Muslim League ; ರಾಹುಲ್ ನಾಮಪತ್ರ ಸಲ್ಲಿಕೆ ರ್‍ಯಾಲಿಯಲ್ಲಿ ಐಯುಎಂಎಲ್ ಧ್ವಜಗಳೇ ಇರಲಿಲ್ಲ!

'ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು' ಎಂದ ಸ್ಮೃತಿ ಇರಾನಿ ..'ಧೈರ್ಯವಿಲ್ಲ' ಎಂದ ಪಿಣರಾಯಿ

Team Udayavani, Apr 4, 2024, 5:55 PM IST

1-qwerqwqwe

ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆ ವೇಳೆ ಧ್ವಜ ವಿವಾದ ನಡೆದ ಕಾರಣಕ್ಕಾಗಿ ಈ ಬಾರಿ ವಯನಾಡಿನಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ರ್‍ಯಾಲಿಯಲ್ಲಿ ಮುಸ್ಲಿಂ ಲೀಗ್ ಧ್ವಜಗಳೇ ಇರಲಿಲ್ಲ. ವಿಶೇಷವೆಂದರೆ ಧ್ವಜಗಳು ಇರದಿರುವುದಕ್ಕೂ ಎಡ, ಬಲದಿಂದ ಟೀಕೆ ವ್ಯಕ್ತವಾಗಿದೆ.

ಬುಧವಾರ ನಡೆದ ರಾಹುಲ್ ಗಾಂಧಿಯವರ ರ್‍ಯಾಲಿಯಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಧ್ವಜಗಳು ಇಲದಿರುವುದು ಎದ್ದು ಕಂಡು ಕಂಡಿತು. ಕೇರಳದ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನ ಪ್ರಮುಖ ಪಾಲುದಾರ ಪಕ್ಷಗಳಲ್ಲಿ ಐಯುಎಂಎಲ್ ಕೂಡ ಒಂದು. 2019 ರಲ್ಲಿ ನಡೆದ ಭಾರೀ ವಿವಾದದ ನಂತರ ಪಕ್ಷಕ್ಕೆ ಮುಸ್ಲಿಂ ಬಾಹುಳ್ಯವಿರುವ ವಯನಾಡಿನಲ್ಲಿ ಅಲ್ಲದಿದ್ದರೂ ದೇಶದ ಇತರ ಭಾಗಗಳಲ್ಲಿ ಹೊಡೆತ ಬಿದ್ದ ಕಾರಣ ಕಾಂಗ್ರೆಸ್ ಮತ್ತು ಐಯುಎಂಎಲ್ ಕಾರ್ಯಕರ್ತರಿಗೆ ಧ್ವಜಗಳನ್ನು ರ್‍ಯಾಲಿಗೆ ತರದಂತೆ ಸೂಚನೆ ನೀಡಿರುವ ಸಾಧ್ಯತೆಯಿದೆ.

ವಿವಾದವನ್ನು ತಪ್ಪಿಸಲು ಕಾಂಗ್ರೆಸ್ ಈ ಬಾರಿ ಸುರಕ್ಷಿತ ಮಾರ್ಗವನ್ನು ಆರಿಸಿಕೊಂಡಿದ್ದರೂ, ಧ್ವಜಗಳು ಇಲ್ಲದೆ ಇದ್ದರೂ ಟೀಕೆಗಳನ್ನು ಎದುರಿಸಿದೆ. ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು ಎಂದು ಬಿಜೆಪಿಯ ನಾಯಕಿ ಸ್ಮೃತಿ ಇರಾನಿ ಹೇಳಿದ್ದಾರೆ. ” ಮುಸ್ಲಿಂ ಲೀಗ್ ಧ್ವಜಗಳನ್ನು ಮರೆಮಾಡಿರುವುದು ರಾಹುಲ್ ಗಾಂಧಿಗೆ ಮುಸ್ಲಿಂ ಲೀಗ್‌ನಿಂದ ಬೆಂಬಲ ಪಡೆಯಲು ನಾಚಿಕೆಯಾಗುತ್ತಿದೆ ಅಥವಾ ಉತ್ತರ ಭಾರತಕ್ಕೆ ಭೇಟಿ ನೀಡಿ ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಮುಸ್ಲಿಂ ಲೀಗ್ ಜತೆಗಿನ ಒಡನಾಟವನ್ನು ಮರೆಮಾಡಲು ಸಾಧ್ಯವಿಲ್ಲ ಎಂದು ಸೂಚಿಸುತ್ತದೆ.” ಎಂದು ವಯನಾಡಿನಲ್ಲಿ ಸ್ಮೃತಿ ಇರಾನಿ ಟೀಕಾ ಪ್ರಹಾರ ನಡೆಸಿದ್ದಾರೆ.

ವಯನಾಡಿನ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ನಾಮ ಪತ್ರ ಸಲ್ಲಿಕೆಗಾಗಿ ವಯನಾಡ್‌ಗೆ ಬಂದಿದ್ದ ಕೇಂದ್ರ ಸಚಿವೆ ಇರಾನಿ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಎಸ್‌ಡಿಪಿಐ, ನಿಷೇಧಿತ PFI ಬೆಂಬಲವನ್ನು ಪಡೆಯುತ್ತಿರುವುದನ್ನು ನೋಡಿ ಆಘಾತವಾಯಿತು. ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಡಿದ ಸಂವಿಧಾನದ ಪ್ರಮಾಣವನ್ನೂ ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಧೈರ್ಯವಿಲ್ಲ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಟೀಕಾ ಪ್ರಹಾರ ನಡೆಸಿದ್ದು, ಪಕ್ಷದ ಧ್ವಜವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವ ಧೈರ್ಯವಿಲ್ಲ. ಕಾಂಗ್ರೆಸ್ ಕೋಮುವಾದಿ ಶಕ್ತಿಗಳಿಗೆ ಹೆದರುವ ಮಟ್ಟಕ್ಕೆ ಕುಸಿದಿದೆ. ಕಾಂಗ್ರೆಸ್‌ ಪಕ್ಷ ಐಯುಎಂಎಲ್‌ನ ಮತಗಳನ್ನು ಬಯಸುತ್ತದೆ ಆದರೆ ಅವರ ಧ್ವಜವನ್ನು ಅಂಗೀಕರಿಸುವುದಿಲ್ಲ ಎಂದು ಹೇಳಿದ್ದಾರೆ.

ಮುಸ್ಲಿಂ ಲೀಗ್ (IUML) ನ ಧ್ವಜಗಳನ್ನು ಪಾಕಿಸ್ಥಾನಿ ಧ್ವಜಗಳೆಂದು ತಿಳಿದು 2019 ರಲ್ಲಿ ದೊಡ್ಡ ವಿವಾದ ಭುಗಿಲೆದ್ದಿತ್ತು. ಇದು ವಯನಾಡ್ ಅಥವಾ ಕರಾಚಿ/ಲಾಹೋರ್?” ಎಂದು ಪ್ರಶ್ನಿಸಿದ್ದರು. ಐಯುಎಂಎಲ್ ಧ್ವಜಗಳ ಬಗ್ಗೆ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. 2018 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ಕಾಂಗ್ರೆಸ್ ರ್‍ಯಾಲಿಯಲ್ಲಿ IUML ಧ್ವಜವನ್ನು ಪಾಕಿಸ್ಥಾನದ ಧ್ವಜ ಎಂದು ತಪ್ಪಾಗಿ ಗ್ರಹಿಸಲಾಗಿತ್ತು.

ಎಸ್‌ಡಿಪಿಐ ಬೆಂಬಲ ತಿರಸ್ಕರಿಸಿದ ಕಾಂಗ್ರೆಸ್‌

ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ದ ರಾಜಕೀಯ ಅಂಗಸಂಸ್ಥೆ ಎಸ್‌ಡಿಪಿಐ ಬೆಂಬಲದ ಕೊಡುಗೆಯನ್ನು ಕಾಂಗ್ರೆಸ್‌ ಗುರುವಾರ ತಿರಸ್ಕರಿಸಿದೆ.

ಬಹುಸಂಖ್ಯಾಕ ಹಾಗೂ ಅಲ್ಪ ಸಂಖ್ಯಾಕ ಕೋಮುವಾದಗಳೆರಡನ್ನೂ ಕಾಂಗ್ರೆಸ್‌ ಪಕ್ಷವು ವಿರೋಧಿಸುತ್ತದೆ. ಕೋಮುವಾದಿಗಳ ಬೆಂಬಲ ನಮಗೆ ಬೇಕಾಗಿಲ್ಲ. ಅದು ಎಸ್‌ಡಿಪಿಐಗೂ ಅನ್ವಯಿಸುತ್ತದೆ ಎಂದು ಕೇರಳ ಪ್ರದೇಶ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.