Bengaluru rain: ಮಧ್ಯಾಹ್ನದ ವರುಣಾರ್ಭಟಕ್ಕೆ ನಗರ ಕೂಲ್‌


Team Udayavani, May 4, 2024, 10:34 AM IST

1

ಬೆಂಗಳೂರು: ಬಿಸಿಲಿನ ಧಗೆಯಿಂದ ಕಾದ ಹೆಂಚಾಗಿದ್ದ ಸಿಲಿಕಾನ್‌ ಸಿಟಿ ವರುಣನ ಸಿಂಚನಕ್ಕೆ ತಂಪಾಯಿತು. ಸತತ ಎರಡನೇ ದಿನವೂ ಹಲವು ಪ್ರದೇಶಗಳಲ್ಲಿ ಮಳೆಯ ಆಟಾಟೋಪ ಮುಂದು ವರಿಯಿತು. ಬಸವಳಿದಿದ್ದ ಜನ ಸಂಚಾರದಟ್ಟಣೆ, ರಸ್ತೆಗಳ ಜಲಾವೃತದ ನಡುವೆಯೂ ವರ್ಷದ ಮಳೆಗೆ ಮೈಯೊಡ್ಡಿ ಸಂಭ್ರಮಿಸಿದರು.

ಮಳೆಯಿಂದ ಹಲವು ರಸ್ತೆಗಳು ಜಲಾವೃತ ಗೊಂ ಡವು. ಸಂಚಾರಕ್ಕೆ ಅಡ್ಡಿ ಉಂಟಾಯಿತು. ಸಂಜೆ ವೇಳೆ ಕೆಲಸ ಮುಗಿಸಿ ಮನೆಯತ್ತ ತೆರಳುತ್ತಿದ್ದವರು ಪರದಾಡಿದರು. ಮಳೆಯ ಹಿನ್ನೆಲೆಯಲ್ಲಿ ಬೈಕ್‌ ಸವಾರರು ಅಲ್ಲಲ್ಲಿ ಬಸ್‌ನಿಲ್ದಾಣಗಳು, ಅಂಡರ್‌ಪಾಸ್‌ಗಳ ಮೊರೆಹೋದರೆ, ಹಲವರು ಮಳೆ ನಡುವೆಯೇ ಪಯಣ ಮುಂದು ವರಿಸಿದರು. ತೊಯ್ದುತೊಪ್ಪೆಯಾದರೂ ಮಳೆಯಿಂದ ಮುಖದಲ್ಲಿ ನೆಮ್ಮದಿಯ ನಿಟ್ಟುಸಿರು ಕಂಡುಬಂತು.

ಮಳೆಯಲ್ಲಿ ಮಿಂದೆದ್ದ ನಗರದ ಸೌಂದರ್ಯವನ್ನು ಅಪಾರ್ಟ್‌ಮೆಂಟ್‌, ವಾಣಿಜ್ಯ ಸಂಕೀರ್ಣಗಳು ಸೇರಿದಂತೆ ತಾವಿದ್ದಲ್ಲಿಂದಲೇ ಮೊಬೈಲ್‌ನಲ್ಲಿ ಸೆರೆಹಿಡಿ ಯುವ ದೃಶ್ಯಗಳು ಸಾಮಾನ್ಯವಾಗಿದ್ದವು. ನಂತರ ಅವೆಲ್ಲಾ ಸಾಮಾಜಿಕ ಜಾಲತಾಣಗಳು, ಸ್ಟೇಟಸ್‌ನಲ್ಲೆಲ್ಲಾ ವಿಜೃಂಭಿಸಿದವು.

ಇನೋವಾ ಕಾರು, ಓಮ್ನಿ ಜಖಂ: ಆರ್‌.ಟಿ. ನಗರದಲ್ಲಿ ಮರ ಉಳಿಬಿದ್ದ ಹಿನ್ನೆಲೆಯಲ್ಲಿ ಇನೋವಾ ಹಾಗೂ ಓಮಿನಿ ಕಾರು ಜಖಂಗೊಂಡವು. ರವೀಂದ್ರ ನಾಥ್‌ ಠಾಗೋರ್‌ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿತ್ತು. ಅದೃಷ್ಟವಶಾತ್‌ ಕಾರಿನಲ್ಲಿ ಇದ್ದವರಿಗೆ ಯಾವುದೇ ತೊಂದರೆ ಆಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಿಬಿಎಂಪಿ ಸಿಬ್ಬಂದಿ ದೌಡಾಯಿ ಸಿದ್ದು, ಮರ ತೆರವುಗೊಳಿಸಿದರು.

ಅಂಡರ್‌ ಪಾಸ್‌ ಬಂದ್‌: ಆನೇಕಲ್‌, ಎಲೆಕ್ಟ್ರಾನಿಕ್‌ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಈ ಭಾಗದ ಹಲವು ಪ್ರದೇಶಗಳಲ್ಲಿ ಜೋರು ಮಳೆ ಸುರಿದಿದೆ. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್‌ ಬಿಲ್ಡಿಂಗ್‌ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯು ತ್ತಿತ್ತು. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್‌ ಪಾಸ್‌ಗಳಿಗೆ ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಲಾಗಿತ್ತು. ಭಾರೀ ಮಳೆಗೆ ಹೊರ ವರ್ತೂಲ ರಸ್ತೆಯ ಹೊರಮಾವು ಅಂಡರ್‌ ಪಾಸ್‌ (ಕೆ.ಆರ್‌ ಪುರಂ ಕಡೆಯಿಂದ ನಾಗವಾರ ಕಡೆಗೆ) ನಲ್ಲಿ ನೀರು ನಿಂತಿತ್ತು. ಮಾನ್ಯತಾ ಟೆಕ್‌ ಪಾರ್ಕ್‌ ಬಳಿಯ ರಸ್ತೆಯಲ್ಲಿ ನೀರು ನಿಂತು ಜನರ ಓಡಾಟಕ್ಕೆ ತೊಂದರೆ ಉಂಟಾಗಿತ್ತು. ಇದ ರಿಂದ ನಾಗವರ ಜಂಕ್ಷನ್‌ ಕಡೆಗೆ ಸಂಚರಿಸುವ ವಾಹನ ಗಳು ನಿಧಾನಗತಿಯಲ್ಲಿ ಸಂಚರಿಸಲು ಸೂಚಿಸಲಾಗಿತ್ತು. ಭರ್ಜರಿ ಮಳೆಗೆ ಕಸ್ತೂರಿ ನಗರದ ಕೆಳಸೇತುವೆ ಬಳಿ ರಸ್ತೆಯಲ್ಲಿ ನೀರು ನಿಂತಿತ್ತು. ಇದರಿಂದ ರಾಮಮೂರ್ತಿ ನಗರದ ಕಡೆಗೆ ನಿಧಾನಗತಿಯ ಸಂಚಾರವಿತ್ತು. ಟ್ರಾಫಿಕ್‌ ಪೊಲೀಸರು ಸಂಚಾರ ದಟ್ಟಣೆ ನಿವಾರಿಸಿದರು.

ಮಳೆ ಆರ್ಭಟಕ್ಕೆ ಕೆ.ಆರ್‌. ಪುರ, ಮಹದೇವಪುರ, ಹೊರಮಾವು ಸೇರಿದಂತೆ ಹಲವು ಪ್ರದೇಶಗಳಲ್ಲಿ ಮರಗಳು ನೆಲಕಚ್ಚಿವೆ. ಆರ್‌.ಟಿ. ನಗರ ಸಮೀಪ ಕಾರಿನ ಮೇಲೆ ಮರಬಿದ್ದಿದ್ದು ಯಾವುದೇ ಅಪಾಯ ಸಂಭವಿ ಸಿಲ್ಲ. ಕೊತ್ತನೂರಿನಲ್ಲಿ ಕಾರ್‌ ಮೇಲೆ ವಿದ್ಯುತ್‌ ಕಂಬಬಿದ್ದ ಬಗ್ಗೆ ವರದಿಯಾಗಿದೆ. ಎಚ್ಚೆತ್ತ ಪಾಲಿಕೆ ಸಿಬ್ಬಂದಿ ಅಪಾಯದ ಸ್ಥಳಕ್ಕೆ ದೌಡಾಯಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ರಾಮಮೂರ್ತಿ ನಗರ ಸೇಂಟ್‌ ಆನ್ಸ್‌ ಶಾಲೆ ಸಮೀಪ ಮಳೆ ನೀರು ಮನೆಯ ಮುಂದೆ ನಿಂತಿತ್ತು. ಆದರೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಪಾಲಿಕೆಯ ಸಹಾಯವಾಣಿ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಧರೆಗುರುಳಿದ ಮರಗಳು: ಕೆಆರ್‌ ಪುರ, ನಾರಾಯ ಣಪುರ, ಕೊತ್ತನೂರು, ಹೊರಮಾವು, ರಾಜರಾಜೇಶ್ವರಿ ಸರ್ಕಲ್‌, ಜ್ಞಾನಭಾರತಿ, ಕೆ.ಆರ್‌.ಸರ್ಕಲ್‌, ಆರ್‌. ಟಿ.ನಗರ, ಮಹದೇವಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ 15ಕ್ಕೂ ಅಧಿಕ ಮರಗಳು ಧರೆಗು ರುಳಿವೆ. ಮಹಾದೇವಪುರ ವ್ಯಾಪ್ತಿಯಲ್ಲಿ ನಾಲ್ಕೈದು ಮರಗಳು ಬಿದ್ದಿರುವ ಬಗ್ಗೆ ವರದಿಯಾಗಿದೆ ಎಂದು ಬಿಬಿಎಂಪಿ ಕಂಟ್ರೋಲ್‌ ರೂಂ ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಸ್ತೆಯ ಮೇಲೆ ಬಿದ್ದ ಮರ ಗಳನ್ನು ಈಗಾಗಲೇ ತೆರೆವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಎಲ್ಲೂ ಕೂಡ ರಸ್ತೆಗಳ ಮೇಲೆ ನೀರು ನಿಂತಿಲ್ಲ ಎಂದು ತಿಳಿಸಿದ್ದಾರೆ.

ತೀವ್ರ ಗಾಳಿ, ಮಳೆಗೆ ಟ್ರಾನ್ಸ್‌ಫಾರ್ಮರ್ ಸ್ಫೋಟ : ಬೆಂಗಳೂರಿನ ಐಟಿಐ ಲೇಔಟ್‌ನಲ್ಲಿ ಮಳೆಗೆ ಟ್ರಾನ್ಸ್‌ಫಾರ್ಮರ್‌ ಶಾರ್ಟ್‌ ಸರ್ಕಿಟ್‌ ಆಗಿ ಸ್ಫೋಟಗೊಂಡಿತು. ಗಾಳಿ ಮಳೆಗೆ ಮರಗಳ ಎಲೆ ತಾಗಿ ಟಾನ್ಸ್‌ಫಾರ್ಮರ್‌ನಲ್ಲಿ ತಕ್ಷಣ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿತು. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರಾನ್ಸ್‌ಫಾರ್ಮರ್‌ ಸ್ಫೋಟದಿಂದಾಗಿ ವಿದ್ಯುತ್‌ ಕಡಿತವಾಗಿತ್ತು. ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವಿದ್ಯುತ್‌ ತಡೆಯಾಗದಂತೆ ನೋಡಿಕೊಂಡರು. ಕೊತ್ತನೂರು ಬಳಿ ಕಾರಿನ ಮೇಲೆ ವಿದ್ಯುತ್‌ ಕಂಬ ಬಿದ್ದು ಕಾರಿನ ಬ್ಯಾನೆಟ್‌ ಹಾಳಾಗಿತ್ತು. ವಿದ್ಯುತ್‌ ಸಂಪರ್ಕ ಕೆಲಕಾಲ ಸ್ಥಗಿತವಾಗಿತ್ತು. ‌

6, 7ರಂದು ಬೆಂಗ್ಳೂರಲ್ಲಿ ಅಧಿಕ ಮಳೆ‌ ಸಾಧ್ಯತೆ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಭರ್ಜರಿ ಮಳೆಯಾಗಿದ್ದು, ಮೇ 6 ಹಾಗೂ 7ರಂದು ಇನ್ನೂ ಅಧಿಕ ಮಳೆಯಾಗುವ ಲಕ್ಷಣವಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉಷ್ಣಾಂಶದ ಬೇಗೆಗೆ ಕಂಗೆಟ್ಟು ಹೋಗಿದ್ದ ಸಿಲಿಕಾನ್‌ ಸಿಟಿಯಲ್ಲಿ ಶುಕ್ರವಾರ ಭರ್ಜರಿ ಮಳೆ ಯಾಗಿದ್ದು, ಮತ್ತೆ ಹಿಂದಿನಂತೆ ಕೂಲ್‌ ಸಿಟಿಯಾಗಿ ಮಾರ್ಪಟ್ಟಿದೆ. ಶನಿವಾರ ಹಾಗೂ ಭಾನುವಾರವೂ ಇದೇ ಮಾದರಿಯಲ್ಲಿ ಮಳೆ ಮುಂದುವರೆಯುವ ಲಕ್ಷಣ ಗೋಚರಿಸಿದೆ. ಮೇ 6 ಹಾಗೂ 7ರಂದು ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

2

Theft Case: ಕದ್ದ16 ಲಕ್ಷ ಬೆಲೆಯ ಚಿನ್ನ ಕರಗಿಸಿ ಗಟ್ಟಿ ಮಾಡಿಟ್ಟಿದ್ದ ಕೆಲಸದಾಕೆ ಸೆರೆ!

10

Bengaluru: ರೌಡಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

9-

Bengaluru:ಕಳ್ಳತನ ಮಾಡಿದ್ದಕ್ಕೆ ಗಾರ್ಡ್‌ಗಳಿಂದ ಕೈಕಾಲು ಕಟ್ಟಿ ಹಲ್ಲೆ: ಓರ್ವ ವ್ಯಕ್ತಿ ಸಾವು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.