High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!


Team Udayavani, Apr 14, 2024, 4:19 PM IST

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಜನರ ನೆತ್ತಿ ಸುಡುತ್ತಿರುವ ಉರಿ ಬಿಸಿಲಿಗೆ ಜಿಲ್ಲೆಯ ಜನ ಜೀವನ ಹೈರಾಣ ಆಗುತ್ತಿದ್ದು, ಕಾದ ಕೆಂಡದಂತೆ ಆಗಿರುವ ತಾಪಮಾನಕ್ಕೆ ತೀವ್ರ ಕಂಗಾಲಾಗಿರುವ ಜನ ಮಳೆರಾಯನ ಕೃಪೆಗಾಗಿ ಆಕಾಶದ ಕಡೆಗೆ ದಿಟ್ಟಿಸಿ ನೋಡುತ್ತಿದ್ದು, ತಕ್ಷಣ ಮಳೆ ಕೃಪೆ ತೋರದಿದ್ದರೆ ಜಿಲ್ಲೆ ಇನ್ನಷ್ಟು ಬಿಸಿಲಿನ ಸಂಕಷ್ಟಕ್ಕೆ ಒಳಗಾಗಲಿದೆ.

ಹೌದು, ಕಳೆದ ವರ್ಷ ಮುಂಗಾರು, ಹಿಂಗಾರು ಕೈ ಕೊಟ್ಟಿದ್ದರಿಂದ ರೈತರ ಬೆಳೆದ ಬೆಳೆಗಳು ಒಣಗಿ ಜಿಲ್ಲೆಯು ಸಂಪೂರ್ಣವಾಗಿ ಮಳೆಯ ಅವಕೃಪೆಗೆ ಒಳಗಾಗಿ ದ್ದರಿಂದ ಸರ್ಕಾರ ಜಿಲ್ಲೆಯನ್ನು ಸಂಪೂರ್ಣ ಬರಗಾಲ ಪೀಡಿತ ಜಿಲ್ಲೆಯೆಂದು ಘೋಷಿಸಿತು. ಸರಿ ಸುಮಾರು ವರ್ಷದಿಂದ ಜಿಲ್ಲೆಯಲ್ಲಿ ಹನಿ ಮಳೆ ಆಗಿಲ್ಲ. ಇದರ ಪರಿಣಾಮ ಬೇಸಿಗೆಯ ರಣ ಬಿಸಿಲು ಜನರನ್ನು ಇನ್ನಿಲ್ಲದಂತೆ ಕಾಡ ತೊಡಗಿದೆ.

ಆರೋಗ್ಯದಲ್ಲಿ ಏರುಪೇರು:  ಜಿಲ್ಲಾದ್ಯಂತ ತಾಪಮಾನ ಸುಮಾರು 38 ಡಿಗ್ರಿ ತಲುಪಿದ್ದು, ಸಾಮಾನ್ಯವಾಗಿ ಬೇಸಿಗೆಯಲ್ಲಿ ಜಿಲ್ಲೆಯ ತಾಪಮಾಣ ಕನಿಷ್ಠ 32 ರಿಂದ 35 ರೊಳಗೆ ಇರುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದ್ದು, ಏಪ್ರಿಲ್‌ ತಿಂಗಳ ಆರಂಭದಿಂದ ಬೇಸಿಗೆಯ ಬಿಸಿ ಜನರನ್ನು ಸಾಕಷ್ಟು ಸಂಕಷ್ಟಕ್ಕೀಡು ಮಾಡಿದ್ದು, ಜನ ಜೀವನ ಅಸ್ತವ್ಯಸ್ಥ ಮಾಡಿದೆ. ಬಿಸಿಲಿನ ಪರಿಣಾಮ ಜನರ ಆರೋಗ್ಯದಲ್ಲಿ ಸಾಕಷ್ಟು ಏರುಪೇರು ಕಂಡಿದ್ದು, ಬೇಸಿಗೆಯಲ್ಲಿ ಜನ ಕೆಮ್ಮು, ನೆಗಡಿ, ತೀವ್ರ ತಲೆನೋವು, ಜ್ವರದ ಬಿಸಿಗೆ ನಲುಗುವಂತಾಗಿದೆ. ಜೊತೆಗೆ ಮಕ್ಕಳು, ವಯೋ ವೃದ್ಧರು. ಮಹಿಳೆಯರು ಬೇಸಿಗೆಯ ಪ್ರಖರತೆಗೆ ಮನೆಯಿಂದ ಹೊರ ಬರಲು ಹಿಂದೇಟು ಹಾಕುವ ಸ್ಥಿತಿ ಇದ್ದು, ಮಹಿಳೆಯರು, ಮಕ್ಕಳು ಮನೆಯಿಂದ ಹೊರಗೆ ಬರಲು ಛತ್ರಿ ಬಳಸಿ ತಿರುಗಾಡುವ ಸ್ಥಿತಿಗೆ ಬಿಸಿಲು ತಂದೊಡ್ಡಿದೆ. ಮೊದಲೇ ಚಿಕ್ಕಬಳ್ಳಾಪುರ ಬಯಲು ಪ್ರದೇಶವಾಗಿದ್ದು ಹಲವು ವರ್ಷಗಳಿಂದ ಶಾಶ್ವತ ನೀರಾವರಿ ಇಲ್ಲದೇ ಮಳೆಯನ್ನೆ ಅಶ್ರಯಿಸಿಕೊಂಡು ಜಿಲ್ಲೆಯ ಜನತೆ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಈ ವರ್ಷ ಹಿಂಗಾರು ಮುಂಗಾರು ಎರಡು ರೈತರಿಗೆ ಕೈ ಕೊಟ್ಟಿದ್ದು ಬದುಕಿಗೆ ಆಸರೆ ಆಗಬೇಕಿದ್ದ ಬೆಳೆ ಕಳೆದುಕೊಂಡಿರುವ ರೈತರು ಮತ್ತೂಂದು ಕಡೆ ಮಳೆ ಕೊರತೆಯಿಂದ ಕಾಡುತ್ತಿರುವ ಬರಗಾಲಕ್ಕೆ ಬದುಕಿನ ಬಂಡಿ ಮುನ್ನೆಸುವುದು ಸವಾಲಾಗಿ ಪರಿಣಮಿಸಿದೆ.

ಮಳೆ ಬಿದ್ದರೆ ಅಷ್ಟೇ ಜಿಲ್ಲೆಯ ಜನರಿಗೆ ನೆಮ್ಮದಿ.. :

ಬರಡು ಜಿಲ್ಲೆಯಲ್ಲಿ ಸದ್ಯ ಬಿಸಿಲಿನ ಪರಿಣಾಮ ಭೂಮಿ ಕಾಲಿಡದಷ್ಟು ಕಾದ ಕೆಂಡವಾಗಿದೆ. ಬೇಸಿಗೆಯಿಂದ ಸಾಕಷ್ಟು ರೋಗ ರುಜನಗಳು ಆವರಿಸಿಕೊಂಡು ಜನ ಆಂತಕದಲ್ಲಿದ್ದಾರೆ. ನೀರಿನಲ್ಲದೇ ಕೃಷಿ ಚಟುವಟಿಕೆಗಳು ಸ್ತಬ್ದವಾಗಿ ತೊಡಗಿವೆ. ಕುಡಿಯುವ ನೀರಿಗೂ ಜನ ಪರದಾಡುವಂತಾಗಿದೆ. ಮಳೆ ಬಿದ್ದರೆ ಮಾತ್ರ ಜಿಲ್ಲೆಯ ಜನರಿಗೆ ನೆಮ್ಮದಿ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೃಪೆ ತೋರಿದ್ದರೂ ಜಿಲ್ಲೆಯಲ್ಲಿ ಮಳೆಗಾಗಿ ಜನ ಚಾತಕಪಕ್ಷಿಗಳಂತೆ ಎದುರು ನೋಡುತ್ತಿದ್ದಾರೆ.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.