ಇಂದಿನಿಂದ ಪುಷ್ಪಕ ವಿಮಾನ


Team Udayavani, Jan 6, 2017, 3:45 AM IST

Pushpaka-Vimana-(1).jpg

ರಮೇಶ್‌ ಅರವಿಂದ್‌ ಅಭಿನಯದ “ಪುಷ್ಪಕ ವಿಮಾನ’ ಟೇಕ್‌ ಆಫ್ ಆಗುವುದಕ್ಕೆ ರೆಡಿಯಾಗಿದೆ. ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರತಂಡ, ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ಮಾತಾಡಿದೆ. ಇನ್ನು ಬಿಡುಗಡೆಯಾಗುತ್ತಿರುವ ವಿಷಯವೊಂದನ್ನು ಹೇಳಬೇಕಿತ್ತು. ಅದಕ್ಕೆ ಮುಹೂರ್ತ ಕೂಡಿಬಂದಿದ್ದು ಕಳೆದ ಸೋಮವಾರ ಸಂಜೆ. ಅಂದು ರಮೇಶ್‌ ಅರವಿಂದ್‌ ಸೇರಿದಂತೆ ಚಿತ್ರತಂಡದವರೆಲ್ಲಾ ಒಟ್ಟಿಗೆ ಸೇರಿ ಚಿತ್ರದ ಬಗ್ಗೆ ಮಾತಾಡಿದರು. ಚಿತ್ರಕ್ಕೆ ಮಾಧ್ಯಮದವರ ಸಹಕಾರ, ಪ್ರೇಕ್ಷಕರ ಆಶೀರ್ವಾದ ಎಲ್ಲವೂ ಬೇಕು ಎಂದು ಹೇಳಿಕೊಂಡರು.

“ಪುಷ್ಪಕ ವಿಮಾನ’ ಶುರುವಾದಾಗಿನಿಂದ ಇದು ರೀಮೇಕ್‌ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ನಿರ್ದೇಶಕ ರವೀಂದ್ರನಾಥ್‌ ಅವರನ್ನು ಕೇಳಿದರೆ, “ಇದು ತಮಿಳಿನ “ದೈವ ತಿರುಮಗಳ್‌’ ಚಿತ್ರದ ರೀಮೇಕ್‌ ಎಂದು ಸುದ್ದಿಯಾಗುತ್ತಿದೆ. ಆದರೆ, ಇದು ರೀಮೇಕ್‌ ಅಲ್ಲ. ತಂದೆ ಮತ್ತು ಮಕ್ಕಳ ಸಂಬಂಧದ ಕುರಿತು ಹಲವು ಚಿತ್ರಗಳು ಬಂದಿವೆ. ಅಂತಹ ಚಿತ್ರಗಳಿಂದ ಸ್ಫೂರ್ತಿ ಪಡೆದಿದ್ದೇವೆ. ವರ್ಲ್ಡ್ ಸಿನಿಮಾದಲ್ಲಿ ಈ ಕುರಿತು ಹಲವು ಸಿನಿಮಾಗಳು ಬಂದಿವೆ. “ಲೈಫ್ ಈಸ್‌ ಬ್ಯೂಟಿಫ‌ುಲ್‌’, “ಮಿರಾಕಲ್‌ ಇನ್‌ ಸೆಲ್‌ ನಂಬರ್‌ 7′, “ಪಸ್ಯೂìಟ್‌ ಆಫ್ ಹ್ಯಾಪಿನೆಸ್‌’ ಮುಂತಾದ ಚಿತ್ರಗಳಿವೆ. ಇವೆಲ್ಲಾ ನಮ್ಮ ಚಿತ್ರಕ್ಕೆ ಸ್ಫೂರ್ತಿ. ಅದರಲ್ಲೂ “ಮಿರಾಕಲ್‌ ಇನ್‌ ಸೆಲ್‌ ನಂಬರ್‌ 7′ ಚಿತ್ರವು ಸ್ವಲಪ ಜಾಸ್ತಿಯೇ ಸ್ಫೂರ್ತಿ. ಅದನ್ನು ಇಲ್ಲಿಯ ನೇಟಿವಿಟಿಗೆ ತಕ್ಕ ಹಾಗೆ ಸಾಕಷ್ಟು ಬದಲಾಯಿಸಿಕೊಂಡಿದ್ದೇವೆ’ ಎನ್ನುತ್ತಾರೆ ರವೀಂದ್ರನಾಥ್‌.

ಚಿತ್ರ ಟೇಕಾಫ್ ಆಗುವುದಕ್ಕೆ ಕಾಯುತ್ತಿರುವುದಾಗಿ ರಚಿತಾ ರಾಮ್‌ ಹೇಳಿದರು. ಈ ಚಿತ್ರ ಅವರಿಗೆ ಬಹಳ ವಿಶೇಷವಾದ ಸಿನಿಮಾವಂತೆ. “ನಾನು ಮೊದಲಿಂದಲೂ ಹೇಳಿಕೊಂಡೇ ಬರುತ್ತಿದ್ದೀನಿ, ಈ ಚಿತ್ರ ಎಲ್ಲಾ ತಂದೆಯರಿಗೂ ಅರ್ಪಣೆ ಎಂದು. ಈ ಚಿತ್ರ ರಮೇಶ್‌ ಅರವಿಂದ್‌ ಅವರ 100ನೇ ಚಿತ್ರ. ಅವರ ದೊಡ್ಡ ಅಭಿಮಾನಿ ನಾನು. ಅವರ ಜೊತೆಗೆ ಕೆಲಸ ಮಾಡಿದ್ದಕ್ಕೆ ಬಹಳ ಖುಷಿಯಿದೆ’ ಎಂದು ಹೇಳಿಕೊಂಡರು. ಇನ್ನು ರಚಿತಾ ರಾಮ್‌ ಅವರ ಚಿಕ್ಕ ವಯಸ್ಸಿನ ಪಾತ್ರವನ್ನು ಮಾಡಿರುವ ಯುವೀನಾ, “ಈ ಚಿತ್ರವನ್ನು ದೊಡ್ಡವರು ಎಂಜಾಯ್‌ ಮಾಡುವುದಷ್ಟೇ ಅಲ್ಲ, ನನ್ನ ವಯಸ್ಸಿನ ಮಕ್ಕಳು ಸಹ ಬಹಳ ಎಂಜಾಯ್‌ ಮಾಡುತ್ತಾರೆ’ ಎಂದು ಹೇಳಿದರು. ಚಿತ್ರಕ್ಕೆ ಭುವನ್‌ ಗೌಡ ಛಾಯಾಗ್ರಹಣ ಮಾಡುತ್ತಿದ್ದಾರೆ.

“ಬಹಳ ಎಮೋಷನಲ್‌ ಆದಂತಹ ಚಿತ್ರ ಇದು. ತುಂಬಾ ತಯಾರಿ ಮಾಡಿಕೊಂಡು ಚಿತ್ರ ಮಾಡಿದ್ದೇವೆ. ಲೈಟಿಂಗ್‌, ಹಿನ್ನೆಲೆ, ಸೆಟ್‌, ಕಲರ್ಸ್‌ … ಎಲ್ಲವನ್ನೂ ಮುಂಚೆಯೇ ತುಂಬಾ ಪ್ಲಾನ್‌ ಮಾಡಿಕೊಂಡು ಈ ಚಿತ್ರ ಮಾಡಿದ್ದೀವಿ’ ಎಂದರು ಭುವನ್‌.

ನಿರ್ಮಾಪಕರಾದ ದೇವೇಂದ್ರ ರೆಡ್ಡಿ, ದೀಪಕ್‌ ಕಿಶೋರ್‌, ದೀಪಕ್‌, ವಿಖ್ಯಾತ್‌, ವಿತರಕ ಮಲ್ಲಿಕಾರ್ಜುನ್‌ ಮುಂತಾದವರು ಚಿತ್ರದ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.