Naxal Hunting; 2 ರಾಜ್ಯಗಳಲ್ಲಿ ಎನ್‌ಕೌಂಟರ್‌: ಒಂದೇ ದಿನ 13 ನಕ್ಸಲರ ಹತ್ಯೆ

ಛತ್ತೀಸ್‌ಗಡದ ಬಿಜಾಪುರದಲ್ಲಿ 11, ಮಧ್ಯಪ್ರದೇಶದಲ್ಲಿ 2 ನಕ್ಸಲರ ಸದೆಬಡಿದ ಭದ್ರತಾಪಡೆ

Team Udayavani, Apr 3, 2024, 7:00 AM IST

Encounter in 2 states

ರಾಯ್‌ಪುರ/ಬಾಲಾಘಾಟ್‌: ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶಗಳಲ್ಲಿ ಮಂಗಳವಾರ ನಡೆದ ನಕ್ಸಲ್‌ ನಿಗ್ರಹ ಕಾರ್ಯಾಚರಣೆಯಲ್ಲಿ ಒಟ್ಟು 13 ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಲೋಕಸಭೆ ಚುನಾವಣೆಗೆ ಕೇವಲ 16 ದಿನಗಳು ಬಾಕಿಯಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 11 ನಕ್ಸಲರನ್ನು ಹತ್ಯೆಗೈಯ್ಯಲಾಗಿದ್ದು, ಇತ್ತೀಚೆಗಿನ ವರ್ಷಗಳಲ್ಲಿ ನಡೆದ ಅತಿದೊಡ್ಡ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಇದಾಗಿದೆ. ಬಿಜಾಪುರ ಜಿಲ್ಲೆಯು ಬಸ್ತಾರ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದು, ಎ. 19ರ ಮೊದಲ ಹಂತದಲ್ಲೇ ಇಲ್ಲಿ ಚುನಾವಣೆ ನಡೆಯಲಿದೆ.

ಛತ್ತೀಸ್‌ಗಢದ ಲೇಂದ್ರಾ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮುಂಜಾನೆ 6 ಗಂಟೆಗೆ ಗುಂಡಿನ ಚಕಮಕಿ ಆರಂಭವಾಗಿತ್ತು. ಬಳಿಕ ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ 11 ನಕ್ಸಲರ ಮೃತದೇಹಗಳು ಪತ್ತೆಯಾಗಿವೆ. ಜತೆಗೆ ಲಘು ಮಷಿನ್‌ ಗನ್‌, ಗ್ರೆನೇಡ್‌ ಲಾಂಚರ್‌ಗಳು ಹಾಗೂ ಇತರ ಶಸ್ತ್ರಾಸ್ತ್ರಗಳು ಸಿಕ್ಕಿವೆ ಎಂದು ಬಸ್ತಾರ್‌ ವಲಯದ ಐಜಿಪಿ ಸುಂದರ್‌ರಾಜ್‌ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲೂ ಎನ್‌ಕೌಂಟರ್‌

ಮಧ್ಯಪ್ರದೇಶದ ಬಾಲಘಾಟ್‌ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ. ಈ ಹಿಂದೆಯೇ ಸಜಂತಿ ಅಲಿಯಾಸ್‌ ಕ್ರಾಂತಿ ಮತ್ತು ರಾಘು ಅಲಿಯಾಸ್‌ ಶೇರ್‌ ಸಿಂಗ್‌ ಅವರನ್ನು ಹಿಡಿದುಕೊಟ್ಟರೆ ನಗದು ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು. ಇವರಿಬ್ಬರೂ ಈಗ ಹತ್ಯೆಗೀಡಾಗಿದ್ದು, ಅವರ ಬಳಿಯಿದ್ದ ಎಕೆ-47 ರೈಫ‌ಲ್‌, 12 ಬೋರ್‌ ರೈಫ‌ಲ್‌ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೇಸಗೆಯಲ್ಲೇ ಹೆಚ್ಚು ದಾಳಿ

ಗಮನಾರ್ಹ ಅಂಶವೆಂದರೆ ನಕ್ಸಲರು ಹೆಚ್ಚಾಗಿ ಕುಶಲ ಪ್ರತಿದಾಳಿ (ಟಿಸಿಒಸಿ)ಯನ್ನು ಪ್ರತೀ ಬಾರಿ ಬೇಸಗೆಯಲ್ಲಿ ಅಂದರೆ ಮಾರ್ಚ್‌ನಿಂದ ಜೂನ್‌ವರೆಗಿನ ಅವಧಿಯಲ್ಲೇ ಕೈಗೊಳ್ಳುತ್ತಾರೆ. ಈ ಮೂಲಕ ತಮ್ಮ ಕಾರ್ಯಚಟುವಟಿಕೆಗಳಿಗೆ ವೇಗ ನೀಡುತ್ತಾರೆ. ಬಸ್ತಾರ್‌ ಪ್ರದೇಶದಲ್ಲಿ ಈವರೆಗೆ ಭದ್ರತಾಪಡೆಗಳ ಮೇಲೆ ಅತೀ ಹೆಚ್ಚಿನ ಸಂಖ್ಯೆಯ ದಾಳಿ ನಡೆದಿರುವುದು ಇದೇ ಅವಧಿಯಲ್ಲಿ.

ಬಸ್ತಾರ್‌: 3 ತಿಂಗಳಲ್ಲಿ 44 ನಕ್ಸಲರ ಹತ್ಯೆ

ಮಾ. 27ರಂದು ಛತ್ತೀಸ್‌ಗಢದ ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 6 ಮಂದಿ ನಕ್ಸಲರು ಹತರಾಗಿದ್ದರು. ಮಂಗಳವಾರದ ಎನ್‌ಕೌಂಟರ್‌ನ ಸಾವು-ನೋವನ್ನೂ ಸೇರಿಸಿದರೆ ಪ್ರಸಕ್ತ ವರ್ಷ ಅಂದರೆ ಕೇವಲ 3 ತಿಂಗಳಲ್ಲಿ ಬಸ್ತಾರ್‌ ಪ್ರಾಂತ್ಯವೊಂದರಲ್ಲೇ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತ್ಯೆಗೀಡಾದ ನಕ್ಸಲರ ಸಂಖ್ಯೆ 44ಕ್ಕೇರಿದೆ.

ಟಾಪ್ ನ್ಯೂಸ್

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.