Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

ಎಟಿಎಂ ಕಾರ್ಡ್‌ ಇಲ್ಲದೆಯೂ ಹಣ ಡೆಪಾಸಿಟ್‌ ಸಾಧ್ಯ: ಆರ್‌ಬಿಐ

Team Udayavani, Apr 6, 2024, 12:58 PM IST

9-upi

ಮುಂಬಯಿ: ಇನ್ನು ಮುಂದೆ ನೀವು ಎಟಿಎಂ ಕೇಂದ್ರಗಳಲ್ಲೇ ಯುಪಿಐ ಮೂಲಕ ನಿಮ್ಮ ಖಾತೆಗೆ ನಗದನ್ನು ಜಮೆ ಮಾಡಬಹುದು! ಇದಕ್ಕೆ ಯಾವ ಕಾರ್ಡುಗಳ ಅಗತ್ಯವೂ ಇರುವುದಿಲ್ಲ.

ಹೌದು, ಯುಪಿಐ ಮೂಲಕ ಹಣ ಡೆಪಾಸಿಟ್‌ ಸೌಲಭ್ಯ ಒದಗಿಸುವ ಮಹತ್ವದ ನಿರ್ಧಾರವನ್ನು ಭಾರ ತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಕೈಗೊಂಡಿದೆ. ಆದರೆ ಇದು ಹೇಗೆ ಕಾರ್ಯನಿರ್ವಹಿಸಲಿದೆ ಎಂಬ ವಿವರವನ್ನು ನೀಡಿಲ್ಲ. ಸದ್ಯದಲ್ಲೇ ಈ ಕುರಿತು ವಿಸ್ತೃತ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರ್‌ ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಹೇಳಿದ್ದಾರೆ.

ಪ್ರಸ್ತುತ, ಕೇವಲ ಡೆಬಿಟ್‌ ಕಾರ್ಡ್‌ಗಳ ಮೂಲಕವಷ್ಟೇ ಎಟಿಎಂ ಕೇಂದ್ರಗಳಲ್ಲಿ ಹಣವನ್ನು ಡೆಪಾಸಿಟ್‌ ಮಾಡಲು ಸಾಧ್ಯವಾಗುತ್ತಿದೆ. ಜತೆಗೆ ಯುಪಿಐ ಮೂಲಕ ಎಟಿಎಂ ಕೇಂದ್ರಗಳಿಂದ ಹಣ ವಿತ್‌ಡ್ರಾ ಮಾಡುವ ಅವಕಾಶವನ್ನೂ ಕಲ್ಪಿಸಲಾಗಿದೆ. ಆದರೆ ಇದೇ ಮೊದಲ ಬಾರಿಗೆ ಯುಪಿಐ ಮೂಲಕ ನಗದನ್ನು ಜಮೆ ಮಾಡುವ ಸೌಲಭ್ಯ ಒದಗಿಸುವುದಾಗಿ ಆರ್‌ಬಿಐ ಹೇಳಿದೆ. ಇದಲ್ಲದೇ ಥರ್ಡ್‌ ಪಾರ್ಟಿ ಯುಪಿಐ ಆ್ಯಪ್‌ಗಳ ಮೂಲಕ ಪ್ರೀಪೇಯ್ಡ ಪೇಮೆಂಟ್‌ ಇನ್‌ಸ್ಟ್ರೆಮೆಂಟ್‌(ಪಿಪಿಐ)ಗಳನ್ನು ಲಿಂಕ್‌ ಮಾಡುವುದಕ್ಕೂ ಅನುಮತಿ ನೀಡಲು ಆರ್‌ಬಿಐ ನಿರ್ಧರಿಸಿದೆ.

ಅನುಕೂಲವೇನು?

 ಗ್ರಾಹಕರು ಬ್ಯಾಂಕ್‌ಗಳಲ್ಲಿ ಸರದಿಯಲ್ಲಿ ಕಾಯುವ ಅಗತ್ಯವಿರುವುದಿಲ್ಲ

 ಸುಲಭ ಹಾಗೂ ಸರಳವಾಗಿ ನಗದು ಠೇವಣಿ ಮಾಡಬಹುದು

 ಬ್ಯಾಂಕ್‌ ಶಾಖೆಗಳಲ್ಲಿ ನಗದು ನಿರ್ವಹಣೆಯ ಭಾರ ತಗ್ಗಲಿದೆ

ಯುಪಿಐ ಮೂಲಕ ಹಣ ಜಮೆ ಹೇಗೆ?

ಕ್ಯಾಷ್‌ ಡೆಪಾಸಿಟ್‌ ಮೆಷಿನ್‌ಗಳ ಮೂಲಕವೇ ಈ ಪ್ರಕ್ರಿಯೆ ನಡೆಸಬೇಕಾಗುತ್ತದೆ. ಪ್ರಸ್ತುತ ಡೆಬಿಟ್‌ ಕಾರ್ಡ್‌ಗಳ ಮೂಲಕ ಹಣ ಜಮೆ ಮಾಡಬೇಕೆಂದರೆ, ನೀವು ಮೊದಲು ನಿಮ್ಮ ಕಾರ್ಡ್‌ ಹಾಕಿ, ಪಿನ್‌ ನಮೂದಿಸಿ, “ಡೆಪಾಸಿಟ್‌’ ಆಯ್ಕೆಯನ್ನು ಒತ್ತಿ, ನಗದನ್ನು ಜಮೆ ಮಾಡುತ್ತೀರಿ. ಯುಪಿಐ ಮೂಲಕ ಹಣ ಜಮೆ ಮಾಡುವುದಿದ್ದರೆ, ಡೆಬಿಟ್‌ ಕಾರ್ಡ್‌ನ ಬಳಕೆಯ ಬದಲಾಗಿ ನಿಮ್ಮ ಬ್ಯಾಂಕ್‌ ಖಾತೆಯೊಂದಿಗೆ ಲಿಂಕ್‌ ಆಗಿರುವ ಯುಪಿಐ ಬಳಸಿ ಡೆಪಾಸಿಟ್‌ ಮಾಡಬೇಕಾಗುತ್ತದೆ.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

jio

Jio fiber,ಏರ್ ಫೈಬರ್ ಗ್ರಾಹಕರಿಗೆ 15 ಒಟಿಟಿ ಅಪ್ಲಿಕೇಷನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.