ಅಮೇಠಿಯಲ್ಲಿ ಮರ್ಯಾದೆ ಉಳಿಸಿಕೊಳ್ಳೋದು ಕಷ್ಟವಾಗಿದೆ: ರಾಹುಲ್ ಗೆ ಪ್ರಧಾನಿ ಚಾಟಿ
Team Udayavani, Apr 15, 2024, 3:00 PM IST
ಲಕ್ನೋ: ಉತ್ತರಪ್ರದೇಶದ ಅಮೇಠಿಯಲ್ಲಿ ಮರ್ಯಾದೆ ಉಳಿಸಿಕೊಳ್ಳುವುದು ಕಷ್ಟವಾಗಿದ್ದರಿಂದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಸ್ಥಳಾಂತರಗೊಂಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ಅಲ್ಲಿ ದೇಶ ವಿರೋಧಿಗಳ ಜತೆ ಗೌಪ್ಯವಾಗಿ ಮೈತ್ರಿ ಮಾಡಿಕೊಂಡಿರುವುದಾಗಿ ಆರೋಪಿಸಿದರು.
ಇದನ್ನೂ ಓದಿ:Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?
ಕೇರಳದ ಮತದಾರರು ಎಲ್ ಡಿಎಫ್ ಮತ್ತು ಯುಡಿಎಫ್ ಬಗ್ಗೆ ಎಚ್ಚರದಿಂದ ಇರಬೇಕು, ಕೇರಳದಲ್ಲಿ ಎಡಪಕ್ಷ ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟುವ ಕಾಂಗ್ರೆಸ್ ಪಕ್ಷ ದೆಹಲಿಯಲ್ಲಿ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಟೀಕಿಸಿದರು.
ಕಾನೂನು ಬಾಹಿರ ಚಟುವಟಿಕೆಗಳಿಂದ ದೇಶದಲ್ಲಿ ನಿಷೇಧಗೊಂಡಿರುವ ಸಂಘಟನೆ ಜತೆ ಕಾಂಗ್ರೆಸ್ ಪಕ್ಷ ರಹಸ್ಯವಾಗಿ ಒಪ್ಪಂದ ಮಾಡಿಕೊಂಡಿದೆ. ಎಲ್ ಡಿಎಫ್ ಮತ್ತು ಯುಡಿಎಫ್ ಆಡಳಿತದಲ್ಲಿ ಕೇರಳ ನಲುಗಿ ಹೋಗಿರುವುದಾಗಿ ಪ್ರಧಾನಿ ಮೋದಿ ಹೇಳಿದರು.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆ ಸೇರಿದಂತೆ ಎನ್ ಡಿಎ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಕೇರಳ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ದೂರಿದರು. ಎಡಪಕ್ಷಗಳು ತ್ರಿಪುರಾದಲ್ಲಿರಲಿ, ಪಶ್ಚಿಮಬಂಗಾಳ ಅಥವಾ ಕೇರಳದಲ್ಲಿರಲಿ ಅವರದ್ದು ಎಡವೂ ಅಲ್ಲ ಬಲಪಂಥೀಯವೂ ಅಲ್ಲ ಎಂಬ ನಡವಳಿಕೆ ಹೊಂದಿರುತ್ತಾರೆ ಎಂದು ವ್ಯಂಗ್ಯವಾಡಿದರು.
ಭಾನುವಾರ ಬಿಜೆಪಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ದೇಶದ ಅಭಿವೃದ್ಧಿಗೆ ಕಟಿಬದ್ಧವಾಗಿರುವುದಾಗಿ “ಸಂಕಲ್ಪ ಪತ್ರ” ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್