ವ್ಯಾಪಾರಸ್ಥರ ಬದುಕು ಅತಂತ್ರ; ಬಿಸಿಲಿನ ಧಗೆ- ಪ್ರವಾಸಿ ತಾಣ ಬಿಕೋ

ಶೇ. 5ರಿಂದ 10ರಷ್ಟು ಮಾತ್ರ ಪ್ರವಾಸಿಗರು, ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ

Team Udayavani, Apr 3, 2024, 2:55 PM IST

ವ್ಯಾಪಾರಸ್ಥರ ಬದುಕು ಅತಂತ್ರ; ಬಿಸಿಲಿನ ಧಗೆ- ಪ್ರವಾಸಿ ತಾಣ ಬಿಕೋ

ಉದಯವಾಣಿ ಸಮಾಚಾರ
ಅಮೀನಗಡ: ಬಿಸಿಲಿನ ಧಗೆಗೆ ದೇವಾಲಯಗಳ ತೊಟ್ಟಿಲು ಎಂದೇ ಖ್ಯಾತಿ ಪಡೆದ ಐತಿಹಾಸಿಕ ಪ್ರವಾಸಿ ತಾಣ ಐಹೊಳೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು, ಇದರಿಂದ ಪ್ರವಾಸಿಗರಿಲ್ಲದೆ ಪ್ರವಾಸಿ ತಾಣಗಳು ಬಿಕೋ
ಎನ್ನುತ್ತಿವೆ.

ಹೌದು, ಕಳೆದ ಒಂದು ತಿಂಗಳ ಹಿಂದೆ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಐತಿಹಾಸಿಕ ಐಹೊಳೆ ಪ್ರವಾಸಿ ತಾಣಗಳು, ಈಗ ಮಳೆಯೂಯಿಲ್ಲದೆ, ತಾಪಮಾನ ಶೇ 39 ರಿಂದ 40 ಡಿಗ್ರಿ ಸೆಲ್ಸಿಯಸ್‌ ತಲುಪಿದ್ದು, ಉಷ್ಣಾಂಶ ಹೆಚ್ಚಾಗಿದ್ದರಿಂದ, ಪ್ರವಾಸಿಗರು ಪ್ರವಾಸಿ ತಾಣಗಳತ್ತ ಸುಳಿಯುತ್ತಿಲ್ಲ, ಇದರಿಂದ ಐತಿಹಾಸಿಕ ಐಹೊಳೆಯಲ್ಲಿ ಪ್ರವಾಸಿಗರಿಲ್ಲದೆ ಸ್ಮಾರಕಗಳು ಬಿಕೋ ಎನ್ನುತ್ತಿವೆ. ಪ್ರವಾಸಿ ಮಾರ್ಗದರ್ಶಿಗಳು ಎಂದಿನಂತೆ ಪ್ರಮುಖ ಸ್ಮಾರಕಗಳ ಬಳಿ ಪ್ರವಾಸಿಗರ ಆಗಮನಕ್ಕಾಗಿ ಕಾದು ಕುಳಿತಿದ್ದಾರೆ.

ದೇವಾಲಯಗಳ ತೊಟ್ಟಿಲು: ಚಾಲುಕ್ಯರ ಕಾಲದ ಪ್ರಮುಖ ನಗರವಾಗಿದ್ದ ಐಹೊಳೆ, ರಾಷ್ಟ್ರೀಯ ಪ್ರವಾಸಿ ತಾಣವಾಗಿದೆ, ಕಲಾ ಇತಿಹಾಸದಲ್ಲಿ ದೇವಾಲಯ, ವಾಸ್ತುಶೈಲಿಗಳ ತೊಟ್ಟಿಲು ಪ್ರಯೋಗಾಲಯ ಎಂದೇ ಖ್ಯಾತಿ ಪಡೆದಿರುವ ಮತ್ತು ಸಂಸತ ಭವನ ನಿರ್ಮಾಣ ಪ್ರೇರಣೆ ಎನ್ನಲಾಗುವ ಐತಿಹಾಸಿಕ ಪ್ರವಾಸಿ ತಾಣದ ಐಹೊಳೆಯಲ್ಲಿ ದುರ್ಗಾ ದೇವಾಲಯ, ಲಾಡಖಾನ, ರಾವಳಪಡಿ ಗುಹಾಂತರ, ಹುಚ್ಚುಮಲ್ಲಿ ದೇವಾಲಯ, ಗಳಗನಾಥ ದೇವಾಲಯ, ಮೇಗುತಿ ದೇವಾಲಯ, ಚಕ್ರ ದೇವಾಲಯ ಸೇರಿ ಸುಮಾರು 125 ಕ್ಕೂ ಹೆಚ್ಚು ದೇವಾಲಯಗಳನ್ನು ಪುರಾತತ್ವ ಇಲಾಖೆ 22 ಗುಂಪುಗಳಾಗಿ ವಿಂಗಡಿಸಿದೆ.

ಇಲ್ಲಿಯ ಪ್ರವಾಸಿ ತಾಣಗಳನ್ನು ವೀಕ್ಷಣೆ ಮಾಡಲು ದೇಶ-ವಿದೇಶಗಳಿಂದ ಪ್ರವಾಸಿಗರು ನಿತ್ಯ ಭೇಟಿ ನೀಡಿ, ಚಾಲುಕ್ಯರ ಕಾಲದ ಐತಿಹಾಸಿಕ ದೇವಾಲಯಗಳನ್ನು ವೀಕ್ಷಣೆ ಮಾಡಿ ಸಂತಸ ಪಡುತ್ತಾರೆ ಆದರೆ ಬಿರು ಬಿಸಿಲಿನಿಂದ ಐತಿಹಾಸಿಕ ಪ್ರವಾಸಿ ತಾಣಗಳನ್ನು ವೀಕ್ಷಣೆ ಮಾಡಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ.

ಬಿಸಿಲಿನ ಝಳದಿಂದ ಪ್ರವಾಸಕ್ಕೆ ಬರುತ್ತಿರುವವರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ, ಟಿಕೆಟ್‌ ಕೌಂಟರ್‌ಗಳ ಬಳಿ ಜನರಿಲ್ಲದಾಗಿದೆ. ಐಹೊಳೆಯಲ್ಲಿ ಅಲ್ಲೊಬ್ಬ, ಇಲ್ಲೊಬ್ಬ ಪ್ರವಾಸಿಗರು ಕಾಣಿಸುತ್ತಿರುವುದು ಕಂಡು ಬಂದಿದೆ.

ಜೀವನ ಕಷ್ಟ: ಒಂದು ಕಡೆ ಮಳೆಯಿಲ್ಲದೆ ಬರಗಾಲ, ಮತ್ತೊಂದು ಕಡೆ ಬಿರು ಬಿಸಿಲಿನಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದ್ದರಿಂದ, ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರನ್ನು ನಂಬಿ ಬದುಕು ಕಟ್ಟಿಕೊಂಡ ಹಣ್ಣು ವ್ಯಾಪಾರಸ್ಥರು, ಹೊಟೇಲ್‌ ಸೇರಿದಂತೆ ಇತರ ಸಣ್ಣಪುಟ್ಟ, ವ್ಯಾಪಾರಸ್ಥರು, ವ್ಯಾಪಾರವಿಲ್ಲದೆ ಕುಟುಂಬದ ಬದುಕಿನ ಬಂಡಿದೂಗಿಸಲು ಚಿಂತಾಕ್ರಾಂತರಾಗಿದ್ದಾರೆ. ಅಷ್ಟೆ ಅಲ್ಲದೆ ಇದೇ ರೀತಿ ಮುಂದುವರೆದರೆ ಪ್ರವಾಸಿಗರನ್ನು ನಂಬಿರುವ ಹಲವಾರು ಕುಟುಂಬಗಳ ಜೀವನ ಕಷ್ಟವಾಗುತ್ತದೆ ಎನ್ನುತ್ತಾರೆ ಸ್ಥಳಿಯ ವ್ಯಾಪಾರಸ್ಥರು.

ಐತಿಹಾಸಿಕ ರಾಷ್ಟ್ರೀಯ ಪ್ರವಾಸಿ ತಾಣ ಐಹೊಳೆಗೆ ಕಳೆದು ಒಂದು ತಿಂಗಳಿಂದ ಪ್ರವಾಸಿಗರ ಸಂಖ್ಯೆ ಬಹಳಷ್ಟು ಕಡಿಮೆಯಾಗಿದೆ. ನಿತ್ಯ ಶೇ. 5ರಿಂದ 10ರಷ್ಟು ಮಾತ್ರ ಪ್ರವಾಸಿಗರು, ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ.
*ಬಿ.ಡಿ.ಮುತ್ತಗಿ, ಸಿಬ್ಬಂದಿ, ಭಾರತೀಯ ಪುರಾತತ್ವ ಇಲಾಖೆ, ಐಹೊಳೆ

*ಎಚ್‌.ಎಚ್‌.ಬೇಪಾರಿ

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.