ರಾಜ್ಯದ ಕಾಂಗ್ರೆಸ್ ಸರಕಾರ ಸಂಪೂರ್ಣ ದಿವಾಳಿ: ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರಿನಲ್ಲಿ ಕರಾವಳಿ ಮೂಲದವರ ಸಭೆ
Team Udayavani, Apr 8, 2024, 12:13 AM IST
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಉಡುಪಿ- ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಲೋಕಸಭಾ ಕ್ಷೇತ್ರದ ಮತದಾರ ರೊಂದಿಗೆ ಅರಮನೆ ಮೈದಾನದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದೆ. ಪುಕ್ಕಟೆ ಕಾರ್ಯ ಕ್ರಮಗಳನ್ನು ಘೋಷಿಸಿ, ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಬಹುಶಃ ಇದನ್ನು ಸುಧಾರಿಸಲು ನಮಗೆ 10 ವರ್ಷ ಬೇಕಾಗಬಹುದು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಯವರು ಶೀಘ್ರವೇ ಮತ್ತೂಮ್ಮೆ ಬರಲಿದ್ದು, ರೋಡ್ ಶೋದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಬರಗಾಲವಿದೆ. ಕುಡಿಯುವ ನೀರಿನ ತೀವ್ರ ಹಾಹಾಕಾರ ಬೆಂಗಳೂರಿನಲ್ಲಿದೆ. ಕಿಸಾನ್ ಸಮ್ಮಾನ್ ಅಡಿ ಕೇಂದ್ರದ 6 ಸಾವಿರದ ಜತೆಗೆ ನಾನು 4 ಸಾವಿರ ಕೊಡುತ್ತಿದ್ದೆ. ಈಗ 4 ಸಾವಿರ ಕೊಡುವುದು ನಿಲ್ಲಿಸಿದ್ದಾರೆ. ಭಾಗ್ಯಲಕ್ಷ್ಮಿ ಯೋಜನೆ, ಸೈಕಲ್ ವಿತರಣೆಯೂ ನಿಂತಿದೆ ಎಂದು ಆಕ್ಷೇಪಿಸಿದರು.
ದಿವಾಳಿ ಅಂಚಿನಲ್ಲಿರುವ ಈ ಸರಕಾರ ಇನ್ನೆಷ್ಟು ದಿನ ಅಧಿಕಾರದಲ್ಲಿ ಮುಂದುವರೆಯು ತ್ತದೆಯೋ ಗೊತ್ತಿಲ್ಲ. ನಾನು ಆ ಬಗ್ಗೆ ಮಾತ ನಾಡುವುದಿಲ್ಲ. ಲೋಕಸಭಾ ಚುನಾ ವಣೆ ಯಲ್ಲಿ ಎಲ್ಲ 28 ಕ್ಷೇತ್ರ ಗಳನ್ನು ಗೆದ್ದ ಬಳಿಕ ಆ ಬಗ್ಗೆ ಮಾತಾಡೋಣ ಎಂದಷ್ಟೇ ಹೇಳಿದರು.
ಅಭಿವೃದ್ಧಿಗಾಗಿ ಬಿಜೆಪಿಗೆ ಮತ
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಮಾತನಾಡಿ, ಅಭಿವೃದ್ಧಿಪರ ಆಡಳಿತಕ್ಕಾಗಿ ಮೋದಿಯವರಿಗೆ ಹಾಗೂ ಬಿಜೆಪಿಗೆ ಮತ ನೀಡಲು ವಿನಂತಿಸಿದರು. ಇದು ಅನಿವಾರ್ಯ ಮತ್ತು ಇಂದಿನ ಅಗತ್ಯ ಎಂದು ಅಭಿಪ್ರಾಯಪಟ್ಟರು.
ಉಡುಪಿ- ಚಿಕ್ಕಮಗಳೂರಿನ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡದ ಅಭ್ಯರ್ಥಿ ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು
MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು
DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್ಡಿಕೆ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು