ಶಿಲ್ಪಕಲೆಯಲ್ಲಿ ದೇಶಕ್ಕೆ ಮತ್ತಷ್ಟು ಕೊಡುಗೆ ನೀಡುವೆ; ಶಿಲ್ಪಿ ಅರುಣ್‌

ಮೊದಲು ಒಳ್ಳೆಯ ಅವಕಾಶಗಳು ಸಿಕ್ಕಿರಲಿಲ್ಲ.

Team Udayavani, Apr 10, 2024, 3:52 PM IST

ಶಿಲ್ಪಕಲೆಯಲ್ಲಿ ದೇಶಕ್ಕೆ ಮತ್ತಷ್ಟು ಕೊಡುಗೆ ನೀಡುವೆ; ಶಿಲ್ಪಿ ಅರುಣ್‌

ಉದಯವಾಣಿ ಸಮಾಚಾರ
ಶಿವಮೊಗ್ಗ: ಅಯೋಧ್ಯೆ ರಾಮಲಲ್ಲಾ ವಿಗ್ರಹವು ಕೋಟ್ಯಂತರ ಭಾರತೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ದೇಶದ
ಎಲ್ಲರ ಪ್ರೀತಿ ನನಗೆ ಸಿಕ್ಕಿದೆ. ಶಿಲ್ಪಕಲೆ ಕ್ಷೇತ್ರದಲ್ಲಿ ದೇಶಕ್ಕೆ ಮತ್ತಷ್ಟು ಕೊಡುಗೆ ನೀಡುವ ಬಯಕೆ ನನ್ನದು ಎಂದು ಶಿಲ್ಪಿ ಅರುಣ್‌ ಯೋಗಿರಾಜ್‌ ಹೇಳಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ವಿಶ್ವಕರ್ಮ ಮಹಾಸಭಾ, ವಿಶ್ವ ಬ್ರಾಹ್ಮಣ, ಕಾಳಿಕಾ ಪರಮೇಶ್ವರಿ ದೇವಸ್ಥಾನ ಸೇವಾ
ಸಮಿತಿ ಹಾಗೂ ಜಿಲ್ಲೆಯ ವಿವಿಧ ಸಂಘ- ಸಂಸ್ಥೆಗಳ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ
ಸ್ವೀಕರಿಸಿ ಅವರು ಮಾತನಾಡಿದರು.

20 ವರ್ಷಗಳಿಂದ ಸಾವಿರಾರು ವಿಗ್ರಹಗಳನ್ನು ಕೆತ್ತಿದ್ದೆ. ಶ್ರೀ ಶಂಕರಾಚಾರ್ಯರ ವಿಗ್ರಹ ಮಾಡಿದ ಮೇಲೆ ನನ್ನ ಕಾರ್ಯವೈಖರಿ
ಬದಲಾಯಿತು. ಅಯೋಧ್ಯೆಗೆ ಮೈಸೂರಿನಿಂದ ಬರಿಗೈಯಲ್ಲಿ ಹೋಗಿದ್ದ ನನಗೆ ಇದೀಗ ಕೋಟ್ಯಂತರ ಜನರ ಪ್ರೀತಿ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಮಲಲ್ಲಾ ವಿಗ್ರಹ ಕೆತ್ತನೆಯ ಏಳು ತಿಂಗಳು ನಿದ್ದೆ ಮಾಡಿದ್ದೇ ನೆನಪಿಲ್ಲ. ಹೆಂಡತಿ, ಮಕ್ಕಳಿಗೂ ಸಮಯ ಕೊಡಲು ಆಗಲಿಲ್ಲ. ವಿಗ್ರಹ ಕೆತ್ತನೆಗೆ ಬಹುಪಾಲು ಸಮಯ ನೀಡಿದ್ದೆ. ಶಿಲ್ಪಿಗಳು ಯಾವುದೇ ಕೆಲಸ ಒಪ್ಪಿಕೊಂಡರೆ ಅದನ್ನು ಪೂರ್ಣ ಮಾಡಬೇಕು. ಮಾತು ಕೊಟ್ಟ ಮೇಲೆ ನಡೆಸಿಕೊಡಬೇಕು. ಆ ಕೆಲಸ ಮಾಡಿದ ಧನ್ಯತಾಭಾವ ತನ್ನದಾಗಿದೆ ಎಂದು ಹೇಳಿದರು.

ಮೊದಲು ಒಳ್ಳೆಯ ಅವಕಾಶಗಳು ಸಿಕ್ಕಿರಲಿಲ್ಲ. ಅದಕ್ಕಾಗಿ 20 ವರ್ಷ ಕುಲಕಸುಬನ್ನೇ ಮಾಡುತ್ತಿದ್ದೆ. ಈ ಅವಧಿಯಲ್ಲಿ ಕೇದಾರನಾಥದಲ್ಲಿ ಶ್ರೀ ಶಂಕರಾಚಾರ್ಯರರ ಪ್ರತಿಮೆ ಕೆತ್ತನೆಗೆ ಅವಕಾಶ ಬಂದಿತ್ತು. ಅದೇ ವೇಳೆ ವಿದೇಶದಲ್ಲಿ ವಿಗ್ರಹವೊಂದರ ನಿರ್ಮಾಣಕ್ಕೂ ಆಹ್ವಾನ ಬಂದಿತ್ತು. ವಿದೇಶದ ಅವಕಾಶ ಬಿಟ್ಟು ಶಂಕರಾಚಾರ್ಯರ ಪ್ರತಿಮೆ ಮಾಡಿದೆ. ಅದರಿಂದ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಅವಕಾಶ ಬಂದಿತು ಎಂದು ಅರುಣ್‌ ಯೋಗಿರಾಜ್‌ ಹೇಳಿದರು.

ಹಾಸನ ಜಿಲ್ಲೆ ಅರೇಮಾದನಹಳ್ಳಿಯ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ, ಚನ್ನಗಿರಿ ತಾಲೂಕು ವಡ್ನಾಳ ಮಠದ ಶ್ರೀ ಶಂಕರ
ಆತ್ಮಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಜಿಲ್ಲಾ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ
ನಿರಂಜನಮೂರ್ತಿ, ಬಿ.ಕೆ. ಶ್ರೀನಿವಾಸ್‌, ಎನ್‌.ಸೋಮಾಚಾರ್‌, ಮಹಾಸಭಾ ಕಾರ್ಯಾಧ್ಯಕ್ಷ ಎಸ್‌.ರಾಮು, ಲೀಲಾಮೂರ್ತಿ ಇದ್ದರು.

ತಾವು ಬಯಸಿದ ಕೆಲಸ ಸಿಕ್ಕಿಲ್ಲವೆಂದು ಯುವಕರು ನಿರಾಶರಾಗಬಾರದು. ಸ್ವಲ್ಪ ಕಾದರೆ ಅದಕ್ಕಿಂತ ಒಳ್ಳೆಯ ಅವಕಾಶ ಸಿಗುತ್ತವೆ.
ಕಷ್ಟದಲ್ಲಿ ಕುಗ್ಗದೆ, ಸುಖದಲ್ಲಿ ಹಿಗ್ಗದೆ ಸಮಚಿತ್ತರಾಗಿದ್ದಾಗ ಮಾತ್ರ ಒಳ್ಳೆಯ ಅವಕಾಶಗಳು ಅರಸಿ ಬರಲಿವೆ. ಸಮಯ ಮುಖ್ಯವಾಗಿದ್ದು, ಅದನ್ನು ಸರಿಯಾಗಿ ಬಳಸಿಕೊಂಡರೆ ಮಾತ್ರ ಸಾಧನೆ ಸಾಧ್ಯ. ಅರುಣ್‌ ಯೋಗಿರಾಜ್‌, ಅಯೋಧ್ಯೆ ರಾಮಲಲ್ಲಾ ವಿಗ್ರಹ ಕೆತ್ತನೆ ಶಿಲ್ಪಿ

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.