ಅದಮ್ಯ ಚೇತನದಿಂದ 1 ಕೋಟಿ ಗಿಡ ನೆಡುವ ಸಂಕಲ್ಪ


Team Udayavani, Jan 2, 2017, 11:19 AM IST

adamya-chetana.jpg

ಬೆಂಗಳೂರು: ನಗರದಲ್ಲಿ ಒಂದು ಕೋಟಿ ಗಿಡ ನೆಡುವುದು ಹಾಗೂ ಕನಿಷ್ಠ ಒಂದು ನದಿಯನ್ನು ಪುನಶ್ಚೇತನಗೊಳಿಸುವ ಸಂಕಲ್ಪವನ್ನು ಅದಮ್ಯ ಚೇತನ ಹೊಂದಿದೆ ಎಂದು ಆ ಸಂಸ್ಥೆಯ ಗೌರವಾಧ್ಯಕ್ಷರೂ ಆಗಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ ತಿಳಿಸಿದ್ದಾರೆ. 

ನಗರದ ನ್ಯಾಷನಲ್‌ ಹೈಸ್ಕೂಲ್‌ ಮೈದಾನದಲ್ಲಿ ಭಾನುವಾರ “ಅದಮ್ಯ ಚೇತನ ಸೇವಾ ಉತ್ಸವ-2017’ರಲ್ಲಿ ವಂದೇಮಾತರಂ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಉದ್ಯಾನ ನಗರಿಯಲ್ಲಿ ಹಸಿರು ಕಣ್ಮರೆಯಾಗುತ್ತಿದೆ. ನಗರದಲ್ಲೇ ಏಳು ನದಿಗಳು ಇದ್ದವು. ಈಗ ಒಂದೂ ಕಾಣುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಅದಮ್ಯ ಚೇತನದಡಿ ಒಂದು ಕೋಟಿ ಗಿಡ ನೆಟ್ಟು, ಬೆಳೆಸುವ ಗುರಿ ಹೊಂದಲಾಗಿದೆ. ಅಲ್ಲದೆ, ಕನಿಷ್ಠ ಒಂದು ನದಿಯನ್ನಾದರೂ ಪುನಃಶ್ಚೇತನಗೊಳಿಸುವ ಸಂಕಲ್ಪ ಇದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು. 

ಈಗಾಗಲೇ ಪ್ರತಿ ಭಾನುವಾರ ಸಸಿ ನೆಡುವ ಕಾರ್ಯಕ್ರಮ ಜಾರಿಯಲ್ಲಿದ್ದು, ಕಳೆದ 53 ವಾರಗಳಲ್ಲಿ 50 ಲಕ್ಷ ಸಸಿಗಳನ್ನು ನೆಡಲಾಗಿದೆ ಎಂದ ಅವರು, ನಿತ್ಯ ಎರಡು ಲಕ್ಷ ಮಕ್ಕಳಿಗೆ ಅದಮ್ಯ ಚೇತನ ಬಿಸಿಯೂಟದ ರೂಪದಲ್ಲಿ ಅನ್ನ ನೀಡುತ್ತಿದೆ. ಕಳೆದ ಒಂದೂವರೆ ದಶಕದಲ್ಲಿ 43 ಕೋಟಿ ಮಕ್ಕಳು ಇದರ ಉಪಯೋಗ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. 

ಅದಮ್ಯ ಚೇತನ ಆದರ್ಶ: ಲೋಕಸಭೆ ಅಧ್ಯಕ್ಷೆ ಸುಮಿತ್ರಾ ಮಹಾಜನ್‌ ಮಾತನಾಡಿ, ಸರ್ಕಾರಿ ಆದೇಶದ ಹಿನ್ನೆಲೆಯಲ್ಲಿ ಕಾಟಾಚಾರಕ್ಕೆ ನೀಡುವ ಬಿಸಿಯೂಟದಿಂದ ಉದ್ದೇಶ ಈಡೇರದು. ಅದರಲ್ಲಿ ಸೇವಾ ಮನೋಭಾವವೂ ಇರಬೇಕು. ಆಗ ಯೋಜನೆ ಸಾರ್ಥಕತೆ ಪಡೆದುಕೊಳ್ಳುತ್ತದೆ. ಈ ನಿಟ್ಟಿನಲ್ಲಿ ದೇಶದಲ್ಲಿ ಬಿಸಿಯೂಟ ನೀಡುತ್ತಿರುವ ಸಂಸ್ಥೆಗಳಿಗೆ ಅದಮ್ಯ ಚೇತನ ಮಾದರಿ ಎಂದು ಬಣ್ಣಿಸಿದರು.

ಬಿಸಿಯೂಟ ಬರೀ ಮಕ್ಕಳ ದೈಹಿಕ ಸಾಮರ್ಥ್ಯ ಹೆಚ್ಚಿಸಲಿಕ್ಕಲ್ಲ; ಮಾನಸಿಕವಾಗಿಯೂ ಸದೃಢಗೊಳಿಸಲು ನೀಡಲಾಗುತ್ತದೆ. ಈ ದಿಸೆಯಲ್ಲಿ ಬಿಸಿಯೂಟ ತಯಾರಿಸುವುದು ಹೇಗೆ? ಅದರ ನಿರ್ವಹಣೆ ಯಾವ ರೀತಿ ಮಾಡಬೇಕು ಎನ್ನುವುದನ್ನು ತಿಳಿಯಲು ಬಿಸಿಯೂಟ ನೀಡುತ್ತಿರುವ ರಾಜ್ಯಗಳು ಬೆಂಗಳೂರಿನ ಅದಮ್ಯ ಚೇತನ ಪಾಕಶಾಲೆಗೆ ಒಮ್ಮೆ ಭೇಟಿ ನೀಡುವುದು ಸೂಕ್ತ ಎಂದರು.

ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಮೋಹನ್‌, ಶಾಸಕ ರವಿ ಸುಬ್ರಹ್ಮಣ್ಯ, ವಿಜ್ಞಾನಿ ಅಣ್ಣಾದೊರೈ, ಬಿಇಎಲ್‌ ವ್ಯವಸ್ಥಾಪಕ ನಿರ್ದೇಶಕ ಎಂ.ವಿ. ಗೌತಮ್‌, ಡಿಆರ್‌ಡಿಓ ನಿರ್ದೇಶಕ ಉಪೇಂದ್ರಕುಮಾರ್‌ ಸಿಂಗ್‌, ಎಚ್‌ಎಎಲ್‌ನ ವೆಂಕಟೇಶ್‌, ಎನ್‌ಎಎಲ್‌ನ ಡಾ.ಸತೀಶ್ಚಂದ್ರ, ಸಿಐಐನ ರವಿ ರಾಘವನ್‌, ಅದಮ್ಯ ಚೇತನದ ಸಂಸ್ಥಾಪಕಿ ತೇಜಸ್ವಿನಿ ಅನಂತಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಸಹಸ್ರಾರು ಮಕ್ಕಳು, ಗಾಯಕರೊಂದಿಗೆ ಏಕಕಾಲದಲ್ಲಿ ಮೊಳಗಿದ “ವಂದೇ ಮಾತರಂ’ ಆಕರ್ಷಕವಾಗಿತ್ತು. 

ಟಾಪ್ ನ್ಯೂಸ್

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.