Horrific!;ಹಲ್ಲೆ ಮಾಡಿ ಬೀದಿಯಲ್ಲಿ ಮಹಿಳೆಯ ಅರೆಬೆತ್ತಲೆ ಮೆರವಣಿಗೆ:ಯಾರೂ ಸಹಾಯ ಮಾಡಲಿಲ್ಲ!
ಪಂಜಾಬ್ ಬಂಗಾಳಕ್ಕಿಂತ ಕಡಿಮೆ ಇಲ್ಲ ಎಂದು ಬಿಜೆಪಿ ಆಕ್ರೋಶ
Team Udayavani, Apr 6, 2024, 9:41 PM IST
ಚಂಡೀಗಢ: ಪಂಜಾಬ್ನ ತರ್ನ್ ತರನ್ನ ವಾಲ್ತೋಹಾ ಗ್ರಾಮದಲ್ಲಿ ನಡೆದ ಭೀಕರ ಮನುಕುಲವೇ ತಲೆತಗ್ಗಿಸುವ ಘಟನೆಯೊಂದರಲ್ಲಿ, 55 ವರ್ಷದ ಮಹಿಳೆಯೊಬ್ಬರನ್ನು ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದೆ.
ಸಂತ್ರಸ್ತೆಯ ಪರೇಡ್ ನಡೆಸುತ್ತಿರುವ ವಿಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಸಂತ್ರಸ್ತೆಯ ಮಗ ಯುವತಿಯೊಂದಿಗೆ ಓಡಿಹೋಗಿ ಆಕೆಯ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾದ ಕೆಲವೇ ದಿನಗಳಲ್ಲಿ ಮಾರ್ಚ್ 31 ರಂದು ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಸಂತ್ರಸ್ತೆ ಮಗನ ಪತ್ನಿಯ ಮನೆಯ ಕಡೆಯವರು ಸಂತ್ರಸ್ತೆ ಮನೆಯಲ್ಲಿ ಒಬ್ಬರೇ ಇದ್ದ ಸಮಯದಲ್ಲಿ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದು ಹಾಕಿ ಬೀದಿಯಲ್ಲಿ ಪರೇಡ್ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಪ್ರಕರಣದಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಕುಲ್ವಿಂದರ್ ಕೌರ್ ಮಣಿ, ಶರಣಜಿತ್ ಸಿಂಗ್ ಶಾನಿ ಮತ್ತು ಗುರ್ಚರಣ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಬಿಜೆಪಿ ಆಕ್ರೋಶ ಹೊರ ಹಾಕಿದೆ. “ಪಂಜಾಬ್ ಮತ್ತು ಬಂಗಾಳದಲ್ಲಿ ಏನು ನಡೆಯುತ್ತಿದೆ ಎಂಬುದರಲ್ಲಿ ಯಾವುದೇ ವ್ಯತ್ಯಾಸವಿಲ್ಲ. ತರ್ನ್ ತರಣ್ನಲ್ಲಿ ನಡೆದ ಘಟನೆ ಎಲ್ಲರನ್ನೂ ನಾಚಿಕೆಪಡಿಸಿದೆ ಎಂದು ಬಿಜೆಪಿ ನಾಯಕ ಆರ್ಪಿ ಸಿಂಗ್ ಹೇಳಿದ್ದಾರೆ.
‘ಪಂಜಾಬ್ನ ಪ್ರಸ್ತುತ ಎಎಪಿ ಸರ್ಕಾರವು ಮಹಿಳೆಯರ ಹಕ್ಕುಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ. ಮೇಲಾಗಿ, ಘಟನೆ ಸಂಭವಿಸಿದಾಗಿನಿಂದ ಯಾರೂ ಯಾವುದೇ ಕ್ರಮ ಕೈಗೊಂಡಿಲ್ಲ”ಎಂದು ಬಿಜೆಪಿ ನಾಯಕ ಎಸ್ಎಸ್ ಚನ್ನಿ ಕಿಡಿ ಕಾರಿದ್ದಾರೆ.
ಶಿರೋಮಣಿ ಅಕಾಲಿದಳದ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಮಾತನಾಡಿ, ‘ಈ ಘಟನೆಯನ್ನು ತೀವ್ರ ಪದಗಳಲ್ಲಿ ಖಂಡಿಸಿದರೆ ಸಾಲದು, ನಮ್ಮ ಹೆಣ್ಣನ್ನು ಬೀದಿಯಲ್ಲಿ ಈ ರೀತಿ ಮಾಡಿದ್ದು ನಾಚಿಕೆಗೇಡಿನ ಸಂಗತಿ.ನಮ್ಮ ಗುರುಗಳು ಯಾವತ್ತೂ ಮಹಿಳೆಯರನ್ನು ಗೌರವಿಸಿದ್ದಾರೆ, ಆದರೆ ಇಂದು , ಈ ನಿಷ್ಪ್ರಯೋಜಕ ಸರಕಾರದ ಮುಂದಾಳತ್ವದಲ್ಲಿ ಗಂಡಸರು ಮಹಿಳೆಯ ಬಟ್ಟೆ ಹರಿದು ಗ್ರಾಮದಲ್ಲಿ ಮೆರವಣಿಗೆ ಮಾಡಿ 15 ದಿನ ಕಳೆದರೂ ಪೊಲೀಸರಿಗೆ ಸಿಕ್ಕಿಲ್ಲವೇ?”ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮ ಘಟನೆಯನ್ನು ಖಂಡಿಸಿದ್ದು, ‘ಯಾರೂ ಮಹಿಳೆಗೆಗೆ ಸಹಾಯ ಮಾಡಲು ಮುಂದೆ ಬಂದಿಲ್ಲ. ಪೊಲೀಸರಾಗಲೀ ಅಥವಾ ಸ್ಥಳೀಯರಾಗಲೀ ನೆರವಾಗಿಲ್ಲ. ಇದು ಆಘಾತಕಾರಿ ಘಟನೆಯಾಗಿದೆ ಮತ್ತು ಮಹಿಳಾ ಆಯೋಗ ಈ ವಿಷಯದ ಬಗ್ಗೆ ಸ್ವಯಂ ಅರಿವನ್ನು ತೆಗೆದುಕೊಂಡಿದೆ. ನಾನು ಸದಸ್ಯರನ್ನು ವಿಚಾರಣೆಗೆ ಕಳುಹಿಸುತ್ತಿದ್ದೇನೆ. ಅಪರಾಧಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿದ್ದರೆ, ಮಾದರಿ ನೀತಿ ಸಂಹಿತೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣ ಆಯೋಗಕ್ಕೆ ಪತ್ರ ಬರೆಯುತ್ತೇವೆ” ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
Sandalwood: ರಿಷಿ ಖುಷಿ!: ಅಕೌಂಟ್ಗೆ ಮತ್ತೊಂದು ಚಿತ್ರ ತ್ತೊ
Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
Chitradurga: ಮಳೆಯಿಂದ ವಿದ್ಯುತ್ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ
Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ