Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ


Team Udayavani, Apr 22, 2024, 8:55 PM IST

1-aaweewq

ಹುಣಸೂರು: ನಾಗರಹೊಳೆ ಉದ್ಯಾನದ ಆನೆಚೌಕೂರು ವಲಯದಲ್ಲಿ ಬೇರೆ ಪ್ರಾಣಿಯೊಂದಿಗೆ ಕಾದಾಟ ನಡೆಸಿದ ಸುಮಾರು6-7 ವರ್ಷದ ಗಂಡು ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.

ನಾಗರಹೊಳೆ ಉದ್ಯಾನದ ಆನೆಚೌಕೂರು ವಲಯದ ಗಣಗೂರು ಶಾಖೆಯ ಗಣಗೂರು ಕೆರೆ ಬಳಿ ಸುಮಾರು ೬-೭ವರ್ಷದ ಗಂಡು ಹುಲಿ ಶವ ಪತ್ತೆಯಾಗಿದ್ದು, ಗಸ್ತಿನಲ್ಲಿದ್ದ ಸಿಬ್ಬಂದಿಗಳಿಗೆ ಹುಲಿ ಶವ ಗೋಚರಿಸಿದ್ದು, ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ನಾಗರಹೊಳೆ ವನ್ಯಜೀವಿ ವಿಭಾಗದ ವಿರಾಜಪೇಟೆ ಡಿಸಿಎಫ್ ಎನ್.ಎಚ್.ಜಗನ್ನಾಥ್, ಹುಣಸೂರು ವಲಯದ ಎಸಿಎಫ್ ದಯಾನಂದ್, ರಾಷ್ಟ್ರೀಯ ಹುಲಿ ಪ್ರಾಧಿಕಾರದ ನಾಮ ನಿರ್ದೇಶನ ಸದಸ್ಯ ತಮ್ಮಯ್ಯ, ಮುಖ್ಯ ವನ್ಯಜೀವಿ ಪರಿಪಾಲಕರ ನಾಮನಿರ್ದೇಶಿತರು, ಗ್ರಾ.ಪಂ.ಸದಸ್ಯರಾದ ನವೀನ್, ಆರ್.ಎಫ್.ಓ.ದೇವರಾಜ್ ಹಾಗೂ ಸಿಬ್ಬಂದಿಗಳು ಭೇಟಿ ಇತ್ತು ಪರಿಶೀಲಿಸಿದ್ದಾರೆ.

ಹುಲಿಯು ಬೇರೆ ಕಾಡು ಪ್ರಾಣಿಯೊಂದಿಗೆ ಕಾದಾಟ ನಡೆಸಿ ಸಾವನ್ನಪ್ಪಿರ ಬಹುದೆಂದು ಶಂಕಿಸಲಾಗಿದೆ. ನಾಗರಹೊಳೆ ಮುಖ್ಯ ಪಶು ವೈದ್ಯಾಧಿಕಾರಿ, ಆನೆ ಪ್ರಭಾರಕ ಡಾ.ರಮೇಶ್, ಬಾಳೆಲೆ ಪಶುವೈದ್ಯ ಭವಿಷ್ಯಕುಮಾರ್ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಶವವನ್ನು ಅಂತ್ಯ ಸಂಸ್ಕಾರ ನಡೆಸಲಾಯಿತೆಂದು ನಾಗರಹೊಳೆ ಹುಲಿಯೋಜನೆ ನಿದೇರ್ಶಕ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ಗುಂಡೇಟಿಗೆ ಕಾಡುಕೋಣ ಬಲಿ
ಒಂದು ತಿಂಗಳೊಳಗೆ ದುಷ್ಕರ್ಮಿಗಳ ಕೃತ್ಯಕ್ಕೆ ಮೂರು ಕಾಡುಕೋಣ ಬಲಿ

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವಲಯದ ಬಫರ್ ಝೋನ್‌ನಲ್ಲಿ ಸುಮಾರು 10-11 ವರ್ಷದ ಗಂಡು ಕಾಡುಕೋಣವೊಂದು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದೆ.

ಆನೆಚೌಕೂರು ವನ್ಯಜೀವಿ ವಲಯದ ಚನ್ನಂಗಿ ಶಾಖೆಯ ದೇವಮಚ್ಚಿ ಮೀಸಲು ಅರಣ್ಯ ಪ್ರದೇಶದ ಅಬ್ಬೂರು ಗಸ್ತಿನ ಶ್ಯಾಮಚಂದ್ರರವರ ಕಾಫಿ ತೋಟದ ಗಡಿ ಬಾಗದ ಇಪಿಟಿ ಬಳಿಯ ಜಾಗದಲ್ಲಿ ಸುಮಾರು 10-11 ವರ್ಷದ ಕಾಡುಕೋಣದ ಶವ ಪತ್ತೆಯಾಗಿದ್ದು, ಕೃತ್ಯನಡೆಸಿದವರು ಪತ್ತೆಯಾಗಿಲ್ಲ.

ಮಾಹಿತಿ ಮೇರೆಗೆ ಕೃತ್ಯ ನಡೆದ ಸ್ಥಳಕ್ಕೆ ನಾಗರಹೊಳೆ ಹುಲಿಯೋಜನೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ದಯಾನಂದ್, ಆರ್.ಎಫ್.ಓ ದೇವರಾಜ್ ಭೇಟಿ ಇತ್ತು ಪರಿಶೀಲನೆ ನಡೆಸಿದರು. ಮುಖ್ಯ ಪಶುವೈದ್ಯಾಕಾರಿ ಹಾಗೂ ಆನೆಗಳ ಪ್ರಭಾರಕರಾದ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿದನಂತರ ಶವವನ್ನು ವಿಲೇವಾರಿ ಮಾಡಲಾಗಿದೆ.

ಅಪರಿಚಿತ ದುಷ್ಕರ್ಮಿಗಳ ವಿರುದ್ದ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕೃತ್ಯ ನಡೆಸಿರುವ ದುಷ್ಕರ್ಮಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಿನಲ್ಲಿ ನಾಗರಹೊಳೆ ಉದ್ಯಾನದ ಆನೆಚೌಕೂರು ವಲಯದ ಬಫರ್ ಝೋನ್‌ನ ಚನ್ನಂಗಿ ಶಾಖೆಯ ದೇವಮಚ್ಚಿ ಮೀಸಲು ಅರಣ್ಯ ಪ್ರದೇಶದ ಅಬ್ಬೂರು ಗಸ್ತಿನಲ್ಲೇ ೩ಕಾಡು ಕೋಣಗಳ ಹತ್ಯೆ ನಡೆದಿರುವುದು ಅನುಮಾನಕ್ಕೆಡೆ ಮಾಡಿದೆ.

ಟಾಪ್ ನ್ಯೂಸ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

ಮಗನ ಮನವೊಲಿಸಿ ಅಮ್ಮನನ್ನು ಮನೆಗೆ ಸೇರಿಸಿದ ತಹಶೀಲ್ದಾರ್‌

ಮಗನ ಮನವೊಲಿಸಿ ಅಮ್ಮನನ್ನು ಮನೆಗೆ ಸೇರಿಸಿದ ತಹಶೀಲ್ದಾರ್‌

Panambur ಫಿನಾಯಿಲ್‌ ಸೇವಿಸಿ ಇಬ್ಬರು ಕಾರ್ಮಿಕರ ಆತ್ಮಹತ್ಯೆ ಯತ್ನ

Panambur ಫಿನಾಯಿಲ್‌ ಸೇವಿಸಿ ಇಬ್ಬರು ಕಾರ್ಮಿಕರ ಆತ್ಮಹತ್ಯೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಆ ಮಹಾನುಭಾವರು 1980ರಲ್ಲೇ ಸಿ.ಡಿ. ಫ್ಯಾಕ್ಟರಿ ಓಪನ್‌ ಮಾಡಿದ್ದಾರೆ

H. D. Kumaraswamy ಆ ಮಹಾನುಭಾವರು 1980ರಲ್ಲೇ ಸಿ.ಡಿ. ಫ್ಯಾಕ್ಟರಿ ಓಪನ್‌ ಮಾಡಿದ್ದಾರೆ

H. D. Kumaraswamy ನೈತಿಕತೆ ಉಳಿಸಿಕೊಳ್ಳಲು ಪ್ರಜ್ವಲ್‌ ವಾಪಸ್‌ ಬರಬೇಕು

H. D. Kumaraswamy ನೈತಿಕತೆ ಉಳಿಸಿಕೊಳ್ಳಲು ಪ್ರಜ್ವಲ್‌ ವಾಪಸ್‌ ಬರಬೇಕು

HD Kumaraswamy “ಪತ್ರ ಬರೆದರೆ ಸಾಲದು, ಅಧಿಕಾರಿಯನ್ನು ಕಳುಹಿಸಿ ಮೊದಲು ಚರ್ಚೆ ನಡೆಸಲಿ’

HD Kumaraswamy “ಪತ್ರ ಬರೆದರೆ ಸಾಲದು, ಅಧಿಕಾರಿಯನ್ನು ಕಳುಹಿಸಿ ಮೊದಲು ಚರ್ಚೆ ನಡೆಸಲಿ’

H C MAhadev

Mysuru;ಕೆ.ಸಾಲುಂಡಿ ಗ್ರಾಮದಲ್ಲಿ ಕಾಲರಾ ಲಕ್ಷಣಗಳು‌: ಸಚಿವ ಡಾ.ಮಹದೇವಪ್ಪ ಭೇಟಿ

ಆ ಮಹಾನುಭಾವರು 1980 ರಲ್ಲೇ ಸಿಡಿ ಫ್ಯಾಕ್ಟರಿ ಓಪನ್ ಮಾಡಿದ್ದಾರೆ: ಎಚ್‌ಡಿಕೆ  ವಾಗ್ದಾಳಿ

ಆ ಮಹಾನುಭಾವರು 1980 ರಲ್ಲೇ ಸಿಡಿ ಫ್ಯಾಕ್ಟರಿ ಓಪನ್ ಮಾಡಿದ್ದಾರೆ: ಎಚ್‌ಡಿಕೆ ವಾಗ್ದಾಳಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.