ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

ಬಡವರ ಬದುಕನ್ನು ಹಸನುಗೊಳಿಸಲು ಕಾಂಗ್ರೆಸ್‌ ಅನ್ನು ಬೆಂಬಲಿಸಿ

Team Udayavani, Apr 17, 2024, 12:48 PM IST

ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

ಉದಯವಾಣಿ ಸಮಾಚಾರ
ಚಿಕ್ಕಮಗಳೂರು: ಸರಳ ಸಜ್ಜನಿಕೆ ವ್ಯಕ್ತಿತ್ವದ ಕೆ.ಜಯಪ್ರಕಾಶ್‌ ಹೆಗ್ಡೆಯವರು ಹಿಂದೆ ಸಂಸದರಾಗಿ ಮಾಡಿದ ಅಭಿವೃದ್ಧಿ ಕಾರ್ಯ
ಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ. ಅವರನ್ನು ಮತ್ತೊಮ್ಮೆ ಸಂಸದರನ್ನಾಗಿ ಮಾಡುವಂತೆ ಶಾಸಕ ಎಚ್‌.ಡಿ. ತಮ್ಮಯ್ಯ ಮನವಿ ಮಾಡಿದರು.

ಮಂಗಳವಾರ ನಗರದ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮನೆ-ಮನೆಗೆ ಕರಪತ್ರ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹಿಂದುಳಿದ ದೀನದಲಿತರ, ಬಡವರ ಬದುಕನ್ನು ಹಸನುಗೊಳಿಸಲು ಕಾಂಗ್ರೆಸ್‌ ಅನ್ನು ಬೆಂಬಲಿಸುವಂತೆ ತಿಳಿಸಿದರು.

ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಜೊತೆಗೆ ರಾಷ್ಟ್ರೀಯ ಕಾಂಗ್ರೆಸ್‌ ಬಿಡುಗಡೆ ಮಾಡಿರುವ 5 ಗ್ಯಾರಂಟಿ ಯೋಜನೆಗಳ ಪ್ರತಿಗಳನ್ನು
ಮನೆಗಳಿಗೆ ನೀಡಿ ಮತ ನೀಡುವಂತೆ ಮನವರಿಕೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಮುಖ್ಯಮಂತ್ರಿ
ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ  ನೇತೃತ್ವದಲ್ಲಿ ಬಿಡುಗಡೆ ಮಾಡಿರುವ
ಚುನಾ ವಣಾ ಪ್ರಣಾಳಿಕೆಯಾಗಿ 5 ನ್ಯಾಯಗಳಾದ ಯುವನ್ಯಾಯ, ರೈತನ್ಯಾಯ, ಪಾಲು ದಾರಿಕೆ ನ್ಯಾಯ, ಮಹಿಳಾ ನ್ಯಾಯ,
ಶ್ರಮಿಕ ನ್ಯಾಯ ಇವುಗಳ ಗ್ಯಾರಂಟಿ ಕಾರ್ಡನ್ನು ಮತದಾರರಿಗೆ ನೀಡಿ ಮತ ಕೇಳುತ್ತೇವೆಂದು ತಿಳಿಸಿದರು. ವಿಧಾನಪರಿಷತ್‌ ಮಾಜಿ ಸದಸ್ಯೆ  ಗಾಯತ್ರಿ ಶಾಂತೇಗೌಡ ಮಾತನಾಡಿ, ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಸಹಿಸಿಕೊಳ್ಳದೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಮಹಿಳೆಯರನ್ನು ಅಪಮಾನಿಸುವ ಕೆಲಸ ಮಾಡಿದ್ದಾರೆ. ಅವರ ಹೇಳಿಕೆ ಖಂಡನೀಯ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಮಾತನಾಡಿ, ಜಯಪ್ರಕಾಶ್‌ ಹೆಗ್ಡೆ ಗೆಲುವಿಗೆ ಪ್ರತಿ ಮನೆಗೆ 5 ಗ್ಯಾರಂಟಿಗಳನ್ನು ಮನವರಿಕೆ ಮಾಡಲು ಕರಪತ್ರ ಹಂಚುತ್ತಿದ್ದೇವೆ. ಈ ನಿಟ್ಟಿನಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿ ಜನರ ಬದುಕಿಗೆ ಆಶ್ರಯ ನೀಡುವ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು ಮತದಾರರು ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಬೇಕೆಂದು ವಿನಂತಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪ ಗೌಡ, ಡಾ| ಡಿ.ಎಲ್‌. ವಿಜಯಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎಂ.ಎಲ್‌. ಮೂರ್ತಿ, ನಗರಸಭೆ ಸದಸ್ಯರಾದ ಲಕ್ಷ್ಮಣ, ಮಂಜುಳಾ ಲಕ್ಷ್ಮಣ, ಸಿ.ಪಿ. ಲಕ್ಷ್ಮಣ, ಕಾವ್ಯ ಇದ್ದರು.

ಟಾಪ್ ನ್ಯೂಸ್

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

1-wewewqe

Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

Good rain continues Chikkamagaluru

Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.