Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ
Team Udayavani, May 5, 2024, 10:27 PM IST
ಬೆಳ್ತಂಗಡಿ: ಸಂಪೂರ್ಣ ಆರಿದ್ದ ಸುಮಾರು 40 ಅಡಿ ಆಳದ ಬಾವಿಗೆ ಬಿದ್ದ ನಾಗರಹಾವನ್ನು ರಕ್ಷಿಸಿ ಕಾಡಿಗೆ ಬಿಡಲಾಗಿದೆ.
ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬರಮೇಲು ಲೋಕಯ್ಯ ಪೂಜಾರಿ ಅವರ ಮನೆ ಬಾವಿ ಬಳಿ ರವಿವಾರ ಮಧ್ಯಾಹ್ನದ ಹೊತ್ತು ಸುತ್ತಾಡುತ್ತಿದ್ದ ನಾಗರಹಾವು ಬಾವಿಗೆ ಬಿದ್ದಿತು. ಇದನ್ನು ಗಮನಿಸಿದ ಮನೆಯವರು ಉರಗಮಿತ್ರ ಕಕ್ಕಿಂಜೆಯ ಸ್ನೇಕ್ ಅನಿಲ್ ಅವರಿಗೆ ಮಾಹಿತಿ ನೀಡಿದರು. ತತ್ಕ್ಷಣ ಆಗಮಿಸಿದ ಅವರು, ಬಾವಿಗೆ ಇಳಿದು ನಾಗರಹವನ್ನು ರಕ್ಷಿಸಿ ಮೇಲೆತ್ತಿದರು.
ಒಂದೇ ದಿನ ಚಾರ್ಮಾಡಿ ಹಾಗೂ ನೆರಿಯದ ಬಸ್ತಿಯಲ್ಲೂ ನಾಗರಹಾವುಗಳು ಕಂಡುಬಂದಿದ್ದು, ಒಟ್ಟು ಮೂರು ನಾಗರಹಾವುಗಳನ್ನು ಹಿಡಿದು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ
Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ
Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ
NEET ಬೃಹತ್ ಹಗರಣ: ವಿಪಕ್ಷ ಆಕ್ರೋಶ ತೀವ್ರ
Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.