ಉಪ್ಪಳ ನಯಾಬಜಾರ್‌ನಲ್ಲಿ  ಭೀಕರ ಅಪಘಾತ ನಾಲ್ವರ ಸಾವು


Team Udayavani, Jan 5, 2017, 3:45 AM IST

acc.jpg

- ಒಂದೇ ಕುಟುಂಬದ ಮೂವರ ಸಹಿತ ನಾಲ್ವರ ಸಾವು  
- ಮಗನನ್ನು ಕಾಲೇಜಿಗೆ ಬಿಡಲು ತೆರಳುತ್ತಿದ್ದರು

ಉಪ್ಪಳ: ಕೆಲವು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ವಾಹನ ಅಪಘಾತ ಮರೆಯುವ ಮುನ್ನವೇ ಮತ್ತೆ ಬುಧವಾರ ಮುಂಜಾನೆ ಉಪ್ಪಳ ನಯಾಬಜಾರ್‌ನಲ್ಲಿ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ಸಹಿತ ನಾಲ್ವರು ಸಾವಿಗೀಡಾಗಿದ್ದಾರೆ.

ಡಿಸೈರ್‌ ಸ್ವಿಫ್ಟ್‌ ಕಾರು ಹಾಗೂ ಕಂಟೈನರ್‌ ಲಾರಿ ಪರಸ್ಪರ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ದಂಪತಿ, ಪುತ್ರ ಹಾಗೂ ಸ್ನೇಹಿತ ಘಟನಾ ಸ್ಥಳದಲ್ಲೇ ಮೃತಪಟ್ಟರು. ತೃಶ್ಶೂರ್‌ ಚೇಳಕ್ಕರ ನಿವಾಸಿಗಳಾದ ಡಾ| ರಾಮನಾರಾಯಣ (52), ಪತ್ನಿ ವತ್ಸಲಾ (48), ಪುತ್ರ ರಂಜಿತ್‌ (20) ಮತ್ತು ರಂಜಿತ್‌ನ ಸ್ನೇಹಿತ ನಿತಿನ್‌ (20) ಮೃತಪಟ್ಟವರು.

ಉಪ್ಪಳ ಸಮೀಪದ ನಯಾ ಬಜಾರ್‌ ಎ.ಜೆ. ಆಂಗ್ಲ ಮಾಧ್ಯಮ ಶಾಲೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮುಂಜಾನೆ 5.30ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿತು.

ತೃಶ್ಶೂರ್‌ನಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕಂಟೈನರ್‌ ಲಾರಿ ಢಿಕ್ಕಿ ಹೊಡೆಯಿತು. ಚೇಳಕ್ಕರದ ಪ್ರಸಿದ್ಧ ವೈದ್ಯರಾದ ಡಾ| ರಾಮನಾರಾಯಣ ಅವರ ಪುತ್ರ ರಂಜಿತ್‌ ಚಿಕ್ಕಮಗಳೂರಿನ ಕೊಪ್ಪ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕ್ರಿಸ್ಮಸ್‌ ರಜೆಯ ಕಾರಣ ಊರಿಗೆ ಆಗಮಿಸಿದ್ದರು. ರಜೆಯ ಬಳಿಕ ಮತ್ತೆ ಕಾಲೇಜಿಗೆ ಮಂಗಳವಾರ ಹಾಜಧಿರಾಗಬೇಕಾಗಿದ್ದು, ಅನಿವಾರ್ಯ ಕಾರಣಗಳಿಂದ ತೆರಳಲಾಗದ್ದರಿಂದ ಮಂಗಳಧಿವಾರ ರಾತ್ರಿ ತಂದೆ, ತಾಯಿ ಮತ್ತು ಸ್ನೇಹಿತನೊಂದಿಗೆ ತೆರಳುವಾಗ  ಅಪಧಿಘಾತ ಸಂಭವಿಸಿತು. ಕಂಟೈನರ್‌ ಲಾರಿ ಮಂಗಳೂರಿನಿಂದ ಕಣ್ಣೂರಿಗೆ ಸರಕುಗಳನ್ನು ಹೇರಿ ಸಾಗುತ್ತಿತ್ತು.

ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಷಯ ತಿಳಿದು ಸ್ಥಳೀಯರು, ಮಂಜೇಶ್ವರ, ಕುಂಬಳೆ ಪೊಲೀಸರು, ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕಾರಿನ ಬಾಗಿಲಿನ ಗಾಜನ್ನು ಪುಡಿಧಿಗೈದು ಒಳಗೆ ಸಿಲುಕಿಕೊಂಡಿದ್ದವರನ್ನು ಹೊರ ತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದರೂ ಅಷ್ಟರಲ್ಲೇ ಸಾವು ಸಂಭವಿಸಿತ್ತು. ಮೃತದೇಹಧಿಗಳನ್ನು ಮಂಗಲ್ಪಾಡಿ ಶವಾಗಾರದಲ್ಲಿ ಮಹಜರು ನಡೆಸಿ ಸಂಬಂಧಿಕರಿಗೆ ಬಿಟ್ಟುಕೊಡಲಾಯಿತು.

ಅಪಘಾತ ವಲಯ
ರಾಷ್ಟ್ರೀಯ ಹೆದ್ದಾರಿ ಸಾಗುವ ಉಪ್ಪಳ ನಯಾ ಬಜಾರ್‌ ಪ್ರದೇಶ ಈಗಾಗಲೇ ಹಲವು ಅಪಘಾತಗಳು ಸಂಭವಿಸಿದ ತಾಣ. ಈ ಕಾರಣದಿಂದ ಈ ಪ್ರದೇಶದ ಬಗ್ಗೆ ಸ್ಥಳೀಯರಿಗೆ ಭೀತಿ ಹುಟ್ಟಿಸಿತ್ತು. ಈ ಪ್ರದೇಶಧಿದಲ್ಲಿ ಪದೇ ಪದೇ ಸಂಭವಿಸುತ್ತಿರುವ ವಾಹನ ಅಪಘಾತಗಳನ್ನು ನಿಯಂತ್ರಿಸಲು ವೇಗ ನಿಯಂತ್ರಕ ಸಹಿತ ಇತರ ಕ್ರಮಗಳನ್ನು ಅಳವಡಿಸಬೇಕೆಂಬ ಹಲವು ವರ್ಷಗಳ ಬೇಡಿಕೆ ಇದುವರೆಗೆ ಈಡೇರಿಲ್ಲ. ಘಟನಾ ಸ್ಥಳಕ್ಕೆ ಕುಂಬಳೆ ಸಿ.ಐ., ಮಂಜೇಶ್ವರ ಎಸ್‌ಧಿಐ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿದ್ದೆಯ ಮಂಪರು
ಕಾರನ್ನು ರಾಮನಾರಾಯಣ ಅವರು ಚಲಾಯಿಸುತ್ತಿದ್ದರೆಂದೂ ಅವರಿಗೆ ನಿದ್ದೆಯ ಮಂಪರು ಆವರಿಸಿರುವುದೇ ಅಪಘಾತಕ್ಕೆ ಕಾರಣವೆಂದು ಶಂಕಿಸಲಾಗಿದೆ. ಅಪಘಾತದಲ್ಲಿ ಕಂಟೈನರ್‌ ಲಾರಿಗೂ ಹಾನಿಯಾಗಿದೆ. ಕಂಟೈನರ್‌ ಲಾರಿಯನ್ನು ಮಂಜೇಶ್ವರ ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಅಪಘಾತದಿಂದ ರಸ್ತೆಯಲ್ಲಿ ರಕ್ತ ಮಡುಗಟ್ಟಿ ನಿಂತಿದ್ದು ಅಗ್ನಿಶಾಮಕ ದಳದವರು ನೀರನ್ನು ಹಾಯಿಸಿ ರಸ್ತೆ ತೊಳೆದರು.

ನೆನಪು ಮಾಸುವ ಮುನ್ನ
ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ವಾಹನ ಅಪಘಾತ ಸಂಭವಿಸುತ್ತಿದ್ದು, ಒಂದು ವಾರದ ಹಿಂದೆ ಅಂದರೆ ಡಿ. 28ರಂದು ಮುಂಜಾನೆ ವಾಹನ ಅಪಘಾತ ಸಂಭವಿಸಿ ಇಬ್ಬರು ಯುವಕರು ಸಾವಿಗೀಡಾಗಿದ್ದರು. ಮೊಗ್ರಾಲ್‌ ಪುತ್ತೂರು ಕೊಪ್ಪರ ಬಜಾರ್‌ನಲ್ಲಿ ಮುಂಜಾನೆ ಟೂರಿಸ್ಟ್‌ ಬಸ್‌ ಹಾಗೂ ಕೋಳಿ ಸಾಗಿಸುತ್ತಿದ್ದ ವ್ಯಾನ್‌ ಢಿಕ್ಕಿ ಹೊಡೆದು ಇಬ್ಬರು ಸಾವಿಗೀಡಾಗಿದ್ದರು. ಈ ವಾಹನ ಅಪಘಾತದ ಭೀಕರತೆ ಮರೆಯುವ ಮುನ್ನವೇ ಇನ್ನೊಂದು ವಾಹನ ಅಪಘಾತ ಸಂಭವಿಸಿದೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.