ಪಂಚರಾಜ್ಯ ಚುನಾವಣೆಗೂ ಮುನ್ನ ಕೇಂದ್ರ ಬಜೆಟ್ ಮಂಡನೆ ತಪ್ಪು: ಕೇಜ್ರಿ
Team Udayavani, Jan 4, 2017, 4:16 PM IST
ಹೊಸದಿಲ್ಲಿ: ಚುನಾವಣಾ ಆಯೋಗ ಇಂದು ಪ್ರಕಟಿಸಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿಯ ಬಗ್ಗೆ ಆಮ್ ಆದ್ಮಿ ಪಕ್ಷ ತೀವ್ರ ಅಸಮಾಧಾನ, ಅತೃಪ್ತಿ ವ್ಯಕ್ತಪಡಿಸಿದೆ. ಚುನಾವಣೆಗೆ ಕೆಲವೇ ದಿನಗಳ ಮೊದಲು ಕೇಂದ್ರ ಬಜೆಟ್ ಮಂಡನೆಯಾಗಲಿರುವುದು ಚುನಾವಣಾ ನೀತಿ ಸಂಹಿತೆಯ ತತ್ವದ ಉಲ್ಲಂಘನೆಯಾಗಿದೆ ಎಂದು ಅದು ಹೇಳಿದೆ.
ಫೆ.4ರಂದು ಪಂಜಾಬ್ ಮತ್ತು ಗೋವೆಯಲ್ಲಿ ಚುನಾವಣೆ ನಡೆಯಲಿದೆ. ಈ ಎರಡೂ ರಾಜ್ಯಗಳಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ. ಆದರೆ ಕೇಂದ್ರ ಬಜೆಟ್ ಫೆ.1ರಂದು ಮಂಡನೆಯಾಗಲಿದೆ. ಇದು ಆಮ್ ಆದ್ಮಿ ಪಕ್ಷದ ಆಕ್ಷೇಪಕ್ಕೆ ಕಾರಣವಾಗಿದೆ.
ಚುನಾವಣಾ ಆಯೋಗ ಐದು ರಾಜ್ಯಗಳ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದ ಕೆಲವೇ ನಿಮಿಷಗಳ ತರುವಾಯ ಆಪ್ ವಕ್ತಾರ ಆಶುತೋಷ್, ತಮ್ಮ ಪಕ್ಷದ ಆಕ್ಷೇಪ, ಅಸಮಾಧಾನವನ್ನು ಟ್ವಿಟರ್ನಲ್ಲಿ ತೋಡಿಕೊಂಡಿದ್ದಾರೆ.
ಪಂಜಾಬ್ ಮತ್ತು ಗೋವಾ ಚುನಾವಣೆಯನ್ನು ಒಂದೇ ದಿನಾಂಕದಂದು ನಡೆಸಕೂಡದು ಎಂದು ಆಪ್ ಈ ಮೊದಲೇ ಹೇಳಿತ್ತು. ಆದರೆ ಇಂದು ಚುನಾವಣಾ ಆಯೋಗದ ವೇಳಾಪಟ್ಟಿಯ ಪ್ರಕಾರ ಈ ಎರಡೂ ರಾಜ್ಯಗಳಲ್ಲಿ ಒಂದೇ ದಿನದಂದು ಚುನಾವಣೆ ನಡೆಯಲಿದೆ. ಈ ಬಗ್ಗೆ ಮಾಧ್ಯಮದವರು ಚುನಾವಣಾ ಆಯೋಗದ ಅಧಿಕಾರಿಗಳನ್ನು ಕೇಳಿದಾಗ, “ಎಲ್ಲ ಹಿತಾಸಕ್ತಿದಾರರನ್ನು ಲಕ್ಷ್ಯದಲ್ಲಿರಿಸಿಕೊಂಡು ಚುನಾವಣಾ ದಿನಾಂಕಗಳನ್ನು ನಿರ್ಧರಿಸಲಾಗುತ್ತದೆ’ ಎಂದು ಉತ್ತರಿಸಿದರು.
ಹೀಗಿದ್ದರೂ ತಾನು ಗೋವಾ ಮತ್ತು ಪಂಜಾಬ್ ಎರಡೂ ರಾಜ್ಯಗಳಲ್ಲಿ ಜಯಶಾಲಿಯಾಗುವುದು ಖಚಿತ ಎಂಬ ವಿಶ್ವಾಸವನ್ನು ಆಪ್ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ