Gadag; ಕರಿಯಮ್ಮದೇವಿಯ 95ನೇ ಜಾತ್ರಾಮಹೋತ್ಸವ ಏ. 8ರಿಂದ ಆರಂಭ


Team Udayavani, Apr 6, 2024, 12:12 PM IST

ಕರಿಯಮ್ಮದೇವಿಯ 95ನೇ ಜಾತ್ರಾಮಹೋತ್ಸವ ಏ. 8ರಿಂದ ಆರಂಭ

ಗದಗ: ಕರಿಯಮ್ಮಕಲ್ಲು ಬಡಾವಣೆ ಸುಧಾರಣಾ ಸಮಿತಿ ವತಿಯಿಂದ ನಗರದ ಕರಿಯಮ್ಮದೇವಿಯ 95ನೇ ಜಾತ್ರಾ ಮಹೋತ್ಸವವನ್ನು ಏ. 8ರಿಂದ 10ರ ವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಎಲ್.ಡಿ. ವಂದಾವರಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 8ರಂದು ಬೆಳಿಗ್ಗೆ 10ಕ್ಕೆ ಕರಿಯಮ್ಮದೇವಿ ಬೆಳ್ಳಿ ಉತ್ಸವ ಮೂರ್ತಿ ದರ್ಶನಕ್ಕೆ ಇಡಲಾಗುವುದು. ನಂತರ ರಂಗೋಲಿ ಸ್ಪರ್ಧೆ, 11ಕ್ಕೆ ಚಿತ್ರಕಲಾ ಸ್ಪರ್ಧೆ, 11.30ಕ್ಕೆ ವಚನ ಗಾಯನ ಸ್ಪರ್ಧೆ ನಡೆಯಲಿದೆ ಎಂದರು.

ಏ. 8ರಂದು ಸಂಜೆ 6ಕ್ಕೆ ಜಾತ್ರಾ ಪ್ರಾರಂಭೋತ್ಸವ ನೆರವೇರಲಿದ್ದು, ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗೇಶ್ವರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನಗರಸಭೆ ಸದಸ್ಯರಾದ ವಿಜಯಲಕ್ಷ್ಮಿ ದಿಂಡೂರ, ಶ್ವೇತಾ ಬೆನಕವಾರಿ ಪಾಲ್ಗೊಳ್ಳುವರು ಎಂದು ಹೇಳಿದರು.

ಏ. 9ರಂದು ಮಧ್ಯಾಹ್ನ 2.30ಕ್ಕೆ ಸಕಲ ಮಂಗಳ ವಾದ್ಯಗಳೊಂದಿಗೆ ಕರಿಯಮ್ಮದೇವಿ ಪಾಲಕಿ ಉತ್ಸವ ನೆರವೇರಲಿದೆ. ಜಾತ್ರಾ ಸಮಿತಿ ಅಧ್ಯಕ್ಷ ಜಗದೀಶ ಪೂಜಾರ, ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಈಶಣ್ಣ ಮುನವಳ್ಳಿ, ಕಾಮನಳ್ಳಿ ಎಂ.ಎನ್. ಪಾಲ್ಗೊಳ್ಳುವರು. ಸಂಜೆ 5.30ಕ್ಕೆ ಮಹಾರಥೋತ್ಸವ ಜರುಗಲಿದೆ. ನಂತರ ಕೊತಬಾಳದ ಅರುಣೋದಯ ಜಾನಪದ ಕಲಾತಂಡದ ಶಂಕರಪ್ಪ ಸಂಕಣ್ಣವರ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಏ. 10ರಂದು ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ಸಂಜೆ 6ಕ್ಕೆ ಕಡುಬಿನ ಕಾಳಗ, 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಸಮಿತಿ ಕಾರ್ಯಾಧ್ಯಕ್ಷ ಸಿ.ಕೆ. ಮಾಳಶೆಟ್ಟಿ, ಮಂಜುನಾಥ ಪೂಜಾರ ಹಾಗೂ ಗೋವಿಂದಪ್ಪ ಗೌಡಪ್ಪಗೋಳ ಪಾಲ್ಗೊಳ್ಳುವರು ಎಂದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ದಿಂಡೂರ, ಮುಖಂಡರಾದ ಸಿ.ಕೆ. ಮಾಳಶೆಟ್ಟಿ, ಶಶಿಧರ ದಿಂಡೂರ, ಬಸವರಾಜ ನರೇಗಲ್, ಜಗದೀಶ್ ಪೂಜಾರ, ಶಂಕರ ಹಾನಗಲ್ ಇದ್ದರು.

ಟಾಪ್ ನ್ಯೂಸ್

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.