![1-imek-22](https://www.udayavani.com/wp-content/uploads/2024/06/1-imek-22-415x236.jpg)
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
ಬೇರೊಂದು ವಾಹನದಲ್ಲಿ ಇದ್ದರು.. ಚಾಲಕ, ಗನ್ ಮ್ಯಾನ್ ಗೆ ಗಾಯ
Team Udayavani, Apr 29, 2024, 7:47 PM IST
![1-cfcfhh](https://www.udayavani.com/wp-content/uploads/2024/04/1-cfcfhh-620x401.jpg)
ಹುಣಸಗಿ: ಶಾಸಕ ಬೈರತಿ ಬಸವರಾಜ ಅವರ ಫಾರ್ಚುನರ್ ಕಾರು ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ಸಂಜೆ 5.30 ರ ವೇಳೆಗೆ ಕಾಮನಟಗಿ ಸೀಮಾಂತರದಲ್ಲಿ ನಡೆದಿದೆ.
ಸುರಪುರ ವಿಧಾನಸಭಾ ಉಪಚುನಾವಣೆ ಹಾಗೂ ಲೋಕಸಭಾ ಚುನಾವಣೆ ಅಭ್ಯರ್ಥಿ ರಾಜುಗೌಡ ಹಾಗೂ ರಾಜಾ ಅಮರೇಶ ನಾಯಕ ಪರ ಪ್ರಚಾರಕ್ಕೆ ಬಂದಿದ್ದರು. ಆದರೆ ಶಾಸಕ ಬೈರತಿ ಬಸವರಾಜ ಅವರು ಬೇರೊಂದು ವಾಹನದಲ್ಲಿ ಇದ್ದರು ಎನ್ನಲಾಗಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಚಾಲಕ ಸತೀಶ್ ಹಾಗೂ ಗನ್ ಮ್ಯಾನ್ ಚಂದ್ರಶೇಖರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.
ಹುಣಸಗಿಯಿಂದ ಕಾಮನಟಗಿ ಗ್ರಾಮಕ್ಕೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಹಿಂಬದಿಯಿಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದುದರಿಂದ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ. ಸ್ಥಳಕ್ಕೆ ಹುಣಸಗಿ ಸಿಪಿಐ ಸಚಿನ್ ಛಲವಾದಿ, ಪಿಎಸ್ಐ ಸಂಗೀತಾ ಶಿಂಧೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
![1-imek-22](https://www.udayavani.com/wp-content/uploads/2024/06/1-imek-22-415x236.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.