ಸಜ್ಜನ, ಪ್ರಬುದ್ಧ ರಾಜಕಾರಣಿ ಸಚಿವ HS ಮಹದೇವಪ್ರಸಾದ್‌ ವಿಧಿವಶ


Team Udayavani, Jan 3, 2017, 10:21 AM IST

Mahadeva-Prasad.jpg

ಕೊಪ್ಪ : ಇಲ್ಲಿನ ಖಾಸಗಿ ರೆಸಾರ್ಟ್‌ ನಲ್ಲಿ ತಂಗಿದ್ದ ಸಕ್ಕರೆ ಹಾಗೂ ಸಹಕಾರಿ ಸಚಿವ ಎಚ್‌.ಎಸ್‌.ಮಹದೇವ ಪ್ರಸಾದ್‌ ಅವರು  ಹೃದಯಾಘಾತದಿಂದ ಮಂಗಳವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.  

ಬೆಳಗ್ಗೆ 5 ರಿಂದ 6 ಗಂಟೆಯ ವೇಳೆ ಹೃದಯಾಘಾತ ಸಂಭವಿಸಿರುವ ಸಾಧ್ಯತೆಗಳಿದ್ದು, ಬೆಳಗ್ಗೆ ಆಪ್ತರೊಬ್ಬರು ಬಾಗಿಲು ತಟ್ಟಿದಾಗ ಬಾಗಿಲನ್ನು ತೆಗೆದಿಲ್ಲ ಎಂದು ವರದಿಯಾಗಿದೆ. ಕೂಡಲೆ ಬಾಗಿಲು ಒಡೆದು ಒಳ ಪ್ರವೇಶಿಸಿ ನೋಡಿದಾಗ ಹಾಸಿಗೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲೇ ಮಹದೇವ್‌ ಪ್ರಸಾದ್‌ ಅವರು ಇಹಲೋಕ ತ್ಯಜಿಸಿದ್ದರು. 

ವಿಷಯ ತಿಳಿಯುತ್ತಿದ್ದಂತೆ ಕೆಲ ಕಾರ್ಯಕರ್ತರು ರೆಸಾರ್ಟ್‌ನಲ್ಲಿ ಜಮಾವಣೆಗೊಂಡಿದ್ದಾರೆ. ಸ್ಥಳಕ್ಕೆ ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈ ದೌಡಾಯಿಸಿದ್ದಾರೆ. ಸಚಿವರು ಮೃತಪಟ್ಟಿರುವ ವಿಷಯವನ್ನು ಅವರ ಆಪ್ತ ಎ.ಮಹೇಶ್‌ ಮಾಧ್ಯಮಗಳಿಗೆ ಧೃಡಪಡಿಸಿದ್ದಾರೆ.ಜಿಲ್ಲಾ ಸರ್ಜನ್‌ ಡಾ.ನಾಯಕ್‌ ಆಗಮಿಸಿ ಮೃತದೇಹವನ್ನು ಪರೀಕ್ಷೆ ನಡೆಸಿದ್ದಾರೆ. 

ನಾಳೆ ಹೂಟ್ಟೂರಿನಲ್ಲಿ ವೀರಶೈವ ಸಂಪ್ರದಾಯದಂತೆ ಅಂತ್ಯಕ್ರಿಯೆ 

ಮಹದೇವ್‌ ಪ್ರಸಾದ್‌ ಅವರ ಮರಣೋತ್ತರ ಪರೀಕ್ಷೆಯನ್ನು ಕೊಪ್ಪದಲ್ಲೇ ಇಂದು ನಡೆಸಲಾಯಿತು. ಬಳಿಕ  ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಅಂತಿಮ ನಮನ ಸಲ್ಲಿಸಲಾಯಿತು. ಪಾರ್ಥಿವ ಶರೀರವನ್ನು ವಿಶೇಷ ಅಂಬುಲೆನ್ಸ್‌ನಲ್ಲಿ ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ತರಲಾಗುತ್ತಿದ್ದು ಅಲ್ಲಿ ಅಂತಿಮ ನಮನ ಸಲ್ಲಿಸಲಾದ ಬಳಿಕ  ಹುಟ್ಟೂರಾದ ಗುಂಡ್ಲುಪೇಟೆಯ ಹಾಲಹಳ್ಳಿಗೆ ತರಲಾಗುತ್ತಿದೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿ ನಾಳೆ ಮಧ್ಯಾಹ್ನದ ವೇಳೆ ಸಕಲ ಸರಕಾರಿ ಗೌರವಗಳೊಂದಿಗೆ  ವೀರಶೈವ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ. 

ಮುಖ್ಯಮಂತ್ರಿ ತೀವ್ರ ಕಂಬನಿ,ಸರಕಾರಿ ರಜೆ ಘೋಷಣೆ 

ಸಚಿವ ಪ್ರಸಾದ್‌ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳವಾರ ಸರಕಾರಿ ರಜೆ ಘೋಷಿಸಿದ್ದಾರೆ.ಅವರ ಗೌರವಾರ್ಥ 3 ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ನಡೆಸಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 

ಸಿಎಂ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಮಹದೇಹಪ್ಪ ಅವರ ನಿಧನ ಅನಿರೀಕ್ಷಿತ, ನನಗೆ ದಿಗ್ಭ್ರಮೆ ಉಂಟುಮಾಡಿದೆ. ಮಲಗಿರುವಾಗಲೇ ಬೆಳಗಿನ ಜಾವ ಹೃದಯಾಘಾತ ಆಗಿದೆ. ಅವರು ನನ್ನ ಆಪ್ತರಲ್ಲಿ ಒಬ್ಬರಾಗಿದ್ದರು. ಅವರ ಸಾವು ವ್ಯಯಕ್ತಿಕವಾಗಿ ನನಗೆ ದೊಡ್ಡ ನಷ್ಟ , ಪಕ್ಷಕ್ಕೂ ಕೂಡ ತುಂಬಲಾರದ ನಷ್ಟ. ಸಜ್ಜನ ರಾಜಕಾರಣಿ, ಮಿತಭಾಷಿಯಾಗಿದ್ದ ಅವರು  ಕೋಪದಿಂದ ಮಾತನಾಡುವುದನ್ನು ನೋಡೆ ಇಲ್ಲ’ ಎಂದರು. 

‘ಅವರು ಅಜಾತಶತ್ರು ಇದ್ದಹಾಗೆ, ಯಾವುದೇ ಜವಾಬ್ದಾರಿ ಕೊಟ್ಟರೂ ಅಚ್ಚಕಟ್ಟಾಗಿ ನಿರ್ವಹಿಸುತ್ತಿದ್ದರು. ಸಚಿವನಾಗಿ ಬಹಳ ಶಿಸ್ತಿನಿಂದ ಕೆಲಸ ಮಾಡಿದ್ದರು. ಯಾವುದೇ ಕಪ್ಪು ಚುಕ್ಕಿ ಇರಲಿಲ್ಲ. 5 ಬಾರಿ ಗುಂಡ್ಲುಪೇಟೆಯಿಂದ ಸತತವಾಗಿ ಆಯ್ಕೆಯಾಗಿದ್ದರು. ಇನ್ನೂ ಎಷ್ಟು ಬಾರಿ ನಿಂತರೂ ಗೆಲ್ಲುತ್ತಿದ್ದರು. ಚಾಮರಾಜನಗರ ಜಿಲ್ಲೆ ಉಸ್ತುವಾರಿ ಸಚಿವನಾಗಿ ಉತ್ತಮ ಕೆಲಸ ಮಾಡಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ  ಚಾಮರಾಜನಗರ ಕ್ಷೇತ್ರ ಗೆಲ್ಲಲು ಇವರ ಕೊಡುಗೆ ಅಪಾರವಾಗಿತ್ತು. ಅವರೊಬ್ಬ ಸುಸಂಸಕೃತ ವ್ಯಕ್ತಿಯಾಗಿದ್ದರು’. 

‘ಸಾವು ಎಷ್ಟೊಂದು ಅನಿಶ್ಚಿತ ಎನ್ನುವುದಕ್ಕೆ ಇದೊಂದು ಉದಾಹರಣೆ, ದಕ್ಷ ಮಂತ್ರಿಯನ್ನು ಕಳೆದುಕೊಂಡಿದ್ದೇವೆ. ಸ್ನೇಹಿತ ಆಪ್ತನನ್ನು ಕಳೆದುಕೊಂಡಿದ್ದೇನೆ.  ಸಾಯೋ ವಯಸ್ಸು ಅವರದ್ದಲ್ಲ’ ಎಂದು ತೀವ್ರ ಕಂಬನಿ ಮಿಡಿದರು. 

5 ಬಾರಿ ಶಾಸಕ, 3 ಬಾರಿ ಸಚಿವ!

1958 ಅಗಸ್ಟ್‌ 5 ರಂದು ಜನಿಸಿದ್ದ ಅವರ ಪೂರ್ಣ ಹೆಸರು ಹಾಲಹಳ್ಳಿ ಶ್ರೀಕಾಂತ ಶೆಟ್ಟಿ ಮಹದೇವ ಪ್ರಸಾದ್‌. 5 ಬಾರಿ ಗುಂಡ್ಲುಪೇಟೆ ಕ್ಷೇತ್ರದ ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಹಾಲಿ ಅವರು ಚಾಮರಾಜನಗರದ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. 

ಈ ಹಿಂದೆ ಜನತಾದಳದಲ್ಲಿದ್ದ ಪ್ರಸಾದ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿದ್ದರು. ಈ ಹಿಂದೆ ಎಚ್‌.ಡಿ.  ಕುಮಾರ ಸ್ವಾಮಿ ಅವರ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಧರ್ಮಸಿಂಗ್‌ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ  ಖಾತೆಗಳನ್ನು ನಿರ್ವಹಿಸಿದ್ದರು. 

1994 ರಲ್ಲಿ ಜನತಾದಳದಿಂದ, 1999 ರಲ್ಲಿ ಜೆಡಿಯುನಿಂದ, 2004ರಲ್ಲಿ ಜೆಡಿಎಸ್‌ನಿಂದ , 2008 ಮತ್ತು 2013ರಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗುವ ಮೂಲಕ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದರು. 

2004 ರಲ್ಲಿ ಬೈಪಾಸ್‌ ಸರ್ಜರಿ ಗೊಳಗಾಗಿದ್ದ ಮಹದೇವ ಪ್ರಸಾದ್‌ ಅವರಿಗೆ 2016 ರಲ್ಲಿ ಆ್ಯಂಜಿಯೋಪ್ಲಾಸ್ಟಿ ಸರ್ಜರಿ ನಡೆಸಲಾಗಿತ್ತು. 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.