Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!


Team Udayavani, May 6, 2024, 12:09 PM IST

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ಬೆಂಗಳೂರು: ಬಿಸಿಲಿನ ಬೇಗೆಯಿಂದ ಸೌತೆಕಾಯಿ ಉತ್ಪಾದನೆ ಕುಂಠಿತವಾಗಿದ್ದು, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಾರಾಟ ಮಹಾಮಂಡಲ ನಿಯಮಿತ (ಹಾಪ್‌ಕಾಮ್ಸ್‌) ಸೇರಿ ಮಾರುಕಟ್ಟೆಗಳಲ್ಲಿ ಸೌತೆಕಾಯಿ ಬೆಲೆ ಕೆ.ಜಿ.ಗೆ 60 ರೂ. ಆಸುಪಾಸಿನಲ್ಲಿದೆ.

ಬಿಸಿಲು ಹೆಚ್ಚಿರುವ ಕಾರಣ ಸೌತೆಕಾಯಿ ಬಳ್ಳಿ ಬೆಳೆಯುತ್ತಿಲ್ಲ. ಹೂ ಬಿಟ್ಟರೂ ಮೊಗ್ಗು ಬಾರದೆ ಒಣಗಿ ಹೋಗುತ್ತಿದೆ. ಇದರಿಂದ ಮಾರುಕಟ್ಟೆಯಲ್ಲಿ ಬೇಡಿಕೆ ತಕ್ಕಷ್ಟು ಸೌತೆಕಾಯಿ ಪೂರೈಕೆ ಆಗುತ್ತಿಲ್ಲ. ಹೀಗಾಗಿ, ಬೆಲೆಯಲ್ಲಿ ಏರಿಕೆ ಆಗಿದೆ. ಚಿಕ್ಕಬಳ್ಳಾಪುರ, ಕೋಲಾರ, ಅನೇಕಲ್‌, ಸರ್ಜಾಪುರ ಸೇರಿ ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಹೇರಳವಾಗಿ ಸೌತೆಕಾಯಿ ಪೂರೈಕೆ ಆಗುತ್ತಿತ್ತು. ಆದರೆ, ಈಗ ಕಡಿಮೆ ಆಗಿದೆ ಎನ್ನುತ್ತಾರೆ ಹೋಲ್‌ಸೇಲ್‌ ವ್ಯಾಪಾರಿಗಳು.

ಹಾಪ್‌ಕಾಮ್ಸ್‌ನಲ್ಲಿ ಕೆ.ಜಿ. 62 ರೂ.: ಹಾಪ್‌ಕಾಮ್ಸ್‌ನಲ್ಲಿ ಉತ್ತಮ ಗುಣಮಟ್ಟದ ಸೌತೆಕಾಯಿ ಪ್ರತಿ ಕೆ.ಜಿ.ಗೆ 62 ರೂ. ಇದೆ. ಕಳೆದ ಕೆಲವು ದಿನಗಳಿಂದ ಸೌತೆಕಾಯಿ ಬೆಲೆಯಲ್ಲಿ ಏರಿಕೆ, ಇಳಿಕೆ ನಡೆಯುತ್ತಲೇ ಇದೆ. ಗೃಹ ಪ್ರವೇಶ, ವಿವಾಹ ಮತ್ತಿತರ ಶುಭ ಸಮಾರಂಭಗಳ ಸೀಜನ್‌ ಆಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಸೌತೆಕಾಯಿಗೆ ಸಾಕಷ್ಟು ಬೇಡಿಕೆ ಇದೆ. ಅಲ್ಲದೆ, ಬೇಸಿಗೆಯ ನೀರಡಿಕೆ(ಬಾಯಾರಿಕೆ)ಯನ್ನೂ ತಡೆಯುವ ಗುಣ ಹೊಂದಿರುವುದರಿಂದ ಸೌತೆ ಸವಿಯಲು ಜನರೂ ಕಾತರರಾಗಿದ್ದಾರೆ. ಆದರೆ, ಬೇಡಿಕೆಯಿರುವಷ್ಟು ಪೂರೈಕೆ ಆಗುತ್ತಿಲ್ಲ. ಹೀಗಾಗಿ, ಸೌತೆಕಾಯಿ ಬೆಲೆ ಏರಿಕೆಯಾಗಿದೆ ಎಂದು ಹಾಪ್‌ಕಾಮ್ಸ್‌ನ ಹಿರಿಯ ಅಧಿಕಾರಿಗಳು ಹೇಳುತ್ತಾರೆ.

ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ಸೌತೆಕಾಯಿ ಮಾರಾಟ ಉತ್ತಮವಾಗಿದೆ. ಪ್ರತಿದಿನ 2 ಟನ್‌ ಮಾರಾ ಟವಾಗುತ್ತಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶ ಗಳಲ್ಲಿ ಬೆಳೆಯುವ ರೈತರಿಂದ ಸೌತೆಕಾಯಿ ಖರೀದಿಸ ಲಾಗುತ್ತಿದೆ. ಬರದ ಹಿನ್ನೆಲೆಯಲ್ಲಿ ಪೂರೈಕೆಯಲ್ಲಿ ಕಡಿಮೆ ಆಗಿದೆ. ಮಳೆ ಸುರಿದರೆ ಬೆಲೆ ಇಳಿಯುವ ಸಾಧ್ಯತೆ ಇದೆ ಎಂದು ಹಾಪ್‌ಕಾಮ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಉಮೇಶ್‌ ಮಿರ್ಜಿ ಹೇಳುತ್ತಾರೆ.

ರಾಜಧಾನಿ ಬೆಂಗಳೂರಿಗೆ 3 ಸಾವಿರ ಮೂಟೆ: ಮೂರು ನಾಲ್ಕು ದಿನಗಳ ಹಿಂದಷ್ಟೇ ಕಲಾಸಿಪಾಳ್ಯ ಹೋಲ್‌ಸೇಲ್‌ ಮಾರುಕಟ್ಟೆಯಲ್ಲಿ 50 ಕೆ.ಜಿ. ಸೌತೆ ಕಾಯಿ ಮೂಟೆಗೆ 2 ಸಾವಿರ ರೂ. ಇತ್ತು. ಆದರೆ, ಈಗ ಸ್ವಲ್ಪ ಕಡಿಮೆ ಆಗಿದೆ ಎನ್ನುತ್ತಾರೆ ಹೋಲ್‌ಸೇಲ್‌ ವ್ಯಾಪಾರಿ ರವಿರಾಜ್‌. ಒಂದು ತಿಂಗಳ ಹಿಂದೆ ಪ್ರತಿ ಕೆಜಿ.ಗೆ 25 ರೂ. ಮಾರಾಟವಾಗು ತ್ತಿದ್ದ ಸೌತೆಕಾಯಿ ಈಗ 60 ರೂ.ಗೂ ಅಧಿಕ ಬೆಲೆಗೆ ಖರೀದಿಯಾಗುತ್ತಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.

ಕೆಲವು ದಿನಗಳಿಂದ ಬೇಡಿಕೆಯಿರುವಷ್ಟು ಸೌತೆಕಾಯಿ ಪೂರೈಕೆ ಆಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆಯಾಗಿದೆ. ಬೆಂಗಳೂರಿನ ಸುತ್ತಮುತ್ತ ಮಳೆ ಬೀಳುತ್ತಿದೆ. ಮುಂದಿನ ದಿನಗಳಲ್ಲಿ ಬೆಲೆ ಇಳಿಯುವ ಸಾಧ್ಯತೆ ಇದೆ. ಹಾಪ್‌ಕಾಮ್ಸ್‌ ನಲ್ಲಿ ನಿತ್ಯ 2 ಟನ್‌ ಸೌತೆಕಾಯಿ ಮಾರಾಟವಾಗುತ್ತಿದೆ.-ಉಮೇಶ್‌ ಮಿರ್ಜಿ, ವ್ಯವಸ್ಥಾಪಕರು ಹಾಪ್‌ಕಾಮ್ಸ್‌.  

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.