Mid Night: ನಡುರಾತ್ರಿ ಮನೆಯಂಗಳಕ್ಕೆ ಬಂದ ಜೀಪ್‌… ನಕ್ಸಲರೆಂದು ಭಾವಿಸಿ ಭೀತರಾದ ಮನೆಮಂದಿ!


Team Udayavani, Apr 8, 2024, 10:27 AM IST

Mid Night: ನಡುರಾತ್ರಿ ಮನೆಯಂಗಳಕ್ಕೆ ಬಂದ ಜೀಪ್‌… ನಕ್ಸಲರೆಂದು ಭಾವಿಸಿ ಭೀತರಾದ ಮನೆಮಂದಿ!

ಕಡಬ: ಕಡಬ ತಾಲೂಕಿನ ಐತ್ತೂರು ಗ್ರಾಮದ ಅಮುಣಿಪಾಲ್‌ನ ಮನೆಯೊಂದರ ಅಂಗಳಕ್ಕೆ ಶನಿವಾರ ತಡರಾತ್ರಿ ಕೇರಳ ನೋಂದಣಿಯ ಜೀಪೊಂದರಲ್ಲಿ ಆಗಮಿಸಿದ ಅಪರಿಚಿತ ವ್ಯಕ್ತಿಗಳು ಮನೆಮಂದಿಯನ್ನು ಎಬ್ಬಿಸಿ ಕೊಣಾಜೆಗೆ ಹೋಗುವ ದಾರಿ ಯಾವುದೆಂದು ಕೇಳಿದ್ದು, ಅವರನ್ನು ನಕ್ಸಲರೆಂದು ಭಾವಿಸಿ ಮನೆಮಂದಿ ಭಯದಿಂದ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ನಡೆದಿದೆ.

ರಾತ್ರಿ ಸುಮಾರು 1.30ರ ವೇಳೆಗೆ ವಾಹನದ ಹಾರ್ನ್ ಕೇಳಿ ನಿದ್ದೆಯಿಂದ ಎದ್ದು ಬಂದ ಮನೆ ಯಜಮಾನ, ವೃತ್ತಿಯಲ್ಲಿ ಜೀಪು ಚಾಲಕರಾಗಿರುವ ಕುಶಾಲಪ್ಪ ಗೌಡ ಬಾಗಿಲು ತೆರೆದರು. ಅಂಗಳದಲ್ಲಿ ಸ್ವಲ್ಪ ದೂರದಲ್ಲಿ ಜೀಪು ನಿಂತಿರುವುದನ್ನು ಕಂಡು ಗಾಬರಿಯಿಂದ ಬಾಗಿಲು ಹಾಕಿಕೊಳ್ಳಲು ಮುಂದಾಗುವಷ್ಟರಲ್ಲಿ ಜೀಪಿನಿಂದ ಇಳಿದುಬಂದ ವ್ಯಕ್ತಿಯೊಬ್ಬ ಮಲಯಾಳ ಭಾಷೆಯಲ್ಲಿ ಕೊಣಾಜೆಗೆ ಹೋಗುವ ದಾರಿ ಯಾವುದೆಂದು ಕೇಳಿದನು. ಕೊಣಾಜೆಯಲ್ಲಿ ಎಲ್ಲಿಗೆ ಎಂದು ಕೇಳಿದಾಗ ಆತ ತನ್ನ ಮೊಬೈಲ್‌ನಲ್ಲಿ ಯಾರಿಗೋ ಕರೆ ಮಾಡಿ ಕುಶಾಲಪ್ಪ ಗೌಡರಿಗೆ ಕೊಟ್ಟಿದ್ದಾನೆ. ಕರೆ ಸ್ವೀಕರಿಸಿದ ವ್ಯಕ್ತಿ ತುಳುವಿನಲ್ಲಿ ಮಾತನಾಡಲು ಆರಂಭಿಸಿದಾಗ ಕರೆ ಕಡಿತಗೊಂಡಿತು. ಬಳಿಕ ಜೀಪಿನಲ್ಲಿ ಬಂದವರು ಅಲ್ಲಿಂದ ಹೊರಟುಹೋದರು. ಆಷ್ಟರಲ್ಲಿ ಕುಶಾಲಪ್ಪ ಗೌಡರ ಪುತ್ರ ಜೀಪಿನ ನೋಂದಣಿ ಸಂಖ್ಯೆಯನ್ನು ಬರೆದಿಟ್ಟುಕೊಂಡಿದ್ದ. ಜೀಪಿನಲ್ಲಿ ಪಾತ್ರೆ ಪಗಡಿ, ಮರ ಕತ್ತರಿಸುವ ಯಂತ್ರ ಸೇರಿದಂತೆ ಹಲವು ಸಾಮಗ್ರಿಗಳು ಇದ್ದುದನ್ನು ಕಂಡಿದ್ದ ಕುಶಾಲಪ್ಪ ಗೌಡರು ಅವರು ನಕ್ಸಲರಾಗಿರಬಹುದೇ ಎನ್ನುವ ಸಂಶಯದಿಂದ ತನ್ನ ಪರಿಚಿತರಿಗೆ ಮಾಹಿತಿ ನೀಡಿದರು.

ಪೊಲೀಸರಿಗೆ ಮಾಹಿತಿ
ಘಟನೆಯ ಬಗ್ಗೆ ಮಾಹಿತಿ ಪಡೆದ ಕಡಬ ಪೊಲೀಸರು ಜೀಪಿನ ನೋಂದಣಿ ಸಂಖ್ಯೆ ಆಧಾರದಲ್ಲಿ ಜೀಪಿನ ಮಾಲಕರ ವಿಳಾಸ ಮತ್ತು ಮೊಬೈಲ್‌ ಸಂಖ್ಯೆಯನ್ನು ಪತ್ತೆ ಮಾಡಿದಾಗ ಅದು ಕಾಸರಗೋಡು ಮೂಲದ ಟೋಮಿ ಮ್ಯಾಥ್ಯೂ ಅರಿಗೆ ಸೇರಿದ ವಾಹನ ಎಂದು ತಿಳಿದುಬಂದಿತು. ಬಳಿಕ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿ ವಿಚಾರಿಸಿದಾಗ ರಬ್ಬರ್‌ ತೋಟದ ಕಳೆ ಕತ್ತರಿಸುವ ಕೆಲಸಗಾರರನ್ನು ಕಡಬದ ಕೊಣಾಜೆಗೆ ಕರೆದೊಯುತ್ತಿದ್ದಾಗ ರಾತ್ರಿ ವೇಳೆ ದಾರಿತಪ್ಪಿದ್ದರಿಂದ ದಾರಿ ಕೇಳುವುದಕ್ಕಾಗಿ ಮನೆಯವರನ್ನು ಎಬ್ಬಿಸಿದ್ದಾಗಿ ಕರೆ ಸ್ವೀಕರಿಸಿದಾತ ತಿಳಿಸಿದ. ಕುಶಾಲಪ್ಪ ಗೌಡರು ಕೂಡ ರವಿವಾರ ಬೆಳಗ್ಗೆ ಕೊಣಾಜೆಯ ತನ್ನ ಪರಿಚಿತರಲ್ಲಿ ವಿಚಾರಿಸಿದಾಗ ರಾತ್ರಿ ವೇಳೆ ಕೇರಳದಿಂದ ರಬ್ಬರ್‌ ತೋಟದ ಕೆಲಸಕ್ಕೆ ಜನ ಬಂದಿರುವುದು ದೃಢಪಟ್ಟಿತು.

ಬಿಳಿನೆಲೆಯ ಚೇರು ಭಾಗದಲ್ಲಿನ ಮನೆಯೊಂದಕ್ಕೆ ನಕ್ಸಲರು ಭೇಟಿ ನೀಡಿರುವ ಸುದ್ದಿಯಿಂದಾಗಿ ಕಡಬ ಪರಿಸರದಲ್ಲಿನ ಜನರು ಆತಂಕದಲ್ಲಿರುವಾಗಲೇ ಐತ್ತೂರಿನ ಘಟನೆ ಪರಿಸರದ ಜನರಲ್ಲಿ ಮತ್ತೆ ಭೀತಿಗೆ ಕಾರಣವಾಗಿತ್ತು. ಕೊನೆಗೂ ಪೊಲೀಸರ ಸಕಾಲಿಕ ಕ್ರಮದಿಂದಾಗಿ ಐತ್ತೂರಿಗೆ ಬಂದವರು ನಕ್ಸಲರಲ್ಲ ಎನ್ನುವುದು ತಿಳಿದು ಸ್ಥಳೀಯರು ನಿಟ್ಟುಸಿರುಬಿಟ್ಟರು.

ಇದನ್ನೂ ಓದಿ: ನಕ್ಸಲರೀಗ ಕಾಡಂಚಿನ ಮನೆಗಳ ಖಾಯಂ ಅತಿಥಿಗಳು! ಪಶ್ಚಿಮಘಟ್ಟ ಅರಣ್ಯ ವಾಸಿಗಳ ಹಳಿತಪ್ಪಿದ ಬದುಕು

ಟಾಪ್ ನ್ಯೂಸ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.