Jammu and Kashmirಕ್ಕೆ ರಾಜ್ಯ ಸ್ಥಾನಮಾನ ಸಿಗಲಿದೆ, ಶೀಘ್ರವೇ ವಿಧಾನಸಭೆ ಚುನಾವಣೆ; ಪ್ರಧಾನಿ
ಕಳೆದ 10 ವರ್ಷಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಸಂಪೂರ್ಣವಾಗಿ ಬದಲಾವಣೆಯಾಗಿದೆ
Team Udayavani, Apr 12, 2024, 1:21 PM IST
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಶೀಘ್ರದಲ್ಲಿ ರಾಜ್ಯ ಸ್ಥಾನಮಾನ ನೀಡಲಾಗುವುದು. ಅಲ್ಲದೇ ಒಂದು ಬಾರಿ ರಾಜ್ಯ ಸ್ಥಾನಮಾನ ನೀಡಿದ ನಂತರ ವಿಧಾನಸಭೆ ಚುನಾವಣೆ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇದನ್ನೂ ಓದಿ:Movie: ಬಹುಕೋಟಿ ʼರಾಮಾಯಾಣʼಕ್ಕೆ ಬಂಡವಾಳ ಹಾಕಲಿದ್ದಾರೆ ಯಶ್: ʼರಾವಣʼನಾಗಿ ಕಾಣಿಸೋದು ಡೌಟ್
ಜಮ್ಮು-ಕಾಶ್ಮೀರದ ಉಧಾಂಪುರ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಮಯ ಹೆಚ್ಚು ದೂರವಿಲ್ಲ. ಜಮ್ಮು-ಕಾಶ್ಮೀರದಕ್ಕೆ ರಾಜ್ಯ ಸ್ಥಾನಮಾನ ಸಿಗಲಿದೆ. ಈ ಮೂಲಕ ನಿಮ್ಮ ಕನಸುಗಳನ್ನು ನಿಮ್ಮ ಶಾಸಕರು ಮತ್ತು ಸಚಿವರ ಜೊತೆ ಹಂಚಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಯಾವುದೇ ಭಯೋತ್ಪಾದನೆ, ಬಂದ್, ಕಲ್ಲು ತೂರಾಟದಂತಹ ಭಯವಿಲ್ಲದೇ ಜಮ್ಮು-ಕಾಶ್ಮೀರದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ದಯವಿಟ್ಟು ನನ್ನ ಮೇಲೆ ವಿಶ್ವಾಸ ಇಡಿ, ಕಳೆದ 60 ವರ್ಷಗಳಿಂದ ಬಗೆಹರಿಯದ ಜಮ್ಮು-ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸುತ್ತೇನೆ. ಕಳೆದ 10 ವರ್ಷಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಸಂಪೂರ್ಣವಾಗಿ ಬದಲಾವಣೆಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ರದ್ದುಗೊಳಿಸಿರುವ ಕಲಂ 370 ಅನ್ನು ಮತ್ತೆ ವಾಪಸ್ ತರುವುದಾಗಿ ಹೇಳಿರುವ ಕಾಂಗ್ರೆಸ್ ಮತ್ತು ವಿರೋಧಪಕ್ಷಗಳಿಗೆ ಸವಾಲೆಸೆದಿರುವ ಪ್ರಧಾನಿ ಮೋದಿ, ಜಮ್ಮು-ಕಾಶ್ಮೀರದಲ್ಲಿ ಏನು ಮಾಡಬೇಕೆಂದು ಭರವಸೆ ನೀಡಿದ್ದೇನೋ ಅದನ್ನು ಈಡೇರಿಸುವುದಾಗಿ ತಿಳಿಸಿದರು.
ಉಧಾಂಪುರ್ ಮತ್ತು ಜಮ್ಮು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮತದಾರರಲ್ಲಿ ಮನವಿ ಮಾಡಿಕೊಂಡರು. ಏಪ್ರಿಲ್ 19ರಂದು ಉಧಾಂಪುರ್ ನಲ್ಲಿ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು