Madhya Pradesh; ಲಿವ್ ಇನ್ ಸಂಗಾತಿಗೂ ಜೀವನಾಂಶ: ಹೈಕೋರ್ಟ್
ಕೆಳ ಹಂತದ ಕೋರ್ಟ್ನ ತೀರ್ಪನ್ನು ಎತ್ತಿ ಹಿಡಿದ ಮ. ಪ್ರದೇಶ ಹೈಕೋರ್ಟ್
Team Udayavani, Apr 7, 2024, 7:25 AM IST
ಭೋಪಾಲ: ಲಿವ್ ಇನ್ (ಸಹ ಜೀವನ) ಸಂಬಂಧದಲ್ಲಿದ್ದು, ಬಳಿಕ ಪ್ರತ್ಯೇಕವಾದರೆ ಮಹಿಳೆಯು ಪುರುಷನಿಂದ ಜೀವನಾಂಶವನ್ನು ಪಡೆಯಲು ಅರ್ಹಳು ಎಂದು ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ.
ಮದುವೆಯಾಗದಿದ್ದರೂ ದೀರ್ಘ ಅಥವಾ ಪರಿಗಣಿಸಬಹುದಾದ ಅವಧಿಯವರೆಗೂ ಇಬ್ಬರು ಸಹ ಜೀವನ ನಡೆಸಿ, ಬಳಿಕ ಪ್ರತ್ಯೇಕವಾದರೆ ಆಗ ಮಹಿಳೆಯು ತನ್ನ ಲಿವ್ ಇನ್ ಸಂಗಾತಿಯಿಂದ ಜೀವನಾಂಶವನ್ನು ಪಡೆದುಕೊಳ್ಳಬಹುದು ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಈ ಮೂಲಕ ಸಹ ಜೀವನ ಸಂಬಂಧದಲ್ಲಿರುವ ಮಹಿಳೆಯರ ಹಕ್ಕನ್ನು ನ್ಯಾಯಾಲಯ ಎತ್ತಿಹಿಡಿದಿದೆ.
ಈ ಹಿಂದೆ ಕೆಳ ಹಂತದ ನ್ಯಾಯಾಲಯ ಸಹ ಜೀವನ ವ್ಯವಸ್ಥೆಯಿಂದ ಪ್ರತ್ಯೇಕಗೊಂಡ ಮಹಿಳೆಗೆ ತಿಂಗಳಿಗೆ 1,500 ರೂ. ಜೀವನಾಂಶ ನೀಡುವಂತೆ ಸೂಚಿಸಿ ತೀರ್ಪು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರ ಶೈಲೇಶ್ ಬೋಪೆc ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು, ಇಬ್ಬರೂ ಪರಿಗಣಿಸಬಹುದಾದ ಅವಧಿಗೆ ಸಹ ಜೀವನ ನಡೆಸುತ್ತಿದ್ದರು ಎಂಬ ಬಗ್ಗೆ ಸಾಕ್ಷ್ಯಗಳಿದ್ದರೆ ಜೀವನಾಂಶವನ್ನು ನಿರಾಕರಿಸುವಂತಿಲ್ಲ ಎಂದು ಹೇಳಿದೆ.
ಅರ್ಜಿದಾರ ಶೈಲೇಶ್ ಬೋಪೆc ಮತ್ತು ಆತನ ಸಂಗಾತಿ ಅನಿತಾ ಬೋಪೆc ಅವರು ಪತಿ-ಪತ್ನಿಯಂತೆ ಸಹ ಜೀವನ ನಡೆಸುತ್ತಿದ್ದರು. ಅಲ್ಲದೆ, ಅವರಿಬ್ಬರೂ ಮಗುವನ್ನೂ ಪಡೆದಿದ್ದಾರೆ. ಅವರಿಗೆ ಮಗು ಹುಟ್ಟಿರುವ ಸಂಗತಿಗೆ ಹೆಚ್ಚಿನ ಒತ್ತು ಕೊಟ್ಟು ಹೈಕೋರ್ಟ್ ಈ ತೀರ್ಪು ನೀಡಿದೆ.
ಇದೇ ಮೊದಲ ಪ್ರಕರಣ ಅಲ್ಲ
ಲಿವ್ ಇನ್ ಸಂಬಂಧದ ಕುರಿತಾಗಿ ಉತ್ತರಾಖಂಡ ಹೊರತುಪಡಿಸಿ ದೇಶದಲ್ಲಿ ಇನ್ನೂ ಸ್ಪಷ್ಟವಾದ ಕಾನೂನುಗಳಿಲ್ಲವಾದರೂ 2010ರಲ್ಲಿ ಇಂಥದ್ದೇ ಪ್ರಕರಣವೊಂದರಲ್ಲಿ ಕೇರಳ ಹೈಕೋರ್ಟ್ ಜೀವನಾಂಶಕ್ಕೆ ಆದೇಶಿಸಿತ್ತು. ಆ ಪ್ರಕರಣವು ಸುಪ್ರೀಂ ಕೋರ್ಟ್ನಲ್ಲೂ ಚರ್ಚೆಯಾಗಿತ್ತು. 2023ರಲ್ಲಿ ಗುಜರಾತ್ ಹೈಕೋರ್ಟ್ ಇದೇ ರೀತಿಯ ಪ್ರಕರಣವೊಂದರಲ್ಲಿ ಜೀವನಾಂಶಕ್ಕೆ ಸೂಚಿಸಿತ್ತು. ಉತ್ತರಾಖಂಡ ಸರಕಾರವು ಜಾರಿ ಮಾಡಲು ಉದ್ದೇಶಿಸಿರುವ ಸಮಾನ ನಾಗರಿಕ ಸಂಹಿತೆಯಲ್ಲಿ, “ಲಿವ್ ಇನ್ ಸಂಬಂಧದ ನೋಂದಣಿ ಕಡ್ಡಾಯ’ ಎಂಬ ಅಂಶವನ್ನು ಸೇರ್ಪಡೆಗೊಳಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್