Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ
ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಮತ್ತು ದೇಶದ ಸಮಗ್ರತೆಯ ಹಿತದೃಷ್ಟಿ...
Team Udayavani, Apr 17, 2024, 9:38 PM IST
ಹೊಸದಿಲ್ಲಿ: ಪಾಕಿಸ್ಥಾನದಲ್ಲಿ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ‘ಎಕ್ಸ್’ ನಿಷೇದಿಸುವುದರ ಗುರಿಯನ್ನು ಹೊಂದಿರುವುದಾಗಿ ಆಂತರಿಕ ಸಚಿವಾಲಯ ಇಸ್ಲಾಮಾಬಾದ್ ಹೈಕೋರ್ಟ್ಗೆ (ಐಎಚ್ಸಿ) ಮಾಹಿತಿ ನೀಡಿದೆ ಎಂದು ಡಾನ್ ವರದಿ ಮಾಡಿದೆ.
ನಿಷೇಧವನ್ನು ಪ್ರಶ್ನಿಸಿ ಪತ್ರಕರ್ತ ಎಹ್ತಿಶಾಮ್ ಅಬ್ಬಾಸಿ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸಚಿವಾಲಯವನ್ನು ಪ್ರತಿನಿಧಿಸುವ ಆಂತರಿಕ ಕಾರ್ಯದರ್ಶಿ ಖುರ್ರಾಮ್ ಅಘಾ ಅವರು ಹೈಕೋರ್ಟ್ಗೆ ವರದಿಯನ್ನು ಸಲ್ಲಿಸಿದ್ದಾರೆ.
ಫೆಬ್ರವರಿ 8 ರ ಸಾರ್ವತ್ರಿಕ ಚುನಾವಣೆಯಲ್ಲಿ ರಿಗ್ಗಿಂಗ್ ಕುರಿತು ಪಾಕಿಸ್ಥಾನದ ಮುಖ್ಯ ಚುನಾವಣ ಆಯುಕ್ತ ಮತ್ತು ಮುಖ್ಯ ನ್ಯಾಯಾಧೀಶರ ವಿರುದ್ಧ ರಾವಲ್ಪಿಂಡಿಯ ಮಾಜಿ ಕಮಿಷನರ್ ಲಿಯಾಕತ್ ಚಟ್ಟಾ ಅವರು ಮಾಡಿದ ಆರೋಪದ ನಂತರ ಫೆಬ್ರವರಿ 17 ರಿಂದ ಪಾಕಿಸ್ಥಾನದಲ್ಲಿ ಎಕ್ಸ್ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಎಕ್ಸ್ ಕಾನೂನುಬದ್ಧ ನಿರ್ದೇಶನಗಳನ್ನು ಅನುಸರಿಸಲು ವಿಫಲವಾಗಿದೆ ಮತ್ತು ದುರುಪಯೋಗದ ಬಗ್ಗೆ ಕಳವಳಗಳನ್ನು ಪರಿಹರಿಸಲು ನಿಷೇಧ ಹೇರಲು ಕಾರಣವಾಯಿತು.ಗುಪ್ತಚರ ಮತ್ತು ಭದ್ರತಾ ಏಜೆನ್ಸಿಗಳ ವರದಿಗಳನ್ನು ಪರಿಗಣಿಸಿ ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಮತ್ತು ದೇಶದ ಸಮಗ್ರತೆಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಂತರಿಕ ಸಚಿವಾಲಯದ ವರದಿ ಹೇಳಿದೆ.
ಹಕ್ಕುಗಳ ಹೋರಾಟ ಸಂಸ್ಥೆಗಳು, ಪತ್ರಕರ್ತರ ಸಂಘಟನೆಗಳು ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರು ಸಾಮಾಜಿಕ ಮಾಧ್ಯಮ ತಡೆ ವಿಧಿಸಿರುವುದನ್ನು ಖಂಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವಂತೆ ಯುನೈಟೆಡ್ ಸ್ಟೇಟ್ಸ್ ಪಾಕಿಸ್ಥಾನಕ್ಕೆ ಕರೆ ನೀಡಿದೆ.
ಜಗತ್ತು ನಗುವುದು
ಈ ಕ್ರಮವನ್ನು ಸಿಂಧ್ ಪ್ರಾಂತದ ಹೈಕೋರ್ಟ್ ಟೀಕಿಸಿದೆ. “ಇಂಥ ಕ್ರಮದ ಮೂಲಕ ಏನನ್ನು ಸಾಧಿಸಲು ಹೊರಟಿದ್ದೀರಿ?ಈ ರೀತಿಯ ಕ್ರಮದಿಂದ ಪಾಕಿಸ್ಥಾನವನ್ನು ನೋಡಿ ಜಗತ್ತು ನಗಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಬಳಿಕ ಎಕ್ಸ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೇಲೆ ಫೆಬ್ರವರಿಯಲ್ಲಿ ನಿಷೇಧ ಹೇರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್