಂದಿಗೆ ಹೋಟೆಲ್ ರೂಮ್ ನಲ್ಲಿ ಕಂಡ ವೈದ್ಯ!; ರಾದ್ದಾಂತ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.