ರಂಜಿಸಿದ ಭಂಡಾರಿ ಸೇವಾ ಸಮಿತಿಯ ಸಾಂಸ್ಕೃತಿಕ ವೈಭವ


Team Udayavani, Jan 3, 2017, 4:49 PM IST

02-Mum07b.jpg

ನಗರದ  ಪ್ರತಿಷ್ಠಿತ ಜಾತಿಯ  ಸಂಘಟನೆಗಳಲ್ಲಿ  ಭಂಡಾರಿ  ಸೇವಾ ಸಮಿತಿಯೂ ಒಂದು. ಭಂಡಾರಿ ಸೇವಾ ಸಮಿತಿ ಮುಂಬಯಿ ಇದರ ವಾರ್ಷಿಕ ಭಂಡಾರಿ ಸ್ನೇಹ ಸಮ್ಮಿಲನವು ಡಿ. 25ರಂದು ದಿನಪೂರ್ತಿ ಥಾಣೆ ವಾಗ್ಲೆà ಎಸ್ಟೇಟ್‌ನ ಡಿ’ಸೋಜಾವಾಡಿಯ ಸೈಂಟ್‌ ಲಾರೆನ್ಸ್‌ ಶಾಲಾ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆದು ನಾಡಿನ ಸಂಸ್ಕೃತಿ-ಸಂಸ್ಕಾರಗಳನ್ನು ಮೇಳೈಸಿತು.  ಕಚ್ಚಾರು ನಾಗೇಶ್ವರ ಕುಲದೇವರ‌‌ನ್ನು ಸ್ತುತಿಸಿ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಾಂಸ್ಕೃತಿಕ ವೈಭವವು ಸೇವಾ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಶೇಖರ್‌ ಎಸ್‌. ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಂಬಯಿ ಮಹಾನಗರ ಸೇರಿದಂತೆ ಇನ್ನಿತರ ಉಪನಗರಗಳಲ್ಲಿ ನೆಲೆಯಾಗಿರುವ ಭಂಡಾರಿ ಸಮಾಜ ಬಾಂಧವರು ಒಮ್ಮತದಿಂದ ಒಂದೇ ವೇದಿಕೆಯ ಅಡಿಯಲ್ಲಿ ನೆರೆದು ದಿನವಿಡೀ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಸಮಾಜದ ಪ್ರತಿಭಾವಂತ ಮಕ್ಕಳಿಂದ, ಮಹಿಳೆಯರಿಂದ ಹಾಗೂ ಸದಸ್ಯರಿಂದ ಜಾನಪದ, ಶಾಸ್ತ್ರೀಯ ನೃತ್ಯಗಳು ಪ್ರದರ್ಶನಗೊಂಡು ಸಮಾರಂಭಕ್ಕೆ ಮೆರುಗು ನೀಡಿತು. ಎಳವೆಯ ಮಕ್ಕಳಿಂದ ಹಿಡಿದು ಹಿರಿಯವರೆಗೆ ವೇದಿಕೆಯನ್ನು ಹಂಚಿಕೊಂಡಿರುವುದು ವಿಶೇಷತೆಯಾಗಿತ್ತು. ಉಡುಪಿಯ ಜಯಶೀಲ ಭಂಡಾರಿ ಮತ್ತು ಬಳಗದಿಂದ  “ಮಾಯದ ದೈವ’ ಹಾಸ್ಯ ಪ್ರಹಸನ ಕಾರ್ಯಕ್ರಮವು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಯುವಪೀಳಿಗೆಗೆ ದೈವಾರಾಧನೆಯ ಬಗ್ಗೆ ಈ ಪ್ರಹಸನವು ತಿಳಿಹೇಳುವ ಪ್ರಯತ್ನವನ್ನು ಮಾಡಿತು.

ಮುಂಬಯಿಯಲ್ಲಿ ನೆಲೆಯಾಗಿರುವ ಭಂಡಾರಿ ಸಮಾಜ ಬಾಂಧವರಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಭರತನಾಟ್ಯ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ರಂಗಗಳಲ್ಲಿ ಇಲ್ಲಿನ ಸಮಾಜ ಬಾಂಧವರು ಸಾಧನೆ ಅಪಾರವಾಗಿದೆ. ರಂಗಭೂಮಿಯ ಕಡೆಗೂ ವಿಶೇಷ ಒಲವನ್ನು ಹೊಂದಿರುವ ಭಂಡಾರಿ ಸಮಾಜವು ಹಲವಾರು ಪ್ರತಿಭಾವಂತ ಕಲಾವಿದರನ್ನು ಹೊಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇದೇ ಸಂದರ್ಭದಲ್ಲಿ  ಸಂಸ್ಥೆಯ ಸದಸ್ಯರು “ಮಾಲ್ತಿನಕ್ಲು ತಿನೆ³àರ್‌’ ತುಳು ನಾಟಕ ಪ್ರದರ್ಶಿಸಿ ಮೆರುಗು ನೀಡಿದರು.

ಸಮಿತಿಯ ಉಪಾಧ್ಯಕ್ಷರಾದ ನ್ಯಾಯವಾದಿ ರಾಮಣ್ಣ ಎಂ. ಭಂಡಾರಿ ಮತ್ತು ಪ್ರಭಾಕರ್‌ ಪಿ. ಭಂಡಾರಿ ಥಾಣೆ, ಗೌರವ ಪ್ರಧಾನ ಕಾರ್ಯದರ್ಶಿ ವಿಜಯ ಆರ್‌.ಭಂಡಾರಿ, ಗೌರವ ಕೋಶಾಧಿಕಾರಿ ಕರುಣಾಕರ ಜಿ. ಭಂಡಾರಿ, ಜತೆ ಕಾರ್ಯದರ್ಶಿಗಳಾದ ಶಶಿಧರ್‌ ಡಿ. ಭಂಡಾರಿ ಮತ್ತು ಪುರುಷೋತ್ತಮ ಜಿ. ಭಂಡಾರಿ, ಜತೆ ಕೋಶಾಧಿಕಾರಿ ಪ್ರಕಾಶ್‌ ಭಂಡಾರಿ, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಸುಂದರ್‌ ಜಿ. ಭಂಡಾರಿ, ಮಹಿಳಾ ವಿಭಾಗಾಧ್ಯಕ್ಷೆ ಶೋಭಾ ಸುರೇಶ್‌ ಭಂಡಾರಿ ಕಡಂದಲೆ, ಉಪ ಕಾರ್ಯಾಧ್ಯಕ್ಷೆಯರಾದ ಪಲ್ಲವಿ ರಂಜಿತ್‌ ಭಂಡಾರಿ ಮತ್ತು ಅನುಶ್ರೀ ಶಿವರಾಮ ಭಂಡಾರಿ, ಕಾರ್ಯದರ್ಶಿ ರೇಖಾ ಎ.ಭಂಡಾರಿ, ಕೋಶಾಧಿಕಾರಿ ಕು| ಕ್ಷಮಾ ಆರ್‌. ಭಂಡಾರಿ, ಜತೆ ಕಾರ್ಯದರ್ಶಿ ಸರಿತಾ ಬಂಗೇರ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ಸಿಗೆ ಸಹಕರಿಸಿದರು. ಒಟ್ಟಿನಲ್ಲಿ ಭಂಡಾರಿ ಸಮಾಜ ಬಾಂಧವರು ಆಯೋಜಿಸಿದ್ದ ಈ ಸಾಂಸ್ಕೃತಿಕ ವೈವಿಧ್ಯವು ಹಲವಾರು ವಿಶೇಷತೆಗಳಿಗೆ ಸಾಕ್ಷಿಯಾಯಿತು.

  ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.