ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್


Team Udayavani, May 5, 2024, 12:17 PM IST

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬೆಂಗಳೂರು: ಪ್ರತಿಷ್ಠಿತ ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ “ಬೆನಿಫಿಷಿಯರಿ ಕ್ಯಾಪಿಟಲ್‌ ಕಾಂಟ್ರಿಬ್ಯೂಷನ್‌’ (ಬಿಸಿಸಿ) ಶುಲ್ಕ ಹಾಗೂ “ಗ್ರೇಟರ್‌ ಬೆಂಗಳೂರು ಶುಲ್ಕ’ ವಾಪಸ್‌ ನೀಡುವ ವಿಚಾರದಲ್ಲಿ ಬೆಂಗಳೂರು ಜಲಮಂಡಳಿಗೆ ಹೈಕೋರ್ಟ್‌ನಲ್ಲಿ ರಿಲೀಫ್ ಸಿಕ್ಕಿದೆ.

ಶೋಭಾ ಡೆವಲಪರ್‌ ಸೇರಿದಂತೆ ಹಲವು ಪ್ರತಿಷ್ಠಿತ ಬಿಲ್ಡರ್‌ಗಳಿಂದ ಸಂಗ್ರಹಿಸಲಾಗಿದ್ದ ಬೆನಿಫಿಷಿಯರಿ ಕ್ಯಾಪಿಟಲ್‌ ಕಾಂಟ್ರಿಬ್ಯುಷನ್‌ (ಬಿಸಿಸಿ) ಶುಲ್ಕ ಮತ್ತು ಗ್ರೇಟರ್‌ ಬೆಂಗಳೂರು ಶುಲ್ಕವನ್ನು ವಾಪಸ್‌ ನೀಡುವಂತೆ ಬೆಂಗಳೂರು ಜಲಮಂಡಳಿಗೆ ನಿರ್ದೇಶನ ನೀಡಿ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ.

ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಬೆಂಗಳೂರು ಜಲಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾ.ಬಿ.ಎಂ.ಶ್ಯಾಮ್‌ ಪ್ರಸಾದ್‌ ಮತ್ತು ನ್ಯಾ.ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠವು, ಏಕಸದಸ್ಯಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿತು. ಅಲ್ಲದೆ, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

ವಿಭಾಗೀಯ ನ್ಯಾಯಪೀಠದ ಈ ಆದೇಶದಿಂದ ಸದ್ಯ ಜಲಮಂಡಳಿ ಲಕ್ಷಾಂತರ ರೂಪಾಯಿ ಶುಲ್ಕ ಮರುಪಾವತಿ ಮಾಡಬೇಕಾಗಿಲ್ಲ, ಇದರಿಂದ ಜಲಮಂಡಳಿಗೆ ದೊಡ್ಡ ರಿಲೀಫ್‌ ಸಿಕ್ಕಿದಂತಾಗಿದೆ. ಇಲ್ಲದಿದ್ದರೆ ಮಂಡಳಿ ಕೋಟ್ಯಂತರ ರೂ. ಹಣವನ್ನು ಮರುಪಾವತಿ ಮಾಡಬೇಕಾದ ಸ್ಥಿತಿ ಎದುರಾಗಿತ್ತು.

ಏಪ್ರಿಲ್‌ನ‌ಲ್ಲಿ ರಿಯಲ್‌ ಎಸ್ಟೇಟ್‌ ಸಂಸ್ಥೆ ಶೋಭಾ ಲಿಮಿಟೆಡ್‌ ಮತ್ತು ಬ್ರಿಗೇಡ್‌ ಎಂಟರ್‌ಪ್ರೈಸಸ್‌ ಲಿಮಿಟೆಡ್‌ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ್ದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಬೆಂಗಳೂರು ಒಳಚರಂಡಿ ಹಾಗೂ ನೀರು ಸರಬರಾಜು ಮಂಡಳಿ ಕೆಲವು ವರ್ಷಗಳಿಂದ ವಸತಿ ಕಟ್ಟಡಗಳಿಂದ ಅವುಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಸಂಗ್ರಹಿಸುತ್ತಿರುವ “ಗ್ರೇಟರ್‌ ಬೆಂಗಳೂರು ನೀರು ಪೂರೈಕೆ ಮತ್ತು ಒಳಚರಂಡಿ ಯೋಜನಾ ಶುಲ್ಕ ಮತ್ತು ಬೆನಿಫಿಶಿಯರಿ ಕ್ಯಾಪಿಟಲ್‌ ಕಾಂಟ್ರಿಬ್ಯೂಷನ್‌ ಶುಲ್ಕ  ಕಾನೂನುಬಾಹಿರ ಎಂದು  ಮಹತ್ವದ ಆದೇಶ ನೀಡಿತ್ತು.

ಆದರೆ, ಜಲಮಂಡಳಿ ಹಾಲಿ ಬಹುಮಹಡಿಗಳಿಂದ ಸಂಗ್ರಹ ಮಾಡುತ್ತಿರುವ ಮುಂಗಡ ಪ್ರೊರೇಟಾ ಶುಲ್ಕ ಮತ್ತು ಕಟ್ಟಡಗಳ ನಿರ್ಮಾಣಕ್ಕಾಗಿ ಸಂಸ್ಕರಿತ ನೀರು ಶುಲ್ಕ ಸಂಗ್ರಹ ಕ್ರ ಮ ವನ್ನು ನ್ಯಾಯಾಲಯ ಎತ್ತಿಹಿಡಿದಿತ್ತು. ಆದರೆ, ಅರ್ಜಿದಾರರಿಂದ ಸಂಗ್ರಹಿಸಿರುವ ಬಿಸಿಸಿ ಹಾಗೂ ಗ್ರೇಟರ್‌ ಬೆಂಗಳೂರು ನೀರು ಪೂರೈಕೆ ಮತ್ತು ಒಳಚರಂಡಿ ಯೋಜನಾ ಶುಲ್ಕವನ್ನು 12 ವಾರಗಳಲ್ಲಿ ವಾಪಸ್‌ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿತ್ತು.

ಜತೆಗೆ ರಾಜ್ಯ ಸರ್ಕಾರ ಅಥವಾ ಬೆಂಗಳೂರು ಜಲಮಂಡಳಿ, ಈ ಎರಡೂ ಶುಲ್ಕಗಳನ್ನು ವಿಧಿಸಲು ಬೆಂಗಳೂರು ನೀರು ಮತ್ತು ಒಳಚರಂಡಿ ಕಾಯ್ದೆ-1964 ಮತ್ತು ಬೆಂಗಳೂರು ನೀರು ಪೂರೈಕೆ ರೆಗ್ಯುಲೇಷನ್ಸ್‌-1965ರಡಿ ಸೂಕ್ತ ತಿದ್ದುಪಡಿ ಮಾಡಿ ಆನಂತರ ಮುಂದಿನ ಕ್ರಮ ಜರುಗಿಸಬಹುದು ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿತ್ತು.

ಟಾಪ್ ನ್ಯೂಸ್

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.