Lok Sabha Election: ನಾಮಪತ್ರ ಸಲ್ಲಿಸಿದ ರಾಹುಲ್… ಆಸ್ತಿಯಲ್ಲಿ 4 ಕೋಟಿ ಹೆಚ್ಚಳ


Team Udayavani, Apr 4, 2024, 7:30 AM IST

Lok Sabha Election: ನಾಮಪತ್ರ ಸಲ್ಲಿಸಿದ ರಾಹುಲ್… ಆಸ್ತಿಯಲ್ಲಿ 4 ಕೋಟಿ ಹೆಚ್ಚಳ

ವಯನಾಡ್‌: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ ಕೇರಳದ ವಯನಾಡ್‌ ಲೋಕಸಭೆ ಕ್ಷೇತ್ರದಿಂದ ಪುನರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ, ಅವರು 20 ಕೋಟಿ ರೂ. ಆಸ್ತಿಯನ್ನು ಘೋಷಣೆ ಮಾಡಿದ್ದು, ಐದು ವರ್ಷದಲ್ಲಿ 4 ಕೋಟಿ ರೂ. ಹೆಚ್ಚಳವಾಗಿದೆ. 2019ರಲ್ಲಿ 16 ಕೋಟಿ ರೂ. ಆಸ್ತಿ ಘೋಷಿಸಿದ್ದರು.

ನಾಮಪತ್ರ ಸಲ್ಲಿಕೆ ವೇಳೆ ಸಹೋದರಿಯೂ ಆಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆ.ಸಿ.ವೇಣುಗೋಪಾಲ್‌ ಸೇರಿ ಹಿರಿಯ ನಾಯಕರು ಈ ವೇಳೆ ಹಾಜರಿದ್ದರು.

ಬುಧವಾರ ಕಾಪ್ಟರ್‌ ಮೂಲಕ ಆಗಮಿಸಿದ ರಾಹುಲ್‌ ಗಾಂಧಿ ಅವರು, ನಾಮಪತ್ರ ಸಲ್ಲಿಕೆಗೆ ಮುನ್ನ ವಯನಾಡಿನ ಕಲ್ಪೆಟ್ಟಾದಲ್ಲಿ ರೋಡ್‌ ಶೋ ನಡೆಸಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ರೋಡ್‌ ಶೋ ಮುಕ್ತಾಯ ಸ್ಥಳದಲ್ಲಿ ಮಾತನಾಡಿದ ರಾಹುಲ್‌, ಮಾನವ-ಪ್ರಾಣಿ ಸಂಘರ್ಷ ಸೇರಿದಂತೆ ವಯನಾಡಿನ ಎಲ್ಲ ಜನರ ಎಲ್ಲ ಸಮಸ್ಯೆಗಳ ಜತೆ ನಾನಿದ್ದೇನೆ. ಕ್ಷೇತ್ರದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ದೇಶ ಮತ್ತು ವಿದೇಶದ ಗಮನಸೆಳೆಯುವಂತೆ ಮಾಡುವೆ ಎಂದು ಹೇಳಿದರು. ವಯನಾಡಿನ ಹಾಲಿ ಸಂಸದರಾಗಿರುವ ರಾಹುಲ್‌ ಗಾಂಧಿ ಅವರು 2019ರ ಚುನಾವಣೆಯಲ್ಲಿ 7,06,367 ಮತ ಪಡೆದು ಗೆಲುವು ಸಾಧಿಸಿದ್ದರು. ಪ್ರಸಕ್ತ ಚುನಾವಣೆಯಲ್ಲಿ ರಾಹುಲ್‌ ಗಾಂಧಿಗೆ ಎದುರಾಗಿ ಸಿಪಿಐನಿಂದ ಅನ್ನಿ ರಾಜಾ ಮತ್ತು ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್‌ ಅವರು ಕಣದಲ್ಲಿದ್ದಾರೆ.

ರಾಗಾ ಆಸ್ತಿ 20 ಕೋಟಿ
ರಾಹುಲ್‌ ಗಾಂಧಿ ಅಂದಾಜು 20 ಕೋ. ರೂ. ಗೂ ಅಧಿಕ ಮೌಲ್ಯದ ಆಸ್ತಿ ಘೋಷಣೆ ಮಾಡಿದ್ದಾರೆ. 2019ರ ಚುನಾವಣೆ ವೇಳೆ 16 ಕೋಟಿ ರೂ. ಆಸ್ತಿ ಘೋಷಿ ಸಿದ್ದರು. ಅಂದರೆ ಕಳೆದ 5 ವರ್ಷದಲ್ಲಿ 4 ಕೋಟಿ ರೂ. ಹೆಚ್ಚಾಗಿದೆ. ರಾಹುಲ್‌ 20 ಕೋಟಿ ರೂ. ಆಸ್ತಿಯು ಅವರ ಷೇರು ಮತ್ತು ಮ್ಯೂಚುವಲ್‌ ಫ‌ಂಡ್‌ ಇತ್ಯಾದಿ ಹೂಡಿಕೆಯ ಮೌಲ್ಯವು 9.24 ಕೋಟಿ ರೂ. ಹಾಗೂ 11.15 ಕೋಟಿ ರೂ. ಸ್ಥಿರಾಸ್ತಿ ಒಳಗೊಂಡಿದೆ. 2022-23ರ ವಿತ್ತ ಸಾಲಿನಲ್ಲಿ 1.02 ಕೋ.ರೂ. ಆದಾಯ ಬಂದಿದೆ. ಕೈಯಲ್ಲಿ 55 ಸಾವಿರ ರೂ. ನಗದು ಹಾಗೂ ಬ್ಯಾಂಕ್‌ ಖಾತೆಯಲ್ಲಿ 26 ಲಕ್ಷ ರೂ. ಇದೆ. ಷೇರುಗಳಲ್ಲಿ 4.33 ಕೋಟಿ ರೂ. ಹಾಗೂ ಮ್ಯೂಚವಲ್‌ ಫ‌ಂಡ್‌ಗಳಲ್ಲಿ 3.81 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. ಕಮರ್ಶಿಯಲ್‌ ಬಿಲ್ಡಿಂಗ್‌, ಕೃಷಿ ಮತ್ತು ಕೃಷಿಯೇತರ ಜಮೀನು ಹೊಂದಿದ್ದಾರೆ.

ಸಿಪಿಐ ಅಭ್ಯರ್ಥಿ ಆಸ್ತಿ: ರಾಹುಲ್‌ ವಿರುದ್ಧ ಸ್ಪರ್ಧಿಸಿರುವ ಅನ್ನಿ ರಾಜಾ ಕೈಯಲ್ಲಿ 10 ಸಾವಿರ ರೂ. ನಗದು, 25 ಸಾವಿರ ರೂ. ಮೌಲ್ಯದ ಚಿನ್ನಾಭರಣ, 62 ಸಾವಿರ ಬ್ಯಾಂಕ್‌ ಠೇವಣಿ ಮತ್ತು 71 ಲಕ್ಷ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿ ಘೋಷಿಸಿದ್ದಾರೆ.

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.