ನೋಟು ಅಪನಗದೀಕರಣದಿಂದ ಆರ್ಥಿಕತೆಗೆ ತಾತ್ಕಾಲಿಕ ಹಿನ್ನಡೆ: ಪ್ರಣವ್‌


Team Udayavani, Jan 5, 2017, 7:37 PM IST

Pranab Video Confenceing-700.jpg

ಹೊಸದಿಲ್ಲಿ : ಕಪ್ಪು ಹಣ ಮತ್ತು ಭ್ರಷ್ಟಾಚಾರವನ್ನು ನಿಗ್ರಹಿಸುವ ನೋಟು ಅಪನಗದೀಕರಣದಿಂದ ತಾತ್ಕಾಲಿಕವಾಗಿ ಆರ್ಥಿಕ ಹಿನ್ನಡೆಗೆ ಕಾರಣವಾದೀತು ಎಂದು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಹೇಳಿದ್ದಾರೆ. 

ದೀರ್ಘಾವಧಿಯ ನಿರೀಕ್ಷಿತ ಅಭಿವೃದ್ಧಿಯನ್ನು ಸಾಧಿಸುವಲ್ಲಿ  ಅನಿವಾರ್ಯವಾಗುವ ಬಡವರ ಸಂಕಷ್ಟಗಳನ್ನು ನಿವಾರಿಸುವ ದಿಶೆಯಲ್ಲಿ ನಾವು ಹೆಚ್ಚಿನ ಎಚ್ಚರ ವಹಿಸಬೇಕು ಎಂದು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ರಾಷ್ಟ್ರಪತಿ ಭವನದಿಂದ ರಾಜ್ಯಪಾಲರು ಹಾಗೂ ಲೆಫ್ಟಿನೆಂಟ್‌ ಗವರ್ನರ್‌ ಗಳಿಗಾಗಿ ನಡೆಸಲಾದ ಹೊಸ ವರ್ಷದ ಸಂದೇಶವನ್ನು ನೀಡುವ  ವಿಡಿಯೋ ಕಾನ್‌ಫ‌ರೆನ್ಸಿಂಗ್‌ನಲ್ಲಿ ಹೇಳಿದರು. 

ಬಡತನ ನಿವಾರಣೆಯ ಯತ್ನದಲ್ಲಿ ಸಶಕ್ತೀಕರಣದಿಂದ ಉದ್ಯಮಶೀಲತೆಗೆ ಒತ್ತು ನೀಡುವ ಉಪಕ್ರಮವನ್ನು ರಾಷ್ಟ್ರಪತಿಗಳು ಶ್ಲಾಘನೆ ಮಾಡಿದರಾದರೂ “ಅಷ್ಟು ದೀರ್ಘ‌ ಕಾಲ ಬಡವರು ಕಾಯಬಲ್ಲರು ಎಂಬ ಬಗ್ಗೆ ನನಗೆ ಖಚಿತವಿಲ್ಲ’ ಎಂದು ಹೇಳಿದರು. 

ಹಸಿವು, ನಿರುದ್ಯೋಗ ಮತುತ ಶೋಷಣೆ ರಹಿತವಾದಭವಿಷ್ಯದೆಡೆಗಿನ ರಾಷ್ಟ್ರದ ನಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತಾಗಲು ಬಡವರಿಗೆ ಈಗಲೇ ಅಗತ್ಯವಿರುವ ನೆರವು, ಸಹಾಯವನ್ನು ನೀಡುವುದು ಅಗತ್ಯ ಎಂದು ಪ್ರಣವ್‌ ಅಭಿಪ್ರಾಯಪಟ್ಟರು. 

ದೇಶದಲ್ಲಿನ ವಿಭಿನ್ನ ಸಮುದಾಯಗಳ ನಡುವೆ ಸದ್ಭಾವನೆ ಮತ್ತು ಸಾಮರಸ್ಯ ಇರುವ ಅಗತ್ಯವನ್ನು ರಾಷ್ಟ್ರಪತಿಗಳು ಒತ್ತಿ ಹೇಳಿದರು. ಮುಕ್ತ, ನಿರ್ಭೀತ  ಮತ್ತು ನ್ಯಾಯೋಚಿತ ಚುನಾವಣೆಗಳನ್ನು ನಡೆಸುವ ಮೂಲಕ ಭಾರತವು ವಿಶ್ವದಲ್ಲೇ ಅತ್ಯಂತ ಸ್ಪಂದನಶೀಲ ಪ್ರಜಾಸತ್ತೆ ಎನಿಸಿಕೊಂಡಿದೆ ಎಂದವರು ಹೇಳಿದರು. 

ಟಾಪ್ ನ್ಯೂಸ್

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.