Kaup: ಹದಿನೈದು ತಿಂಗಳ ಹಿಂದಿನ ಅಪಘಾತದ ಗಾಯಾಳು ಸಾವು
Team Udayavani, Apr 17, 2024, 6:45 AM IST
ಕಾಪು: ಹದಿನೈದು ತಿಂಗಳ ಹಿಂದೆ ನಡೆದ ಅಪಘಾತದಿಂದ ಗಾಯಗೊಂಡಿದ್ದ ಗಾಯಾಳು ಅನಾರೋಗ್ಯ ಉಲ್ಬಣಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಎ. 16ರಂದು ನಡೆದಿದೆ.
ಬೈಂದೂರು ಮೂಲದ ಪ್ರಸ್ತುತ ಮಣಿಪುರ ಗ್ರಾಮದ ಕೋಡಂಗಳದಲ್ಲಿ ವಾಸವಿರುವ ಗಣೇಶ್ ನಾವಡ ಮೃತರು.
ಗಣೇಶ್ ಅವರಿಗೆ 2023ರ ಜ. 9ರಂದು ಕುಂಭಾಸಿ ಆನೆಗುಡ್ಡೆ ಸ್ವಾಗತ ಗೋಪುರ ಬಳಿ ರಸ್ತೆ ಅಪಘಾತವಾಗಿ ತಲೆಗೆ ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯವಾಗಿತ್ತು. ತಲೆಗೆ ಆದ ಗಂಭೀರ ಗಾಯಗಳಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆ ಮತ್ತು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಪ್ರಸ್ತುತ ತಿಂಗಳಿಗೊಮ್ಮೆ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು.
ಎ. 14ರಂದು ಚಿಕಿತ್ಸೆ ಬಗ್ಗೆ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಚಿಕಿತ್ಸೆಯಲ್ಲಿರುವಾಗಲೇ ಎ. 16ರಂದು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.
ರಸ್ತೆ ಅಪಘಾತದಿಂದ ತಲೆಗೆ ಆದ ಗಂಭೀರ ಗಾಯ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿರಬಹುದಾಗಿದೆ ಎಂದು ಮೃತರ ಸಹೋದರ ನೀಡಿರುವ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್