ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚಲು ಸಿದ್ಧ;ಕಟೀಲು ವಿರುದ್ಧ ದೂರು ದಾಖಲು
Team Udayavani, Jan 2, 2017, 6:50 PM IST
ಮಂಗಳೂರು: ಉಳ್ಳಾಲದಲ್ಲಿ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಅದರ ಒಂದು ಅಂಗವಾಗಿ ಕಾರ್ತಿಕ್ ರಾಜ್ ಕೊಲೆಯಾಗಿದೆ. ಹತ್ತು ದಿನಗಳೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸ್ ಠಾಣೆಯ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು; ಈ ನಿಟ್ಟಿನಲ್ಲಿ ಜಿಲ್ಲೆಗೆ ಬೆಂಕಿ ಹಾಕಲೂ ಸಿದ್ಧ ಎಂದು ಹೇಳಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ಧ ದೂರು ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಾಕಲು ಸಿದ್ಧ ಎಂಬ ಕಟೀಲು ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಲ್ಲದೇ ಬೇಜವಾಬ್ದಾರಿಯುತ ಹೇಳಿಕೆ ನೀಡಿರುವ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ರಮಾನಾಥ ರೈ ತಿರುಗೇಟು ನೀಡಿದ್ದರು.
ಕಟೀಲು ಹೇಳಿಕೆ ವಿರುದ್ಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸೋಮವಾರ ದೂರು ದಾಖಲಿಸಿದೆ. ಸಂಸದ ಕಟೀಲು ಅವರ ಹೇಳಿಕೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ತನಿಖೆ ಬಳಿಕ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಸುದ್ದಿಗಾರರ ಜೊತೆ ಮಾತನಾಡುತ್ತ ಪ್ರತಿಕ್ರಿಯೆ ನೀಡಿದ್ದಾರೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು ಸುದರ್ಶನ ನಗರ ನಿವಾಸಿ ಕಾರ್ತಿಕ್ರಾಜ್ ಹತ್ಯೆ ಆರೋಪಿಗಳ ಪತ್ತೆಗೆ ಆಗ್ರಹಿಸಿ ರವಿವಾರ ಬೆಳಗ್ಗೆ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಪಜೀರು ಸುದರ್ಶನ ನಗರದಿಂದ ಕೊಣಾಜೆ ಠಾಣೆಯ ವರೆಗೆ ನಡೆದ ಮೌನ ಜಾಥಾ ಹಾಗೂ ಠಾಣೆಯೆದುರು ನಡೆದ ಪ್ರತಿಭಟನ ಸಭೆಯಲ್ಲಿ ಭಾಗವಹಿಸಿ ಕಟೀಲು ಮಾತನಾಡಿದ ಸಂದರ್ಭ ಈ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ