Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌


Team Udayavani, Apr 29, 2024, 12:12 PM IST

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

ಬೆಂಗಳೂರು: ನಗರದಲ್ಲಿ ಅಪರಾಧ ನಿಯಂತ್ರಣಕ್ಕಾಗಿ ರಾತ್ರಿ ಗಸ್ತು ಹೆಚ್ಚಳ ಮಾಡು ವುದರ ಜತೆಗೆ ಅಗತ್ಯವಿರುವ ಕಡೆ ಇನ್ನಷ್ಟು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತರಾದ ಬಿ. ದಯಾನಂದ ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಮಾಸಿಕ ಜನಸಂಪರ್ಕ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ವಸಂತನಗರದಲ್ಲಿ ಮಹಿಳಾ ಪಿಜಿಗಳೇ ಹೆಚ್ಚಾಗಿರುವುದರಿಂದ ಕೆಲಸ ಮುಗಿಸಿ ತಡರಾತ್ರಿ ಪಿಜಿಗೆ ಬರುವ ಯುವತಿಯರನ್ನು ಕೆಲವು ಯುವಕರು ಚುಡಾಯಿಸುತ್ತಾರೆ. ಅದರಿಂದ ಈ ಪ್ರದೇಶಗಳಲ್ಲಿ ಹೆಚ್ಚಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ, ರಾತ್ರಿ ಗಸ್ತನ್ನು ಹೆಚ್ಚಳ ಮಾಡಬೇಕು. ಹಾಗೆಯೇ ವೈಯಲಿಕಾವಲ್‌ನಲ್ಲಿ ಕೆಲ ಪುಂಡರು ರಾತ್ರಿ ವೇಳೆ ತೊಂದರೆ ನೀಡುತ್ತಾರೆ. ಎಲ್ಲೆಂದರಲ್ಲಿ ನಿಂತು ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಕೆಲ ಸಾರ್ವಜನಿಕರು ದೂರು ನೀಡಿದರು.

ಅದಕ್ಕೆ ಉತ್ತರಿಸಿದ ಆಯುಕ್ತರು, ಅಪ ರಾಧ ನಿಯಂತ್ರಣಕ್ಕೆ ರಾತ್ರಿ ಗಸ್ತು ಹೆಚ್ಚಳ ಮಾಡ ಲಾಗುತ್ತದೆ. ಜತೆಗೆ ಸಿಸಿ ಕ್ಯಾಮೆರಾಗಳನ್ನು ಎಲ್ಲೆಲ್ಲಿ ಅಳವಡಿಸಬೇಕು ಎಂಬುದನ್ನು ಗುರುತಿಸಿ ಹೆಚ್ಚುವರಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದರು.

ಸಂಚಾರ ದಟ್ಟಣೆ ನಿಯಂತ್ರಣಕ್ಕೂ ಕ್ರಮ: ಪ್ಯಾಲೆಸ್‌ ಗುಟ್ಟಹಳ್ಳಿಯ ವಿನಾಯಕ ಸರ್ಕಲ್‌ನ ಎರಡೂ ಕಡೆಗಳಲ್ಲಿ ವಾಹನ  ಗಳನ್ನು ಪಾರ್ಕಿಂಗ್‌ ಮಾಡುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗಿ ಕಂಡುಬರುತ್ತಿದೆ. ಅದರಿಂದ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು.ಬಹುತೇಕ ಪ್ರದೇಶ  ಗಳಲ್ಲಿ ಬೀದಿ ದೀಪಗಳು ಇಲ್ಲ. ಹೀಗಾಗಿ ರಾತ್ರಿ ವೇಳೆ ಓಡಾಡಲು ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಆಯುಕ್ತರಲ್ಲಿ ಮನವಿ ಮಾಡಿಕೊಂಡರು.

ಅದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಚಾರ ವಿಭಾಗದ ಡಿಸಿಪಿಗೆ ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು. ಇನ್ನು ಬೀದಿ ದೀಪಗಳ ಅಳವಡಿಕೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಆಯುಕ್ತರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ವಿಭಾಗದ ಡಿಸಿಪಿ ಎಚ್‌.ಶೇಖರ್‌, ಸಂಚಾರ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್‌ ಹಾಗೂ ಕೇಂದ್ರ ವಿಭಾಗದ ಎಲ್ಲ ಹಿರಿಯ-ಕಿರಿಯ ಪೊಲೀಸ್‌ ಅಧಿಕಾರಿಗಳು ಇದ್ದರು. ಇದೇ ವೇಳೆ ನಗರದ ಎಲ್ಲಾ ಕಾನೂನು ಸುವ್ಯವಸ್ಥೆ ಡಿಸಿಪಿಗಳು ತಮ್ಮ ವ್ಯಾಪ್ತಿಯಲ್ಲಿ ಮಾಸಿಕ ಜನಸಂಪರ್ಕ ದಿವಸ ಸಭೆ ಆಯೋಜಿಸಿ, ಸಾರ್ವಜನಿಕರ ಅಹವಾಲು ಇದೇವೇಳೆ ಸ್ವೀಕರಿಸಿದರು.

ಟಾಪ್ ನ್ಯೂಸ್

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

ಹೊಸ ಸೇರ್ಪಡೆ

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.