Vijayapura ಕೊಳವೆ ಬಾವಿ ಪ್ರಕರಣ: ವಿಜಯಪುರ ಜಿಲ್ಲೆಯಲ್ಲಿ ಮೂರನೇ ಪ್ರಕರಣ
ಕಾಂಚನಾ, ಅಕ್ಷತಾ ದುರಂತ ಘಟನೆಗಳ ಬಳಿಕ ಸಾತ್ವಿಕ ಪ್ರಕರಣ
Team Udayavani, Apr 3, 2024, 9:59 PM IST
ವಿಜಯಪುರ : ಎರಡು ವರ್ಷದ ಸಾತ್ವಿಕ ಮುಜಗೊಂಡ ವಿಫಲ ಕೊಳವೆ ಬಾವಿಯಲ್ಲಿ ಬಿದ್ದ ಪ್ರಕರಣದೊಂದಿಗೆ ಜಿಲ್ಲೆಯಲ್ಲಿ ಕಳೆದ 16 ವರ್ಷಗಳಲ್ಲಿ ಕೊಳವೆ ಬಾವಿಗೆ ಮಗು ಬಿದ್ದ ಮೂರನೇ ಪ್ರಕರಣ ಜರುಗಿದೆ.
2008 ರಲ್ಲಿ ಇಂಡಿ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ನಡೆದದ್ದ ಕೊಳವೆ ಬಾವಿಯಲ್ಲಿ ಕಾಂಚನಾ ಎಂಬ ಬಾಲಕಿ ಬಿದ್ದಿದ್ದಳು. ಇದು ರಾಜ್ಯದ ಎರಡನೇ ಕೊಳವೇ ಬಾವಿ ಪ್ರಕರಣ ಎನಿಸಿಕೊಂಡಿತ್ತು. ಸದ್ಯ ಚಡಚಣ ತಾಲೂಕಿನಲ್ಲಿರುವ ದೇವರನಿಂಬರಗಿ ಗ್ರಾಮದಲ್ಲಿನ ಕೊಳವೆ ಬಾವಿಗೆ ಬಿದ್ದಿದ್ದ ಕಾಂಚನಾ ಉರ್ಫ ಏಗವ್ವ ಎಂಬ ಬಾಲೆಯನ್ನು ಕೊಳವೆ ಬಾವಿಯಿಂದ ಮೇಲೆತ್ತುವಲ್ಲಿ ಹಿಟಾಚಿ, ಜೆಸಿಬಿ ಬಳಸಿ ನಡೆಸಿದ ನಿರಂತರ ಕಾರ್ಯಾರಣೆ ಬಳಿಕವೂ ಬದುಕಿ ಬಂದಿರಲಿಲ್ಲ.
ಇದಾದ ಬಳಿಕ 2014 ರಲ್ಲಿ ಯಾದಗಿರಿ ಜಿಲ್ಲೆಯಿಂದ ಕೂಲಿಗಾಗಿ ಬಂದಿದ್ದ ಹನುಮಂತ ಪಾಟೀಲ ಎಂಬಬರ ಮಗಳು ಮೂರು ವರ್ಷದ ಅಕ್ಷತಾ ಎಂಬ ಬಾಲೆ ಕೂಡ ವಿಜಯಪುರ ತಾಲೂಕಿನಲ್ಲಿ ಇಂಥದ್ದೇ ದುರಂತದಲ್ಲಿ ಸಿಲುಕಿ ಸಾವಿಗೀಡಾಗಿದ್ದಳು.
ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದ ಜಮೀನಿನಲ್ಲಿ ಅಕ್ಷತಾ ಪ್ರಕರಣ ನಡೆದಿತ್ತು. ಹೆತ್ತವರು ಕೂಲಿಗಾಗಿ ತೋಟದ ವಸ್ತಿಯಲ್ಲಿ ಇದ್ದಾಗ ಪಕ್ಕದ ಜಮೀನನಲ್ಲಿ ಆಟವಾಡಲು ಹೋಗಿದ್ದ ಅಕ್ಷತಾ ವಿಫಲವಾಗಿದ್ದ ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿದ್ದಳು.
ಬಾಲಕಿಯ ರಕ್ಷಣೆಗಾಗಿ, ಹೈದ್ರಾಬಾದ್ನಿಂದ ಎನ್ಡಿಆರ್ಎಫ್, ಬೆಳಗಾವಿಯಿಂದ ಎಸ್ಡಿಆರ್ಎಫ್ ಸೇರಿದಂತೆ ದೇಶದ ವಿವಿಧ ಕಡೆಗಳಿಂದ ಆಗಮಿಸಿದ್ದ ರಕ್ಷಣಾ ತಂಡಗಳು ವಾರ ಪೂರ್ತಿ ನಡೆಸಿದ ಕಾರ್ಯಾಚರಣೆ ಬಳಿಕವೂ ಸಫಲವಾಗಿ ಅಕ್ಷತಾ ಬದುಕಿ ಬಂದಿರಲಿಲ್ಲ.
16 ವರ್ಷಗಳಲ್ಲಿ ಕೊಳವೆಯಲ್ಲಿ ಮಗು ಬಿದ್ದ ಎರಡು ಕಹಿ ಘಟನೆಗಳು ಮಾಸುವ ಮುನ್ನವೇ ಇದೀಗ ಇಂಡಿ ತಾಲೂಕಿನಲ್ಲೇ ಸಾತ್ವಿಕ್ ಮುಜುಗೊಂಡ ಪ್ರಕರಣ ನಡೆದಿದ್ದು, ರಕ್ಷಣಾ ಕಾರ್ಯಾಚರಣೆ ಬಿರುಸಾಗಿ ಸಾಗಿದೆ.
ಕೊಳವೆ ಬಾವಿಗೆ ಬಿದ್ದು ಮಗು ಮೃತಪಟ್ಟ ಮೊದಲ ದುರಂತ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿತ್ತು. 2005 ರಲ್ಲಿ ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನೀರಮಾನವಿ ಯಲ್ಲಮ್ಮದೇವಿ ಗುಡ್ಡದ ಪರಿಸರದಲ್ಲಿ ಸಂದೀಪ ಎಂಬ ಬಾಲಕ ಇದೇ ರೀತಿ ಕೊಳವೆ ಬಾವಿಗೆ ಬಿದ್ದು ದುರಂತ ಸಾವು ಕಂಡಿದ್ದ.
ಸಣ್ಣವೆಂಟಕೇಶ ಎಂಬವರ ಜಮೀನಿನಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂದೀಪ ವಿಫಲ ಕೊಳವೆ ಬಾವಿಗೆ ಬಿದ್ದು, ಐದಾರು ದಿನಗಳ ಕಾರ್ಯಾಚರಣೆ ಬಳಿಕವೂ ಬದುಕಿ ಬಂದಿರಲಿಲ್ಲ. ರಾಯಚೂರು ಜಿ.ಪಂ. ಸಿಇಒ ಆಗಿದ್ದ ಎನ್.ಮಂಜುನಾಥ ಪ್ರಸಾದ ಆಗ ಜಿಲ್ಲಾಧಿಕಾರಿ ಪ್ರಭಾರ ಹುದ್ದೆಯಲ್ಲಿದ್ದರು. ಸ್ಥಳಕ್ಕೆ ಆಗಮಿಸಿ ಇಡೀ ಕಾರ್ಯಾಚರಣೆ ಮುಗಿಯುವ ವರೆಗೂ ಸ್ಥಳದಲ್ಲೇ ಠಿಕಾಣಿ ಹೂಡಿದ್ದರು.
– ಜಿ.ಎಸ್.ಕಮತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ